Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

ಮಂಡ್ಯ: ರೈಲ್ವೆ ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ (Train accident) ಯುವತಿಯೊಬ್ಬರು ದಾರುಣ ಸಾವನ್ನಪ್ಪಿರುವ ಘಟನೆ ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ನಗರದ ಸ್ವರ್ಣಸಂದ್ರ ನಿವಾಸಿ ನರಸಿಂಹ ಮೂರ್ತಿ ಪುತ್ರಿ, ಚಿನ್ನದ ಪದಕ ವಿಜೇತೆ 24 ವರ್ಷದ ಎನ್.ರಮ್ಯಾ ಮೃತ ಯುವತಿ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಬಿಕಾಂನಲ್ಲಿ ಪ್ರಥಮ ಬ್ಯಾಂಕ್ ಹಾಗೂ ಮೈ ಸೂರಿನ ಮಾನಸ ಗಂಗೋತ್ರಿ ಯಲ್ಲಿ ಎಂಕಾಂನಲ್ಲಿ ದ್ವಿತೀಯ ಬ್ಯಾಂಕ್ ಪಡೆದು ಚಿನ್ನದ ಪದಕ ಗಳಿಸಿದ್ದರು.

ಕಳೆದ 10 ತಿಂಗಳಿಂದ ತಂದೆ ನರಸಿಂಹ ಮೂರ್ತಿ ಅವರೊಂದಿಗೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಚಾರ್ಟಡ್ ಅಕೌಂಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ: Kodishree: ಶ್ರಾವಣದಲ್ಲೂ ಕಂಟಕ! ಕೋಡಿಶ್ರೀ ಭಯಾನಕ ಭವಿಷ್ಯ!

ಗುರುವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಲು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಸಹೋದರ ರೈಲ್ವೆ ನಿಲ್ದಾಣಕ್ಕೆ ಮೊದಲು ತಂದೆಯನ್ನು ಬಿಟ್ಟು ನಂತರ ಸಹೋದರಿ ಎನ್.ರಮ್ಯಾ ಅವರನ್ನು ಕರೆತಂದು ಬಿಟ್ಟಿದ್ದಾರೆ. ರೈಲ್ವೆ ಹಳಿ ದಾಟಲು ಹೋದಾಗ ಬೆಂಗಳೂರು ಕಡೆಯಿಂದ ಮೈಸೂರು ಮಾರ್ಗವಾಗಿ ಸಂಚಿರಿಸುತ್ತಿದ್ದ ಹಂಪಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಮೈಸೂರಿನಿಂದ ಬೆಂಗಳೂರು ಕಡೆಗೆ ತೆರಳುವ ವಾರಾಣಸಿ ರೈಲು ನಿಲ್ದಾಣಕ್ಕೆ ಬರಲು ಇನ್ನೂ ಹತ್ತು ನಿಮಿಷ ಕಾಲವಕಾಶವಿತ್ತು. ಅದರೂ ರಮ್ಯಾ ಅತುರಾತುರದಿಂದ ರೈಲು ಹಳಿ (Train accident) ದಾಟಲು ಹೋಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಘಟನೆ ಸಂಭವಿಸುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಮಗಳನ್ನು ಕಳೆದುಕೊಂಡ ಕುಟುಂಬದವರ ರೋಧನೆ ಮುಗಿಲು ಮುಟ್ಟಿತ್ತು. ಘಟನೆಗೆ ಸಂಬಂಧಿಸಿದಂತೆ ಮಂಡ್ಯ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ತಮಗೆ ಸಾಷ್ಟಾಂಗ ಹಾಕಿರುವುದಾಗಿ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ಶಾಸಕ ನಾಡಗೌಡರು

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಮತಕ್ಷೇತ್ರದ ತಾಳಿಕೋಟಿ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ತಮ್ಮ ಅವಧಿಯಲ್ಲಿ ಜಾಗೆ ಗುರುತಿಸುವುದನ್ನು

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.20 ರಂದು

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಳವಾರ ಕೆಲಕಾಲ ಸುರಿದ ಭಾರೀ ಬಿರುಗಾಳಿ,ಆಲಿಕಲ್ಲು ಮಳೆ ರೈತರಿಗೆ ನಷ್ಟವನ್ನುಂಟು ಮಾಡಿದ್ದು ಫಸಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬರಸಿಡಿಲು ಅಪ್ಪಳಿಸಿದಂತಾಗಿದೆ. ತಾಲ್ಲೂಕಿನ ಆಲೂರ ಗ್ರಾಮದಲ್ಲಿ ಬಿರುಗಾಳಿ,ಮಳೆಗೆ ಶಿವಪುತ್ರಪ್ಪ ಗೂಳಿ ಎಂಬುವರ ಹೊಲದಲ್ಲಿ ಬೆಳೆದಿದ್ದ ಐದು ಎಕರೆ ದ್ರಾಕ್ಷಿ ಬೆಳೆ ಹಾನಿಯಾಗಿದೆ.ಇನ್ನೆನ್ನು ವಾರದಲ್ಲಿ ದ್ರಾಕ್ಷಿ ಕಟಾವು ಮಾಡಬೇಕಿದ್ದ ರೈತನಿಗೆ ಈ ಬಿರುಗಾಳಿ,ಮಳೆ ಬರಸಿಡಿಲಿನಂತೆ ಬಂದೆರಗಿದ್ದು ದ್ರಾಕ್ಷಿ ಗೊನೆಗಳು,ಹಣ್ಣುಗಳು ಉದುರಿ ಬಿದ್ದಿವೆ.ಇದರೊಟ್ಟಿಗೆ ಚಿಕ್ಕು ಗಿಡಗಳಿಂದ

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟ್ರಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು ಏತನ್ಮದ್ಯೆ ವಿಜಯಪುರ ಜಿಲ್ಲಾಡಳಿತದಿಂದ ಗ್ರಾಹಕರ ಅನುಕೂಲಕ್ಕಾಗಿ ಹೆಲ್ಪಲೈನ್ ಆರಂಭಿಸಲಾಗಿದೆ. ಸಿಲಿಂಡರ್ ಬುಕ್ ಮಾಡಿದ ನಂತರ ಎದುರಾಗುವ ಸಮಸ್ಯೆಗಳಿಗೆ ಸಂಪರ್ಕಿಸುವAತೆ ವಿಜಯಪುರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಸಿಲಿಂಡರ್ ಪೂರೈಕೆ,ವಿತರಣೆಯಲ್ಲಿ ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ.ಗ್ರಾಹಕರು ಆತಂಕಗೊAಡು ಏಜೆನ್ಸಿಗಳ ಮುಂದೆ ಸರದಿಯಲ್ಲಿ ನಿಲ್ಲುವುದು ಬೇಡ