Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

ಮಂಡ್ಯ: ರೈಲ್ವೆ ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ (Train accident) ಯುವತಿಯೊಬ್ಬರು ದಾರುಣ ಸಾವನ್ನಪ್ಪಿರುವ ಘಟನೆ ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ನಗರದ ಸ್ವರ್ಣಸಂದ್ರ ನಿವಾಸಿ ನರಸಿಂಹ ಮೂರ್ತಿ ಪುತ್ರಿ, ಚಿನ್ನದ ಪದಕ ವಿಜೇತೆ 24 ವರ್ಷದ ಎನ್.ರಮ್ಯಾ ಮೃತ ಯುವತಿ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಬಿಕಾಂನಲ್ಲಿ ಪ್ರಥಮ ಬ್ಯಾಂಕ್ ಹಾಗೂ ಮೈ ಸೂರಿನ ಮಾನಸ ಗಂಗೋತ್ರಿ ಯಲ್ಲಿ ಎಂಕಾಂನಲ್ಲಿ ದ್ವಿತೀಯ ಬ್ಯಾಂಕ್ ಪಡೆದು ಚಿನ್ನದ ಪದಕ ಗಳಿಸಿದ್ದರು.

ಕಳೆದ 10 ತಿಂಗಳಿಂದ ತಂದೆ ನರಸಿಂಹ ಮೂರ್ತಿ ಅವರೊಂದಿಗೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಚಾರ್ಟಡ್ ಅಕೌಂಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ: Kodishree: ಶ್ರಾವಣದಲ್ಲೂ ಕಂಟಕ! ಕೋಡಿಶ್ರೀ ಭಯಾನಕ ಭವಿಷ್ಯ!

ಗುರುವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಲು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಸಹೋದರ ರೈಲ್ವೆ ನಿಲ್ದಾಣಕ್ಕೆ ಮೊದಲು ತಂದೆಯನ್ನು ಬಿಟ್ಟು ನಂತರ ಸಹೋದರಿ ಎನ್.ರಮ್ಯಾ ಅವರನ್ನು ಕರೆತಂದು ಬಿಟ್ಟಿದ್ದಾರೆ. ರೈಲ್ವೆ ಹಳಿ ದಾಟಲು ಹೋದಾಗ ಬೆಂಗಳೂರು ಕಡೆಯಿಂದ ಮೈಸೂರು ಮಾರ್ಗವಾಗಿ ಸಂಚಿರಿಸುತ್ತಿದ್ದ ಹಂಪಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಮೈಸೂರಿನಿಂದ ಬೆಂಗಳೂರು ಕಡೆಗೆ ತೆರಳುವ ವಾರಾಣಸಿ ರೈಲು ನಿಲ್ದಾಣಕ್ಕೆ ಬರಲು ಇನ್ನೂ ಹತ್ತು ನಿಮಿಷ ಕಾಲವಕಾಶವಿತ್ತು. ಅದರೂ ರಮ್ಯಾ ಅತುರಾತುರದಿಂದ ರೈಲು ಹಳಿ (Train accident) ದಾಟಲು ಹೋಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಘಟನೆ ಸಂಭವಿಸುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಮಗಳನ್ನು ಕಳೆದುಕೊಂಡ ಕುಟುಂಬದವರ ರೋಧನೆ ಮುಗಿಲು ಮುಟ್ಟಿತ್ತು. ಘಟನೆಗೆ ಸಂಬಂಧಿಸಿದಂತೆ ಮಂಡ್ಯ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಮುದ್ದೇಬಿಹಾಳ : ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿದ್ದು ಭಾನುವಾರ ಪಿಲೇಕೆಮ್ಮ ನಗರದ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ  ಉತ್ತಮ ಪ್ರತಿಕ್ರಿಯೆ;                                                                                ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್ ಕುಂಬಾರವಾಡಿ ಹಾಗೂ ಬಷಿರಅಹ್ಮದ್ ಕಡದರಾಳ ಅವರ ಕುಟುಂಬಕ್ಕೆ ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಆರ್ಥಿಕ ನೆರವು ನೀಡಿದರು. ಇಬ್ಬರು ಸಂತ್ರಸ್ಥರ ಕುಟುಂಬಕ್ಕೆ ಭೇಟಿ ಮಾಡಿದ ಅಧ್ಯಕ್ಷ ಅಸ್ಕಿ ಅವರು ಸಾಂತ್ವನ ಹೇಳಿ ಒಂದು ಲಕ್ಷ ರೂ. ಧನ ಸಹಾಯ ಮಾಡಿದರು. ಈ ಸಮಯದಲ್ಲಿ ತಾಳಿಕೋಟಿ ಧಾರ್ಮಿಕ ಮುಖಂಡ ಸೈಯದ ಶಕೀಲಅಹ್ಮದ್ ಖಾಜಿ, ಗ್ಯಾರಂಟಿ ಸಮಿತಿ

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದ ವೇಳೆ ಅನುದಾನ ದುರುಪಯೋಗದ ಆರೋಪದ ಮೇಲೆ ಅಧಿಕಾರಿ ವಿಜಯಾ ಮುದಗಲ್ ಅವರನ್ನು ಅಮಾನತುಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ ಆದೇಶಿಸಿದ್ದಾರೆ. ಪ್ರಕರಣವೇನು : ಸನ್ 2019-20 ರಿಂದ 2021-22ನೇ ಅವಧಿಯ ಯರಝರಿ ಗ್ರಾಮ ಪಂಚಾಯಿತಿ ವಿಜಯಪುರ ಜಿಲ್ಲೆಯಲ್ಲಿ ಎಸ್.ಸಿ/ಎಸ್ಟಿ ಜನಾಂಗದ ಅಭಿವೃದ್ಧಿಗಾಗಿ ಮೀಸಲಿರಿಸಿದ