ಮುದ್ದೇಬಿಹಾಳ : ಈಚೇಗೆ ಕಾಶ್ಮೀರದ ಪೆಹಲ್ಗಾಮ್ದಲ್ಲಿ ಉಗ್ರರ ದಾಳಿಗೆ ಬಲಿಯಾದವರ ಆತ್ಮಕ್ಕೆ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮುಖಂಡರಾದ ಶಾಂತಗೌಡ ಪಾಟೀಲ್ ನಡಹಳ್ಳಿ ಮಾತನಾಡಿ, ಉಗ್ರಗಾಮಿಗಳನ್ನು ಕೇಂದ್ರ ಸರ್ಕಾರ ಮಟ್ಟ ಹಾಕಬೇಕು ಎಂದು ಒತ್ತಾಯಿಸಿದರು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ವೆಂಕನಗೌಡ ಪಾಟೀಲ, ಸಂಘದ ಅಧ್ಯಕ್ಷ ಆರ್. ಆಯ್. ಹಿರೇಮಠ ಮೊದಲಾದವರು ಪಾಲ್ಗೊಂಡಿದ್ದರು.