Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

ಮಂಡ್ಯ: ರೈಲ್ವೆ ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ (Train accident) ಯುವತಿಯೊಬ್ಬರು ದಾರುಣ ಸಾವನ್ನಪ್ಪಿರುವ ಘಟನೆ ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ನಗರದ ಸ್ವರ್ಣಸಂದ್ರ ನಿವಾಸಿ ನರಸಿಂಹ ಮೂರ್ತಿ ಪುತ್ರಿ, ಚಿನ್ನದ ಪದಕ ವಿಜೇತೆ 24 ವರ್ಷದ ಎನ್.ರಮ್ಯಾ ಮೃತ ಯುವತಿ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಬಿಕಾಂನಲ್ಲಿ ಪ್ರಥಮ ಬ್ಯಾಂಕ್ ಹಾಗೂ ಮೈ ಸೂರಿನ ಮಾನಸ ಗಂಗೋತ್ರಿ ಯಲ್ಲಿ ಎಂಕಾಂನಲ್ಲಿ ದ್ವಿತೀಯ ಬ್ಯಾಂಕ್ ಪಡೆದು ಚಿನ್ನದ ಪದಕ ಗಳಿಸಿದ್ದರು.

ಕಳೆದ 10 ತಿಂಗಳಿಂದ ತಂದೆ ನರಸಿಂಹ ಮೂರ್ತಿ ಅವರೊಂದಿಗೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಚಾರ್ಟಡ್ ಅಕೌಂಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ: Kodishree: ಶ್ರಾವಣದಲ್ಲೂ ಕಂಟಕ! ಕೋಡಿಶ್ರೀ ಭಯಾನಕ ಭವಿಷ್ಯ!

ಗುರುವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಲು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಸಹೋದರ ರೈಲ್ವೆ ನಿಲ್ದಾಣಕ್ಕೆ ಮೊದಲು ತಂದೆಯನ್ನು ಬಿಟ್ಟು ನಂತರ ಸಹೋದರಿ ಎನ್.ರಮ್ಯಾ ಅವರನ್ನು ಕರೆತಂದು ಬಿಟ್ಟಿದ್ದಾರೆ. ರೈಲ್ವೆ ಹಳಿ ದಾಟಲು ಹೋದಾಗ ಬೆಂಗಳೂರು ಕಡೆಯಿಂದ ಮೈಸೂರು ಮಾರ್ಗವಾಗಿ ಸಂಚಿರಿಸುತ್ತಿದ್ದ ಹಂಪಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಮೈಸೂರಿನಿಂದ ಬೆಂಗಳೂರು ಕಡೆಗೆ ತೆರಳುವ ವಾರಾಣಸಿ ರೈಲು ನಿಲ್ದಾಣಕ್ಕೆ ಬರಲು ಇನ್ನೂ ಹತ್ತು ನಿಮಿಷ ಕಾಲವಕಾಶವಿತ್ತು. ಅದರೂ ರಮ್ಯಾ ಅತುರಾತುರದಿಂದ ರೈಲು ಹಳಿ (Train accident) ದಾಟಲು ಹೋಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಘಟನೆ ಸಂಭವಿಸುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಮಗಳನ್ನು ಕಳೆದುಕೊಂಡ ಕುಟುಂಬದವರ ರೋಧನೆ ಮುಗಿಲು ಮುಟ್ಟಿತ್ತು. ಘಟನೆಗೆ ಸಂಬಂಧಿಸಿದಂತೆ ಮಂಡ್ಯ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

ಮುದ್ದೇಬಿಹಾಳ : ಬರಗಾಲ ಬಿದ್ದಿದೆ.ಹೊಲದಲ್ಲಿ ಬಿತ್ತಿರುವ ಬೆಳೆಗಳು ಒಣಗಿ ಹೋಗುತ್ತಿವೆ.ದನ-ಕರುಗಳಿಗೆ ಕುಡಿಯಲು ನೀರಿಲ್ಲ. ಹೊಲಕ್ಕೆ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು ಜತನದಿಂದ ಕಾಪಾಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಮಹಿಳಾಪರ ಚಿಂತಕಿ ರಾಜೇಶ್ವರಿ ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 80 ನೇ ಸ್ವಾತಂತ್ರ್ಯೋ್ತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಕ್ಕಳಲ್ಲಿ ದೇಶಾಭಿಮಾನ,ದೇಶಪ್ರೇಮ ಭಾವನೆ ಮೂಡಿಸಲು ಶಿಕ್ಷಕರು ,ಪಾಲಕರು ಶ್ರಮಿಸಬೇಕು ಎಂದರು. ಶಾಲೆಯ ಅಧ್ಯಕ್ಷ ಬಸಮ್ಮ ಸಿದರಡ್ಡಿ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಪೊಲೀಸ  ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಎಎಸ್ಐ ಎಂ.ಪಿ.ಹೋಕಳೆ, ಪೊಲೀಸ ಸಿಬ್ಬಂದಿ ಬಸವರಾಜ ಸಜ್ಜನ ಹಾಗೂ ತಂಗಡಗಿ ಗ್ರಾಮದ ವಿಕಾಸ ಕಮಲಾಪೂರ ಹಾಗೂ ಬಂಡಿನಾಥ ಕಮಲಾಪೂರ ,ರವಿ ಹಾಲ್ಯಾಳ ಅವರನ್ನು ಸನ್ಮಾನಿಸಲಾಯಿತು. ಎಎಸ್ಐ ಎಂ.ಪಿ.ಹೋಕಳೆ ಧ್ವಜಾರೋಹಣ ಮಾಡಿದರು.ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ, ಮುಖಂಡರಾದ ರಾಜುಗೌಡ ಕೊಂಗಿ,ಸ್ನೇಹಸಿರಿ ಸೇವಾ ಸಂಘದ ಸಂಚಾಲಕ ಬಸವರಾಜ ನಿಡಗುಂದಿ ಸೇರಿದಂತೆ