Tribute to Soldiers' Families: May. Tiranga Yatra on 20th

ಸೈನಿಕರ ಕುಟುಂಬದವರಿಗೆ ಸನ್ಮಾನ: ಮೇ. 20 ರಂದು ತಿರಂಗಾ ಯಾತ್ರೆ

ಸೈನಿಕರ ಕುಟುಂಬದವರಿಗೆ ಸನ್ಮಾನ: ಮೇ. 20 ರಂದು ತಿರಂಗಾ ಯಾತ್ರೆ

ಮುದ್ದೇಬಿಹಾಳ : ಪೆಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಉಗ್ರರನ್ನು ಸದೆಬಡಿದ ಭಾರತೀಯ ಸೇನೆಯನ್ನು ಅಭಿನಂದಿಸಿ ವಿಜಯೋತ್ಸವವನ್ನು ಆಚರಿಸಲು ಮೇ.20 ರಂದು ಪಟ್ಟಣದಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಭಾರತೀಯ ಸೇನೆಯ ಪರಾಕ್ರಮವನ್ನು ಇಡೀ ವಿಶ್ವವೇ ನಿಬ್ಬೆರಗು ಕಣ್ಣುಗಳಿಂದ ನೋಡುತ್ತಿದೆ. ಆದರೆ, ಕಾಂಗ್ರೆಸ್ಸಿಗರಿಗೆ ಸೇನೆಯ ಮೇಲೆ ಪೂರ್ಣ ನಂಬಿಕೆ ಇಲ್ಲ. ಅದಕ್ಕಾಗಿಯೇ ಆ ಪಕ್ಷದ ನಾಯಕರು ಸೇನೆಯ ಕಾರ್ಯಾಚರಣೆಗೆ ಸಾಕ್ಷಿ ಕೇಳುವ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.

ಪ್ರಸ್ತುತ ಸೈನ್ಯದಲ್ಲಿ ಸೇವೆಯಲ್ಲಿರುವ ಸೈನಿಕರ ಕುಟುಂಬಸ್ಥರನ್ನು ಕರೆದು ಸನ್ಮಾನಿಸುವ ಕಾರ್ಯ ಮಾಡುತ್ತೇವೆ. ಮೇ.೨೦ ರಂದು ಸಂಜೆ 4ಕ್ಕೆ ಮುದ್ದೇಬಿಹಾಳದ ಸೈನಿಕ ಮೈದಾನದಿಂದ ಎಪಿಎಂಸಿಯಲ್ಲಿರುವ ಕರ್ನಾಟಕ ಬ್ಯಾಂಕ್ ಸಭಾಂಗಣದವರೆಗೆ ರ‍್ಯಾಲಿ ನಡೆಸಲಾಗುತ್ತದೆ. ಅಲ್ಲಿ ಸೈನಿಕರ ಕುಟುಂಬದವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಕೆಲವು ತಿಳಿವಳಿಕೆ ಇಲ್ಲದವರು ಸೇನೆಯ ಕಾರ್ಯಾಚರಣೆಯ ಕುರಿತು ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ. ಕೆಲವು ಕಾಂಗ್ರೆಸ್ ಸಚಿವರು, ಶಾಸಕರು ದೇಶದ ಭದ್ರತೆಯ ವಿಷಯದ ಕುರಿತು ಹಗುರವಾಗಿ ಮಾತನಾಡುತ್ತಿರುವುದು ನಾಚಿಗೇಡಿನ ಸಂಗತಿ ಎಂದರು.

ಕಾಂಗ್ರೆಸ್‌ನ್ನು ದೇಶದಲ್ಲಿ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಪ್ರಜೆಗಳು ಕಳೆದ 15 ವರ್ಷಗಳಿಂದ ತೀರ್ಪು ಕೊಟ್ಟಿದ್ದಾರೆ. ಯಾರು ದೇಶಪ್ರೇಮಿಗಳು ಯಾರು ಅಲ್ಲ ಎಂಬುದನ್ನು ತಿಳಿಸಿದ್ದಾರೆ. ರಕ್ಷಣಾ ಸಚಿವರು ಭಯೋತ್ಪಾದಕರು ಧರ್ಮ ಕೇಳಿ ನಮ್ಮವರನ್ನು ಹತ್ಯೆ ಮಾಡಿದ್ದಾರೆ. ಆದರೆ ಸೇನೆಯವರು ಭಯೋತ್ಪಾದಕರ ಕರ್ಮ ಕೇಳಿ ಅವರ ಎದೆ ಸೀಳುವ ಕೆಲಸ ಮಾಡಿದ್ದಾರೆ. ಇಂತಹ ವಿಚಾರಗಳ ಬಗ್ಗೆ ಎಚ್ಚರದಿಂದ ಮಾತನಾಡಬೇಕು ಎಂದು ಹೇಳಿದರು.

ದೇಶದ ಸೈನ್ಯದ ಕಾರ್ಯಾಚರಣೆಗೆ ಬೆಂಬಲ ಹಾಗೂ ವಿಜಯೋತ್ಸವವಕ್ಕೆ ಪಕ್ಷಾತೀತವಾಗಿ ತಿರಂಗಾಯಾತ್ರೆ ನಡೆಸಲಾಗುತ್ತದೆ. ನಾಗರಿಕ ಸಮಾಜದ ಎಲ್ಲ ಸಂಘಸಂಸ್ಥೆಗಳು ಪಾಲ್ಗೊಳ್ಳಬೇಕು ಎಂದು ವಿನಂತಿಸವುದಾಗಿ ತಿಳಿಸಿದರು.

ವೈದ್ಯಕೀಯ ಪ್ರಕೋಷ್ಠದ ಡಾ. ಸಿ. ಕೆ. ಶಿವಯೋಗಿಮಠ, ಮಾಜಿ ಸೈನಿಕ ಎಸ್. ಕೆ. ಕಟ್ಟಿ, ಲಯನ್ಸ್ ಕ್ಲಬ್‌ನ ಅಧ್ಯಕ್ಷ ರಾವಸಾಹೇಬ ದೇಸಾಯಿ ಮಾತನಾಡಿದರು. ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಡಾ.ವೀರೇಶ ಪಾಟೀಲ, ಸಂಜೀವ ಬಾಗೇವಾಡಿ, ವಿಜಯಕುಮಾರ ಬಡಿಗೇರ, ಬಿಜೆಪಿ ಮುಖಂಡರು, ವಿವಿಧ ಸಂಘ ಸಂಸ್ಥೆಯ ಪ್ರಮುಖರು ಇದ್ದರು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ