Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

ಮಂಡ್ಯ: ರೈಲ್ವೆ ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ (Train accident) ಯುವತಿಯೊಬ್ಬರು ದಾರುಣ ಸಾವನ್ನಪ್ಪಿರುವ ಘಟನೆ ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ನಗರದ ಸ್ವರ್ಣಸಂದ್ರ ನಿವಾಸಿ ನರಸಿಂಹ ಮೂರ್ತಿ ಪುತ್ರಿ, ಚಿನ್ನದ ಪದಕ ವಿಜೇತೆ 24 ವರ್ಷದ ಎನ್.ರಮ್ಯಾ ಮೃತ ಯುವತಿ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಬಿಕಾಂನಲ್ಲಿ ಪ್ರಥಮ ಬ್ಯಾಂಕ್ ಹಾಗೂ ಮೈ ಸೂರಿನ ಮಾನಸ ಗಂಗೋತ್ರಿ ಯಲ್ಲಿ ಎಂಕಾಂನಲ್ಲಿ ದ್ವಿತೀಯ ಬ್ಯಾಂಕ್ ಪಡೆದು ಚಿನ್ನದ ಪದಕ ಗಳಿಸಿದ್ದರು.

ಕಳೆದ 10 ತಿಂಗಳಿಂದ ತಂದೆ ನರಸಿಂಹ ಮೂರ್ತಿ ಅವರೊಂದಿಗೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಚಾರ್ಟಡ್ ಅಕೌಂಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ: Kodishree: ಶ್ರಾವಣದಲ್ಲೂ ಕಂಟಕ! ಕೋಡಿಶ್ರೀ ಭಯಾನಕ ಭವಿಷ್ಯ!

ಗುರುವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಲು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಸಹೋದರ ರೈಲ್ವೆ ನಿಲ್ದಾಣಕ್ಕೆ ಮೊದಲು ತಂದೆಯನ್ನು ಬಿಟ್ಟು ನಂತರ ಸಹೋದರಿ ಎನ್.ರಮ್ಯಾ ಅವರನ್ನು ಕರೆತಂದು ಬಿಟ್ಟಿದ್ದಾರೆ. ರೈಲ್ವೆ ಹಳಿ ದಾಟಲು ಹೋದಾಗ ಬೆಂಗಳೂರು ಕಡೆಯಿಂದ ಮೈಸೂರು ಮಾರ್ಗವಾಗಿ ಸಂಚಿರಿಸುತ್ತಿದ್ದ ಹಂಪಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಮೈಸೂರಿನಿಂದ ಬೆಂಗಳೂರು ಕಡೆಗೆ ತೆರಳುವ ವಾರಾಣಸಿ ರೈಲು ನಿಲ್ದಾಣಕ್ಕೆ ಬರಲು ಇನ್ನೂ ಹತ್ತು ನಿಮಿಷ ಕಾಲವಕಾಶವಿತ್ತು. ಅದರೂ ರಮ್ಯಾ ಅತುರಾತುರದಿಂದ ರೈಲು ಹಳಿ (Train accident) ದಾಟಲು ಹೋಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಘಟನೆ ಸಂಭವಿಸುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಮಗಳನ್ನು ಕಳೆದುಕೊಂಡ ಕುಟುಂಬದವರ ರೋಧನೆ ಮುಗಿಲು ಮುಟ್ಟಿತ್ತು. ಘಟನೆಗೆ ಸಂಬಂಧಿಸಿದಂತೆ ಮಂಡ್ಯ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ:                    ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಫೆ.14 ರಂದು ನೂತನ ಸ್ಕೂಲ್‌ ಕಟ್ಟಡದ ಉದ್ಘಾಟನೆ: ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ

ಮುದ್ದೇಬಿಹಾಳ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಶಾಲೆಯ ಪ್ರಥಮ ವಾರ್ಷಿಕೋತ್ಸವ ಹಾಗೂ

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿರುವ

ಈ ಬಸ್ ಬೆಲೆಯೇ 39 ಲಕ್ಷ ರೂ.!!                            ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ ಅವರು ಚಾಲನೆ ನೀಡಿದ್ದು ನಗರ ಸಾರಿಗೆಯ ಬಸ್ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ಪ್ರಯಾಣಿಕರ ಸ್ನೇಹಿಯಾಗಿರು ಈ ಹೈಟೆಕ್ ಬಸ್‌ನಲ್ಲಿ ನಾಲ್ಕು ಕಡೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.ನಿಲುಗಡೆ ಸಮಯದಲ್ಲಿ ಪ್ರಯಾಣಿಕರು ಹತ್ತಿದ ಬಳಿಕ ಬಾಗಿಲು ಸ್ವಯಂಚಾಲಿತವಾಗಿ ಮುಚ್ಚಿದ ನಂತರವೇ ಬಸ್ ಮುಂದೆ ಸಾಗಲಿದೆ.ಅಲ್ಲದೇ ಆಯಾ ನಿಲ್ದಾಣಗಳ ಹೆಸರುಗಳನ್ನು ಮರ್ಕ್ಯೂರಿ ಲೈಟಿಂಗ್ ವ್ಯವಸ್ಥೆ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಆಚರಣೆ ಕುರಿತು ಸಮಾಜದ ಶ್ರೀ ಅಂಬಾಭವಾನಿ ಮಂದಿರದ ಆವರಣದಲ್ಲಿ ಶುಕ್ರವಾರರಂದು ಜರುಗಿದ ಪೂರ್ವಭಾವಿ ಸಭೆಯಲ್ಲಿ ಕೆಳಗೆ ನೀಡಿದಂತ ವಿವರಣೆಯಂತೆ ನಿರ್ಧರಿಸಲಾಯಿತು. ಅಂದು ಬೆಳಗಿನ ಜಾವ ಶ್ರೀ ಅಂಬಾಭವಾನಿ ಮೂರ್ತಿಗೆ ಮಹಾಭಿಷೇಕ, ಪುಷ್ಪಾರ್ಚನೆ, ಮಹಾಮಂಗಳಾರತಿ ಕಾರ್ಯಕ್ರಮ ಜರುಗುವದಲ್ಲದೇ ನಂತರ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ಕುರಿತು ಬಜಾರ್ ಶ್ರೀ ಹನುಮಾನ್