ಪಿಕೆಪಿಎಸ್ ಸಿಇಒಗಳಿಗೆ ತರಬೇತಿ: ಕೃಷಿಯೇತರ ಸಾಲ ಸೌಲಭ್ಯ ಒದಗಿಸಿ- ಆರ್.ಬಿ.ಗುಡದಿನ್ನಿ

ಪಿಕೆಪಿಎಸ್ ಸಿಇಒಗಳಿಗೆ ತರಬೇತಿ: ಕೃಷಿಯೇತರ ಸಾಲ ಸೌಲಭ್ಯ ಒದಗಿಸಿ- ಆರ್.ಬಿ.ಗುಡದಿನ್ನಿ

ಮುದ್ದೇಬಿಹಾಳ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಕೃಷಿ ಉದ್ದೇಶಕ್ಕೆ ಅಷ್ಟೇ ಸಾಲ ಕೊಡುವುದಕ್ಕೆ ಸಿಮೀತವಾಗದೇ ಅನ್ಯ ಉದ್ದೇಶಕ್ಕೂ ಸಾಲ ಸೌಲಭ್ಯ ಒದಗಿಸಬೇಕು ಎಂದು ವಿಡಿಸಿಸಿ ಬ್ಯಾಂಕ್ ಅಭಿವೃದ್ದಿ ಅಧಿಕಾರಿ ಎಂ.ಜಿ.ಪಾಟೀಲ ಹೇಳಿದರು.

ಪಟ್ಟಣದ ಡಿಸಿಸಿ ಬ್ಯಾಂಕ್ ಸಭಾಭವನದಲ್ಲಿ ಈಚೇಗೆ ಏರ್ಪಡಿಸಿದ್ದ ತಾಲ್ಲೂಕು ಪ್ಯಾಕ್ಸುಗಳ ಮಟ್ಟದಲ್ಲಿ ವ್ಯಾಪಾರ ಅಭಿವೃದ್ದಿ ಯೋಜನೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ವ್ಯಾಪಾರ ಅಭಿವೃದ್ಧಿಯ ಜಿಲ್ಲೆಯಲ್ಲಿ ಪ್ಯಾಕ್ಸ್ ಮಟ್ಟದಲ್ಲಿ ಉತ್ತಮವಾಗಿ ಪ್ರಗತಿಯಾಗುತ್ತಿದ್ದು ಗ್ರಾಮೀಣ ಭಾಗದಲ್ಲಿ ರಾಷ್ಟಿçÃಕೃತ ಬ್ಯಾಂಕುಗಳAತೆ ಉತ್ತಮ ಸೇವೆ ನೀಡಬೇಕು.ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಪಿಕೆಪಿಎಸಗಳ ಮೂಲಕ ಸೂಪರ್ ಬಜಾರ್, ಗೊಬ್ಬರ ವ್ಯಾಪಾರ,ಜನೌಷಧಿ ಕೇಂದ್ರ ಹೀಗೆ ಬ್ಯಾಂಕೇತರ ಚಟುವಟಿಕೆಗಳಿಗೆ ಒತ್ತು ನೀಡಿ ಗ್ರಾಮದ ಜನರಿಗೆ ಅನುಕೂಲಕರ ಸೇವೆಗಳನ್ನು ಪ್ಯಾಕ್ಸಗಳಿಂದಲೇ ನೀಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ವಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಆರ್.ಬಿ.ಗುಡದಿನ್ನಿ ಮಾತನಾಡಿ, ಬಿಡಿಪಿ ವ್ಯವಹಾರವನ್ನು ಕಡ್ಡಾಯವಾಗಿ ಪಿಕೆಪಿಎಸ್‌ಗಳ ವ್ಯಾಪ್ತಿಯಲ್ಲಿ ನಿರ್ವಹಿಸಲು ಕ್ರಮ ಕೈಗೊಳ್ಳಬೇಕು.43 ಪ್ಯಾಕ್ಸುಗಳು ಗಣಕೀಕೃತವಾಗುವ ಹಂತದಲ್ಲಿದ್ದು ಬೆಳೆಸಾಲ ಮಾತ್ರವಲ್ಲದೇ ಎಲ್ಲ ರೀತಿಯ ಸಾಲಗಳನ್ನು ವಿತರಿಸಬೇಕು ಎಂದು ತಿಳಿಸಿದರು.
ಕುದರಿ ಸಾಲವಾಡಗಿ ಮಾಜಿ ಕಾರ್ಯದರ್ಶಿ ಮಲ್ಲಣ್ಣ ಅಣೆಪ್ಪನವರ ಮಾತನಾಡಿದರು.ಆಡಳಿತ ಮಂಡಳಿ ಸಲಹೆಗಾರ ಜೆ.ಕೊಟ್ರೇಶಿ, ಮಾಜಿ ನಿರ್ದೇಶಕ ಎಸ್.ಬಿ.ಪಾಟೀಲ, ಸಹಾಯಕ ನಿಬಂಧಕ ಚೇತನ ಭಾವಿಕಟ್ಟಿ,ತರಬೇತಿ ಸಂಯೋಜಕ ಆರ್.ಎಂ.ಬಣಕಾರ, ಉಪಪ್ರಧಾನ ವ್ಯವಸ್ಥಾಪಕ ಎಂ.ಜಿ.ಬಿರಾದಾರ,ಮುಖAಡ ಸೋಮನಗೌಡ ಬಿರಾದಾರ,ಮುದ್ದೇಬಿಹಾಳ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಪಿ.ಎಸ್.ಪಾಟೀಲ, ನೋಡಲ ಅಧಿಕಾರಿ ಎನ್.ಜಿ.ಜನಿವಾರ,ಮಲ್ಲಣ್ಣ ಅಗಸರ,ಸಿ.ಬಿ.ಮಲಘಾಣ ಮೊದಲಾದವರು ಇದ್ದರು.

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ