ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ: ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ: ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬುಧವಾರ ಜಿಲ್ಲಾ ಮಟ್ಟದ ಸಕ್ಕರೆ ಇಳುವರಿ ಹಾಗೂ ತೂಕದ ಯಂತ್ರಗಳ ಪರಿಶೀಲನಾ ತಂಡ ಬುಧವಾರ ಭೇಟಿ ನೀಡಿ ಕಾರ್ಖಾನೆಯ ಕಾರ್ಯಾಚರಣೆಯನ್ನು ವೀಕ್ಷಿಸಿದರು.

ಪತ್ರಿಕೆಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆನಂದ ಕೆ., ರಾಜ್ಯ ಸರ್ಕಾರ ಆದೇಶಿಸಿತ ಹೆಚ್ಚುವರಿ ಪರಿಹಾರವನ್ನು ಕಾರ್ಖಾನೆಯಿಂದ ರೈತರಿಗೆ ಪಾವತಿಸಲಾಗುತ್ತಿದೆ.ಕಾರ್ಖಾನೆಯ ತೂಕದ ಯಂತ್ರದ ಕುರಿತು ಈಚೇಗೆ ರೈತರು ಆಕ್ಷೇಪಿಸಿದ್ದಕ್ಕೆ ಕಬ್ಬು ಪರೈಸುವ ರೈತರು, ರೈತಪರ ಸಂಘಟನೆ ಮುಖಂಡರು,ಅಧಿಕಾರಿಗಳನ್ನು ಕರೆದುಕೊಂಡು ಖುದ್ದಾಗಿ ಪರಿಶೀಲನೆ ನಡೆಸಿದ್ದೇನೆ.ತೂಕ ಅಳತೆ ಮಾಪನ ಅಧಿಕಾರಿಗಳು ತೂಕದ ಯಂತ್ರವನ್ನು ಪರಿಶೀಲನೆ ನಡೆಸಿದ್ದು ಕಾರ್ಖಾನೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ಕಾರ್ಖಾನೆಗಳಲ್ಲೂ ರೈತರನ್ನೊಳಗೊಂಡ ಪರಿಶೀಲನಾ ಸಮೀತಿ ರಚಿಸಲಾಗಿದ್ದು ಕಾಲಕಾಲಕ್ಕೆ ಕಾರ್ಖಾನೆಗೆ ಭೇಟಿ ನೀಡಿ ಅಲ್ಲಿನ ಚಟುವಟಿಕೆಗಳ ಮಾಹಿತಿ ಪಡೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಆಹಾರ ಪೂರೈಕೆ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಮಾತನಾಡಿ, ಬಾಲಾಜಿ ಸಕ್ಕರೆ ಕಾರ್ಖಾನೆಗೆ ರೈತರೊಂದಿಗೆ ಭೇಟಿ ನೀಡಿದ್ದೇವೆ.ಪ್ರಯೋಗಾಲಯಕ್ಕೆ ಭೇಟಿ ನೀಡಿ ಸಕ್ಕರೆ ಅಂಶವನ್ನು ಹೇಗೆ ನಿರ್ಧರಿಸಲಾಗುತ್ತದೆ ಎಂಬುದನ್ನು ರೈತರಿಗೆ ಖುದ್ದಾಗಿ ಮನವರಿಕೆ ಮಾಡಿಕೊಡಲಾಗಿದೆ.ಸರ್ಕಾರ ಸೂಚಿಸಿದ ದರವನ್ನು ಕಾರ್ಖಾನೆಯವರು ನೀಡುತ್ತಿದ್ದು ಈಗಾಗಲೇ ನ.30ರವರೆಗಿನ ಕಬ್ಬು ಪೂರೈಸಿದ ರೈತರಿಗೆ ಬಿಲ್ ಪಾವತಿಸಲಾಗಿದೆ.132 ಕೋಟಿ ರೂ.ಗಳಲ್ಲಿ 84 ಕೋಟಿ ರೂ.ಬಿಲ್ ಪಾವತಿಸಲಾಗಿದ್ದು ಡಿ.10ರವರೆಗೆ ಕಬ್ಬು ಪೂರೈಸಿದ ರೈತರಿಗೆ ಬಿಲ್ ಪಾವತಿಸುವ ಕಾರ್ಯ ಮಾಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಪಾಟೀಲ, ನಿರ್ದೇಶಕರಾದ ರಾಹುಲ್‌ಗೌಡ ಪಾಟೀಲ,ಅಧಿಕ ಪಾಟೀಲ,ಶ್ರೀನಿವಾಸ ಅರಕೇರಿ,ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ವಿವೇಕ,ಉಪ ವಿಭಾಗಾಧಿಕಾರಿ ಗುರುನಾಥ ದಡ್ಡಿ,ಕೃಷಿ ಇಲಾಖೆ ಅಧಿಕಾರಿ ಎಸ್.ಡಿ.ಭಾವಿಕಟ್ಟಿ, ನಿಡಗುಂದಿ ತಹಶೀಲ್ದಾರ್ ಎ.ಡಿ.ಅಮರವಾಡಗಿ, , ಆಹಾರ ಶಿರಸ್ತೇದಾರ ಶಶಿಧರ ಕುಮಚಗಿ, ಆಹಾರ ಇಲಾಖೆ ನಿರೀಕ್ಷಕ ಎಸ್.ಎ.ಗುಮತಿಮಠ ,ಕಂದಾಯ ನಿರೀಕ್ಷಕ ಪವನ ತಳವಾರ,ರೈತ ಸಂಘಟನೆಯ ಮುಖಂಡರಾದ ಸೋಮನಗೌಡ ಪಾಟೀಲ, ಬಾಲಪ್ಪಗೌಡ ಲಿಂಗದಳ್ಳಿ, ಅರವಿಂದ ಕುಲಕರ್ಣಿ,ಶಿವನಗೌಡ ಜಲಪೂರ ಸೇರಿದಂತೆ ಕಂದಾಯ,ಆಹಾರ ಇಲಾಖೆ ಅಧಿಕಾರಿಗಳು ಇದ್ದರು.

Latest News

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ ಆಸ್ಪತ್ರೆಯ ಹಿಂಭಾಗದಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವನನ್ನು ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದ ಶರಣಬಸಪ್ಪ ಸಾಯಬಣ್ಣ ಗೋನಾಳ(45) ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಯಾವುದೋ ವಿಚಾರಕ್ಕೆ ಮಾನಸಿಕ ಮಾಡಿಕೊಂಡು ತನ್ನ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತನ ಪತ್ನಿ V.S ಗೋನಾಳ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ (ಬಿಎನ್‌ಎಸ್-194) ಪ್ರಕರಣ