Training for Competitive Examination: Dharwad Model Training Begins

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ : ಧಾರವಾಡ ಮಾದರಿ ತರಬೇತಿ ಆರಂಭ

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ : ಧಾರವಾಡ ಮಾದರಿ ತರಬೇತಿ ಆರಂಭ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ರೈತರೇ ಕೊಬ್ಬಿದ ದನಗಳನ್ನು ಪಳಗಿಸಿ ಕೃಷಿ ಚಟುವಟಿಕೆಗೆ ಬಳಸುತ್ತಾರೆ. ಇನ್ನು ಕಲಿತವರನ್ನು ಸುಧಾರಿಸುವ ಕಾರ್ಯ ಶಿಕ್ಷಕರಿಂದ ಏಕೆ ಸಾಧ್ಯವಿಲ್ಲ ಎಂಬುದನ್ನು ನಾವೆಲ್ಲ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಎಚ್.ಬಿ.ವಾಲೀಕಾರ ಹೇಳಿದರು.

ಪಟ್ಟಣದ ಅಭ್ಯುದಯ ಪದವಿ ಕಾಲೇಜಿನಲ್ಲಿ ಸಂಯೋಜಿತ ಪದವಿಗಳ ಕುರಿತ ಎರಡು ದಿನದ ಕಾರ್ಯಾಗಾರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಡಿಗ್ರಿಗಳೆಂದರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರವೇಶ ಪತ್ರದಂತಿದ್ದು ನಾವೆಲ್ಲ ಶಿಕ್ಷಕರ ಬೆನ್ನು ಚಪ್ಪರಿಸುವ ಕೆಲಸ ಮಾಡಬೇಕು. ಮುದ್ದೇಬಿಹಾಳದ ಅಭ್ಯುದಯ ಪದವಿ ಕಾಲೇಜಿನಲ್ಲಿ ಧಾರವಾಡದಲ್ಲಿ ನೀಡುವ ಸ್ಪರ್ಧಾತ್ಮಕ ತರಬೇತಿ ಕೇಂದ್ರದಿಂದ ನೀಡಲಾಗುವ ತರಬೇತಿಯನ್ನು ಹೈಬ್ರಿಡ್ ಕ್ಲಾಸ್ ರೂಂ ಮೂಲಕ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

ಅಭ್ಯುದಯ ಪದವಿ ಕಾಲೇಜಿನ ಕಾರ್ಯದರ್ಶಿ ಎಂ.ಎನ್.ಮದರಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಬಹುದೊಡ್ಡ ಹೆಸರು ಮಾಡಿರುವ ಮಾಜಿ ಕುಲಪತಿಗಳಾದ ಎಚ್.ಬಿ.ವಾಲೀಕಾರ ಅವರ ಮಾರ್ಗದರ್ಶನದಲ್ಲಿ ಐಎಎಸ್, ಕೆಎಎಸ್, ಪಿಎಸ್‌ಐ, ಪಿಡಿಒ ಮತ್ತಿತರರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

ಧಾರವಾಡ ಸ್ಪರ್ಧಾ ಜೀನಿಯಸ್ ಅಕಾಡೆಮಿ ಸಿದ್ದಣ್ಣ ದಳವಾಯಿ ಉಪನ್ಯಾಸ ನೀಡಿ, ರಾಜ್ಯದಲ್ಲಿ 2.80 ಲಕ್ಷ ಹುದ್ದೆಗಳು ಖಾಲಿ ಇದ್ದು 80 ಸಾವಿರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಇನ್ನುಳಿದ ಹುದ್ದೆಗಳ ನೇಮಕಕ್ಕೆ ಸದ್ಯಕ್ಕೆ ರಾಜ್ಯ ಸರ್ಕಾರದಿಂದ ತಡೆ ನೀಡಿದ್ದು ನ್ಯಾ. ನಾಗಮೋಹನದಾಸ್ ವರದಿ ಬಳಿಕ ನೇಮಕಾತಿ ಅಧಿಸೂಚನೆ ಹೊರಡಿಸುವುದಾಗಿ ತಿಳಿಸಿದ್ದಾರೆ. ಎಲ್ಲರಿಗೂ ಸರ್ಕಾರಿ ಹುದ್ದೆ ದೊರೆಯುವುದಿಲ್ಲ.
ಆದರೆ ಪರಿಶ್ರಮದಿಂದ ಪ್ರಯತ್ನಿಸಿದವರಿಗೆ ಸರ್ಕಾರಿ ಹುದ್ದೆ ದೊರೆಯುವುದು ಕಷ್ಟವೇನಲ್ಲ. ಮುಂಬರುವ ದಿನಗಳಲ್ಲಿ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪರ್ವ ಆರಂಭವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಆರ್. ಎಸ್. ಜಡಿ, ಪಿಯು ಕಾಲೇಜಿನ ಪ್ರಾಚಾರ್ಯ ಎಂ. ಎಂ. ಧನ್ನೂರ, ಧಾರವಾಡ ಎಂ. ಡಿ. ಆರ್. ಎಸ್‌ನ ಶೇಖಪ್ಪ ಮೇಟಿ ಇದ್ದರು. ಬಿ. ಜಿ. ಬಿರಾದಾರ ನಿರೂಪಿಸಿದರು. ಕಾರ್ಯಕ್ರಮದಲ್ಲಿ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚಿನ ಅಂಕ ಗಳಿಸಿದ ಶರಣಬಸ್ಸು ವಣಕಿಹಾಳ, ಐಶ್ವರ್ಯಾ ಪೂಜಾರಿ,ವಾಣಿಜ್ಯ ವಿಭಾಗದಲ್ಲಿ ಕಾವ್ಯಶ್ರೀ ಬಿರಾದಾರ, ಬಿ.ಎಸ್ಸಿ ಅಗ್ರಿ ಸೀಟು ಪಡೆದುಕೊಂಡ ಮಾಣಿಕ್ಯ ಲಮಾಣಿ, ರತಿಕಾಂತ ಆಕಳವಾಡಿ, ನೀಟ್ ಪರೀಕ್ಷೆಯಲ್ಲಿ 627ನೇ ರ‍್ಯಾಂಕ್ ಪಡೆದ ಮಹಾದೇವಿ ಢವಳಗಿ ಅವರನ್ನು ಸನ್ಮಾನಿಸಲಾಯಿತು.

ಈ ಭಾಗದಲ್ಲಿ ಮಾತೋಶ್ರೀ ಗಂಗಮ್ಮ ಚಿನಿವಾರ ಅವರು ಶಿಕ್ಷಣಕ್ಕೆ ಜಮೀನು ದಾನ ಮಾಡಿದ್ದರಿಂದಲೇ ನಮ್ಮಂತಹ ಸಾವಿರಾರು ಜನ ಉನ್ನತ ಹುದ್ದೆಗಳಲ್ಲಿ ಏರುವಂತಾಯಿತು. ಚಿನಿವಾರ ಗಂಗಮ್ಮನವರು ಯಾರ ಬಳಿಯೂ ಕೈಯೊಡ್ಡದೇ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ತಮ್ಮ ಕೊಡುಗೆ ನೀಡಿದ್ದಾರೆ. ಅದರಂತೆ ಈಗ ಮಲ್ಲಿಕಾರ್ಜುನ ಮದರಿ ಯಾರ ಬಳಿಯೂ ಕೈಯೊಡ್ಡದೇ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ತೋರುತ್ತಿರುವುದು ಈ ಭಾಗದ ಬಡವರಿಗೆ ಬೆಳಕಾಗಿದೆ.
–ಎಚ್.ಬಿ.ವಾಲೀಕಾರ, ಕವಿವಿ ಮಾಜಿ ಕುಲಪತಿ

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ