ಪಿಕೆಪಿಎಸ್ ಸಿಇಒಗಳಿಗೆ ತರಬೇತಿ: ಕೃಷಿಯೇತರ ಸಾಲ ಸೌಲಭ್ಯ ಒದಗಿಸಿ- ಆರ್.ಬಿ.ಗುಡದಿನ್ನಿ

ಪಿಕೆಪಿಎಸ್ ಸಿಇಒಗಳಿಗೆ ತರಬೇತಿ: ಕೃಷಿಯೇತರ ಸಾಲ ಸೌಲಭ್ಯ ಒದಗಿಸಿ- ಆರ್.ಬಿ.ಗುಡದಿನ್ನಿ

ಮುದ್ದೇಬಿಹಾಳ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಕೃಷಿ ಉದ್ದೇಶಕ್ಕೆ ಅಷ್ಟೇ ಸಾಲ ಕೊಡುವುದಕ್ಕೆ ಸಿಮೀತವಾಗದೇ ಅನ್ಯ ಉದ್ದೇಶಕ್ಕೂ ಸಾಲ ಸೌಲಭ್ಯ ಒದಗಿಸಬೇಕು ಎಂದು ವಿಡಿಸಿಸಿ ಬ್ಯಾಂಕ್ ಅಭಿವೃದ್ದಿ ಅಧಿಕಾರಿ ಎಂ.ಜಿ.ಪಾಟೀಲ ಹೇಳಿದರು.

ಪಟ್ಟಣದ ಡಿಸಿಸಿ ಬ್ಯಾಂಕ್ ಸಭಾಭವನದಲ್ಲಿ ಈಚೇಗೆ ಏರ್ಪಡಿಸಿದ್ದ ತಾಲ್ಲೂಕು ಪ್ಯಾಕ್ಸುಗಳ ಮಟ್ಟದಲ್ಲಿ ವ್ಯಾಪಾರ ಅಭಿವೃದ್ದಿ ಯೋಜನೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ವ್ಯಾಪಾರ ಅಭಿವೃದ್ಧಿಯ ಜಿಲ್ಲೆಯಲ್ಲಿ ಪ್ಯಾಕ್ಸ್ ಮಟ್ಟದಲ್ಲಿ ಉತ್ತಮವಾಗಿ ಪ್ರಗತಿಯಾಗುತ್ತಿದ್ದು ಗ್ರಾಮೀಣ ಭಾಗದಲ್ಲಿ ರಾಷ್ಟಿçÃಕೃತ ಬ್ಯಾಂಕುಗಳAತೆ ಉತ್ತಮ ಸೇವೆ ನೀಡಬೇಕು.ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಪಿಕೆಪಿಎಸಗಳ ಮೂಲಕ ಸೂಪರ್ ಬಜಾರ್, ಗೊಬ್ಬರ ವ್ಯಾಪಾರ,ಜನೌಷಧಿ ಕೇಂದ್ರ ಹೀಗೆ ಬ್ಯಾಂಕೇತರ ಚಟುವಟಿಕೆಗಳಿಗೆ ಒತ್ತು ನೀಡಿ ಗ್ರಾಮದ ಜನರಿಗೆ ಅನುಕೂಲಕರ ಸೇವೆಗಳನ್ನು ಪ್ಯಾಕ್ಸಗಳಿಂದಲೇ ನೀಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ವಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಆರ್.ಬಿ.ಗುಡದಿನ್ನಿ ಮಾತನಾಡಿ, ಬಿಡಿಪಿ ವ್ಯವಹಾರವನ್ನು ಕಡ್ಡಾಯವಾಗಿ ಪಿಕೆಪಿಎಸ್‌ಗಳ ವ್ಯಾಪ್ತಿಯಲ್ಲಿ ನಿರ್ವಹಿಸಲು ಕ್ರಮ ಕೈಗೊಳ್ಳಬೇಕು.43 ಪ್ಯಾಕ್ಸುಗಳು ಗಣಕೀಕೃತವಾಗುವ ಹಂತದಲ್ಲಿದ್ದು ಬೆಳೆಸಾಲ ಮಾತ್ರವಲ್ಲದೇ ಎಲ್ಲ ರೀತಿಯ ಸಾಲಗಳನ್ನು ವಿತರಿಸಬೇಕು ಎಂದು ತಿಳಿಸಿದರು.
ಕುದರಿ ಸಾಲವಾಡಗಿ ಮಾಜಿ ಕಾರ್ಯದರ್ಶಿ ಮಲ್ಲಣ್ಣ ಅಣೆಪ್ಪನವರ ಮಾತನಾಡಿದರು.ಆಡಳಿತ ಮಂಡಳಿ ಸಲಹೆಗಾರ ಜೆ.ಕೊಟ್ರೇಶಿ, ಮಾಜಿ ನಿರ್ದೇಶಕ ಎಸ್.ಬಿ.ಪಾಟೀಲ, ಸಹಾಯಕ ನಿಬಂಧಕ ಚೇತನ ಭಾವಿಕಟ್ಟಿ,ತರಬೇತಿ ಸಂಯೋಜಕ ಆರ್.ಎಂ.ಬಣಕಾರ, ಉಪಪ್ರಧಾನ ವ್ಯವಸ್ಥಾಪಕ ಎಂ.ಜಿ.ಬಿರಾದಾರ,ಮುಖAಡ ಸೋಮನಗೌಡ ಬಿರಾದಾರ,ಮುದ್ದೇಬಿಹಾಳ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಪಿ.ಎಸ್.ಪಾಟೀಲ, ನೋಡಲ ಅಧಿಕಾರಿ ಎನ್.ಜಿ.ಜನಿವಾರ,ಮಲ್ಲಣ್ಣ ಅಗಸರ,ಸಿ.ಬಿ.ಮಲಘಾಣ ಮೊದಲಾದವರು ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ