Tribute to Soldiers' Families: May. Tiranga Yatra on 20th

ಸೈನಿಕರ ಕುಟುಂಬದವರಿಗೆ ಸನ್ಮಾನ: ಮೇ. 20 ರಂದು ತಿರಂಗಾ ಯಾತ್ರೆ

ಸೈನಿಕರ ಕುಟುಂಬದವರಿಗೆ ಸನ್ಮಾನ: ಮೇ. 20 ರಂದು ತಿರಂಗಾ ಯಾತ್ರೆ

ಮುದ್ದೇಬಿಹಾಳ : ಪೆಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಉಗ್ರರನ್ನು ಸದೆಬಡಿದ ಭಾರತೀಯ ಸೇನೆಯನ್ನು ಅಭಿನಂದಿಸಿ ವಿಜಯೋತ್ಸವವನ್ನು ಆಚರಿಸಲು ಮೇ.20 ರಂದು ಪಟ್ಟಣದಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಭಾರತೀಯ ಸೇನೆಯ ಪರಾಕ್ರಮವನ್ನು ಇಡೀ ವಿಶ್ವವೇ ನಿಬ್ಬೆರಗು ಕಣ್ಣುಗಳಿಂದ ನೋಡುತ್ತಿದೆ. ಆದರೆ, ಕಾಂಗ್ರೆಸ್ಸಿಗರಿಗೆ ಸೇನೆಯ ಮೇಲೆ ಪೂರ್ಣ ನಂಬಿಕೆ ಇಲ್ಲ. ಅದಕ್ಕಾಗಿಯೇ ಆ ಪಕ್ಷದ ನಾಯಕರು ಸೇನೆಯ ಕಾರ್ಯಾಚರಣೆಗೆ ಸಾಕ್ಷಿ ಕೇಳುವ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.

ಪ್ರಸ್ತುತ ಸೈನ್ಯದಲ್ಲಿ ಸೇವೆಯಲ್ಲಿರುವ ಸೈನಿಕರ ಕುಟುಂಬಸ್ಥರನ್ನು ಕರೆದು ಸನ್ಮಾನಿಸುವ ಕಾರ್ಯ ಮಾಡುತ್ತೇವೆ. ಮೇ.೨೦ ರಂದು ಸಂಜೆ 4ಕ್ಕೆ ಮುದ್ದೇಬಿಹಾಳದ ಸೈನಿಕ ಮೈದಾನದಿಂದ ಎಪಿಎಂಸಿಯಲ್ಲಿರುವ ಕರ್ನಾಟಕ ಬ್ಯಾಂಕ್ ಸಭಾಂಗಣದವರೆಗೆ ರ‍್ಯಾಲಿ ನಡೆಸಲಾಗುತ್ತದೆ. ಅಲ್ಲಿ ಸೈನಿಕರ ಕುಟುಂಬದವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಕೆಲವು ತಿಳಿವಳಿಕೆ ಇಲ್ಲದವರು ಸೇನೆಯ ಕಾರ್ಯಾಚರಣೆಯ ಕುರಿತು ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ. ಕೆಲವು ಕಾಂಗ್ರೆಸ್ ಸಚಿವರು, ಶಾಸಕರು ದೇಶದ ಭದ್ರತೆಯ ವಿಷಯದ ಕುರಿತು ಹಗುರವಾಗಿ ಮಾತನಾಡುತ್ತಿರುವುದು ನಾಚಿಗೇಡಿನ ಸಂಗತಿ ಎಂದರು.

ಕಾಂಗ್ರೆಸ್‌ನ್ನು ದೇಶದಲ್ಲಿ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಪ್ರಜೆಗಳು ಕಳೆದ 15 ವರ್ಷಗಳಿಂದ ತೀರ್ಪು ಕೊಟ್ಟಿದ್ದಾರೆ. ಯಾರು ದೇಶಪ್ರೇಮಿಗಳು ಯಾರು ಅಲ್ಲ ಎಂಬುದನ್ನು ತಿಳಿಸಿದ್ದಾರೆ. ರಕ್ಷಣಾ ಸಚಿವರು ಭಯೋತ್ಪಾದಕರು ಧರ್ಮ ಕೇಳಿ ನಮ್ಮವರನ್ನು ಹತ್ಯೆ ಮಾಡಿದ್ದಾರೆ. ಆದರೆ ಸೇನೆಯವರು ಭಯೋತ್ಪಾದಕರ ಕರ್ಮ ಕೇಳಿ ಅವರ ಎದೆ ಸೀಳುವ ಕೆಲಸ ಮಾಡಿದ್ದಾರೆ. ಇಂತಹ ವಿಚಾರಗಳ ಬಗ್ಗೆ ಎಚ್ಚರದಿಂದ ಮಾತನಾಡಬೇಕು ಎಂದು ಹೇಳಿದರು.

ದೇಶದ ಸೈನ್ಯದ ಕಾರ್ಯಾಚರಣೆಗೆ ಬೆಂಬಲ ಹಾಗೂ ವಿಜಯೋತ್ಸವವಕ್ಕೆ ಪಕ್ಷಾತೀತವಾಗಿ ತಿರಂಗಾಯಾತ್ರೆ ನಡೆಸಲಾಗುತ್ತದೆ. ನಾಗರಿಕ ಸಮಾಜದ ಎಲ್ಲ ಸಂಘಸಂಸ್ಥೆಗಳು ಪಾಲ್ಗೊಳ್ಳಬೇಕು ಎಂದು ವಿನಂತಿಸವುದಾಗಿ ತಿಳಿಸಿದರು.

ವೈದ್ಯಕೀಯ ಪ್ರಕೋಷ್ಠದ ಡಾ. ಸಿ. ಕೆ. ಶಿವಯೋಗಿಮಠ, ಮಾಜಿ ಸೈನಿಕ ಎಸ್. ಕೆ. ಕಟ್ಟಿ, ಲಯನ್ಸ್ ಕ್ಲಬ್‌ನ ಅಧ್ಯಕ್ಷ ರಾವಸಾಹೇಬ ದೇಸಾಯಿ ಮಾತನಾಡಿದರು. ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಡಾ.ವೀರೇಶ ಪಾಟೀಲ, ಸಂಜೀವ ಬಾಗೇವಾಡಿ, ವಿಜಯಕುಮಾರ ಬಡಿಗೇರ, ಬಿಜೆಪಿ ಮುಖಂಡರು, ವಿವಿಧ ಸಂಘ ಸಂಸ್ಥೆಯ ಪ್ರಮುಖರು ಇದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು