Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

ಮಂಡ್ಯ: ರೈಲ್ವೆ ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ (Train accident) ಯುವತಿಯೊಬ್ಬರು ದಾರುಣ ಸಾವನ್ನಪ್ಪಿರುವ ಘಟನೆ ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ನಗರದ ಸ್ವರ್ಣಸಂದ್ರ ನಿವಾಸಿ ನರಸಿಂಹ ಮೂರ್ತಿ ಪುತ್ರಿ, ಚಿನ್ನದ ಪದಕ ವಿಜೇತೆ 24 ವರ್ಷದ ಎನ್.ರಮ್ಯಾ ಮೃತ ಯುವತಿ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಬಿಕಾಂನಲ್ಲಿ ಪ್ರಥಮ ಬ್ಯಾಂಕ್ ಹಾಗೂ ಮೈ ಸೂರಿನ ಮಾನಸ ಗಂಗೋತ್ರಿ ಯಲ್ಲಿ ಎಂಕಾಂನಲ್ಲಿ ದ್ವಿತೀಯ ಬ್ಯಾಂಕ್ ಪಡೆದು ಚಿನ್ನದ ಪದಕ ಗಳಿಸಿದ್ದರು.

ಕಳೆದ 10 ತಿಂಗಳಿಂದ ತಂದೆ ನರಸಿಂಹ ಮೂರ್ತಿ ಅವರೊಂದಿಗೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಚಾರ್ಟಡ್ ಅಕೌಂಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ: Kodishree: ಶ್ರಾವಣದಲ್ಲೂ ಕಂಟಕ! ಕೋಡಿಶ್ರೀ ಭಯಾನಕ ಭವಿಷ್ಯ!

ಗುರುವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಲು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಸಹೋದರ ರೈಲ್ವೆ ನಿಲ್ದಾಣಕ್ಕೆ ಮೊದಲು ತಂದೆಯನ್ನು ಬಿಟ್ಟು ನಂತರ ಸಹೋದರಿ ಎನ್.ರಮ್ಯಾ ಅವರನ್ನು ಕರೆತಂದು ಬಿಟ್ಟಿದ್ದಾರೆ. ರೈಲ್ವೆ ಹಳಿ ದಾಟಲು ಹೋದಾಗ ಬೆಂಗಳೂರು ಕಡೆಯಿಂದ ಮೈಸೂರು ಮಾರ್ಗವಾಗಿ ಸಂಚಿರಿಸುತ್ತಿದ್ದ ಹಂಪಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಮೈಸೂರಿನಿಂದ ಬೆಂಗಳೂರು ಕಡೆಗೆ ತೆರಳುವ ವಾರಾಣಸಿ ರೈಲು ನಿಲ್ದಾಣಕ್ಕೆ ಬರಲು ಇನ್ನೂ ಹತ್ತು ನಿಮಿಷ ಕಾಲವಕಾಶವಿತ್ತು. ಅದರೂ ರಮ್ಯಾ ಅತುರಾತುರದಿಂದ ರೈಲು ಹಳಿ (Train accident) ದಾಟಲು ಹೋಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಘಟನೆ ಸಂಭವಿಸುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಮಗಳನ್ನು ಕಳೆದುಕೊಂಡ ಕುಟುಂಬದವರ ರೋಧನೆ ಮುಗಿಲು ಮುಟ್ಟಿತ್ತು. ಘಟನೆಗೆ ಸಂಬಂಧಿಸಿದಂತೆ ಮಂಡ್ಯ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ