Training for Competitive Examination: Dharwad Model Training Begins

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ : ಧಾರವಾಡ ಮಾದರಿ ತರಬೇತಿ ಆರಂಭ

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ : ಧಾರವಾಡ ಮಾದರಿ ತರಬೇತಿ ಆರಂಭ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ರೈತರೇ ಕೊಬ್ಬಿದ ದನಗಳನ್ನು ಪಳಗಿಸಿ ಕೃಷಿ ಚಟುವಟಿಕೆಗೆ ಬಳಸುತ್ತಾರೆ. ಇನ್ನು ಕಲಿತವರನ್ನು ಸುಧಾರಿಸುವ ಕಾರ್ಯ ಶಿಕ್ಷಕರಿಂದ ಏಕೆ ಸಾಧ್ಯವಿಲ್ಲ ಎಂಬುದನ್ನು ನಾವೆಲ್ಲ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಎಚ್.ಬಿ.ವಾಲೀಕಾರ ಹೇಳಿದರು.

ಪಟ್ಟಣದ ಅಭ್ಯುದಯ ಪದವಿ ಕಾಲೇಜಿನಲ್ಲಿ ಸಂಯೋಜಿತ ಪದವಿಗಳ ಕುರಿತ ಎರಡು ದಿನದ ಕಾರ್ಯಾಗಾರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಡಿಗ್ರಿಗಳೆಂದರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರವೇಶ ಪತ್ರದಂತಿದ್ದು ನಾವೆಲ್ಲ ಶಿಕ್ಷಕರ ಬೆನ್ನು ಚಪ್ಪರಿಸುವ ಕೆಲಸ ಮಾಡಬೇಕು. ಮುದ್ದೇಬಿಹಾಳದ ಅಭ್ಯುದಯ ಪದವಿ ಕಾಲೇಜಿನಲ್ಲಿ ಧಾರವಾಡದಲ್ಲಿ ನೀಡುವ ಸ್ಪರ್ಧಾತ್ಮಕ ತರಬೇತಿ ಕೇಂದ್ರದಿಂದ ನೀಡಲಾಗುವ ತರಬೇತಿಯನ್ನು ಹೈಬ್ರಿಡ್ ಕ್ಲಾಸ್ ರೂಂ ಮೂಲಕ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

ಅಭ್ಯುದಯ ಪದವಿ ಕಾಲೇಜಿನ ಕಾರ್ಯದರ್ಶಿ ಎಂ.ಎನ್.ಮದರಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಬಹುದೊಡ್ಡ ಹೆಸರು ಮಾಡಿರುವ ಮಾಜಿ ಕುಲಪತಿಗಳಾದ ಎಚ್.ಬಿ.ವಾಲೀಕಾರ ಅವರ ಮಾರ್ಗದರ್ಶನದಲ್ಲಿ ಐಎಎಸ್, ಕೆಎಎಸ್, ಪಿಎಸ್‌ಐ, ಪಿಡಿಒ ಮತ್ತಿತರರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

ಧಾರವಾಡ ಸ್ಪರ್ಧಾ ಜೀನಿಯಸ್ ಅಕಾಡೆಮಿ ಸಿದ್ದಣ್ಣ ದಳವಾಯಿ ಉಪನ್ಯಾಸ ನೀಡಿ, ರಾಜ್ಯದಲ್ಲಿ 2.80 ಲಕ್ಷ ಹುದ್ದೆಗಳು ಖಾಲಿ ಇದ್ದು 80 ಸಾವಿರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಇನ್ನುಳಿದ ಹುದ್ದೆಗಳ ನೇಮಕಕ್ಕೆ ಸದ್ಯಕ್ಕೆ ರಾಜ್ಯ ಸರ್ಕಾರದಿಂದ ತಡೆ ನೀಡಿದ್ದು ನ್ಯಾ. ನಾಗಮೋಹನದಾಸ್ ವರದಿ ಬಳಿಕ ನೇಮಕಾತಿ ಅಧಿಸೂಚನೆ ಹೊರಡಿಸುವುದಾಗಿ ತಿಳಿಸಿದ್ದಾರೆ. ಎಲ್ಲರಿಗೂ ಸರ್ಕಾರಿ ಹುದ್ದೆ ದೊರೆಯುವುದಿಲ್ಲ.
ಆದರೆ ಪರಿಶ್ರಮದಿಂದ ಪ್ರಯತ್ನಿಸಿದವರಿಗೆ ಸರ್ಕಾರಿ ಹುದ್ದೆ ದೊರೆಯುವುದು ಕಷ್ಟವೇನಲ್ಲ. ಮುಂಬರುವ ದಿನಗಳಲ್ಲಿ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪರ್ವ ಆರಂಭವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಆರ್. ಎಸ್. ಜಡಿ, ಪಿಯು ಕಾಲೇಜಿನ ಪ್ರಾಚಾರ್ಯ ಎಂ. ಎಂ. ಧನ್ನೂರ, ಧಾರವಾಡ ಎಂ. ಡಿ. ಆರ್. ಎಸ್‌ನ ಶೇಖಪ್ಪ ಮೇಟಿ ಇದ್ದರು. ಬಿ. ಜಿ. ಬಿರಾದಾರ ನಿರೂಪಿಸಿದರು. ಕಾರ್ಯಕ್ರಮದಲ್ಲಿ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚಿನ ಅಂಕ ಗಳಿಸಿದ ಶರಣಬಸ್ಸು ವಣಕಿಹಾಳ, ಐಶ್ವರ್ಯಾ ಪೂಜಾರಿ,ವಾಣಿಜ್ಯ ವಿಭಾಗದಲ್ಲಿ ಕಾವ್ಯಶ್ರೀ ಬಿರಾದಾರ, ಬಿ.ಎಸ್ಸಿ ಅಗ್ರಿ ಸೀಟು ಪಡೆದುಕೊಂಡ ಮಾಣಿಕ್ಯ ಲಮಾಣಿ, ರತಿಕಾಂತ ಆಕಳವಾಡಿ, ನೀಟ್ ಪರೀಕ್ಷೆಯಲ್ಲಿ 627ನೇ ರ‍್ಯಾಂಕ್ ಪಡೆದ ಮಹಾದೇವಿ ಢವಳಗಿ ಅವರನ್ನು ಸನ್ಮಾನಿಸಲಾಯಿತು.

ಈ ಭಾಗದಲ್ಲಿ ಮಾತೋಶ್ರೀ ಗಂಗಮ್ಮ ಚಿನಿವಾರ ಅವರು ಶಿಕ್ಷಣಕ್ಕೆ ಜಮೀನು ದಾನ ಮಾಡಿದ್ದರಿಂದಲೇ ನಮ್ಮಂತಹ ಸಾವಿರಾರು ಜನ ಉನ್ನತ ಹುದ್ದೆಗಳಲ್ಲಿ ಏರುವಂತಾಯಿತು. ಚಿನಿವಾರ ಗಂಗಮ್ಮನವರು ಯಾರ ಬಳಿಯೂ ಕೈಯೊಡ್ಡದೇ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ತಮ್ಮ ಕೊಡುಗೆ ನೀಡಿದ್ದಾರೆ. ಅದರಂತೆ ಈಗ ಮಲ್ಲಿಕಾರ್ಜುನ ಮದರಿ ಯಾರ ಬಳಿಯೂ ಕೈಯೊಡ್ಡದೇ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ತೋರುತ್ತಿರುವುದು ಈ ಭಾಗದ ಬಡವರಿಗೆ ಬೆಳಕಾಗಿದೆ.
–ಎಚ್.ಬಿ.ವಾಲೀಕಾರ, ಕವಿವಿ ಮಾಜಿ ಕುಲಪತಿ

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ