ಪ್ರಜಾನಾಡು ಡಿಜಿಟಲ್ ದಿನದರ್ಶಿಕೆ ಬಿಡುಗಡೆ: ಸತ್ಯನಿಷ್ಠೆ,ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ-ಹಿರೇಮಠ

ಪ್ರಜಾನಾಡು ಡಿಜಿಟಲ್ ದಿನದರ್ಶಿಕೆ ಬಿಡುಗಡೆ: ಸತ್ಯನಿಷ್ಠೆ,ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ-ಹಿರೇಮಠ

ಮುದ್ದೇಬಿಹಾಳ : ಸಮಾಜದಲ್ಲಿ ಪತ್ರಕರ್ತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾ ಸಮಾಜದ ಮುಂದೆ ಸತ್ಯವನ್ನು ತಲುಪಿಸುವ ಜವಾಬ್ದಾರಿಯುತ ಕಾರ್ಯನಿರ್ವಹಿಸುತ್ತಾರೆ.ಸಮಾಜದ ಒಳಿತಿಗಾಗಿ ಮಾಧ್ಯಮಗಳ ಜವಾಬ್ದಾರಿ ಹೆಚ್ಚಿದ್ದು, ಸತ್ಯನಿಷ್ಠೆ ಮತ್ತು ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ ಎಂದು ಜಂಗಮ ಸಮಾಜದ ತಾಲ್ಲೂಕು ಅಧ್ಯಕ್ಷ ದಾನಯ್ಯಸ್ವಾಮಿ ಹಿರೇಮಠ ಹೇಳಿದರು.

ಪಟ್ಟಣದ ಶ್ರೀ ಖಾಸ್ಘತೇಶ್ವರ ಮಠದಲ್ಲಿ ಸೋಮವಾರ ಸಂಜೆ ಇಂಗಳೇಶ್ವರದ ಲಿ, ಮುನಿ ಪ್ರ, ಚನ್ನಬಸವ ಮಾಹಾಸ್ವಾಮಿಗಳ ನುಡಿಮನ ಹಾಗೂ ಪ್ರಜಾನಾಡು ಡಿಜಿಟಲ್ ಸುದ್ದಿ ವಾಹಿನಿಯ ದಿನದರ್ಶಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ಸಾಹಿತಿ ಎಚ್.ಆರ್. ಬಾಗವಾನ ಮಾತನಾಡಿ, ಇಂಗಳೇಶ್ವರ ಶ್ರೀಗಳ ನುಡಿಮನ ಚಿಂತನೆಗಳು ಸಮಾಜಕ್ಕೆ ದಾರಿದೀಪವಾಗಿದ್ದು, ದಿನದರ್ಶಿಕೆಯಂತಹ ಪ್ರಕಟಣೆಗಳು ಸಾಂಸ್ಕೃತಿಕ ಮತ್ತು ಸಾಮಾಜಿಕ ಮೌಲ್ಯಗಳನ್ನು ಮುಂದಿನ ತಲೆಮಾರಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕ ಐ.ಬಿ. ಹಿರೇಮಠ ಮಾತನಾಡಿ, ಡಿಜಿಟಲ್ ಪತ್ರಿಕೋದ್ಯಮ ವೇಗದ ಜೊತೆಗೆ ಜವಾಬ್ದಾರಿಯನ್ನೂ ಹೊತ್ತುಕೊಳ್ಳಬೇಕಿದೆ ಎಂದರು. ಸಾಹಿತಿ ಶಿವಪುತ್ರ ಅಜಮನಿ ಮಾತನಾಡಿ, ಸಾಹಿತ್ಯ, ಸಂಸ್ಕೃತಿ ಮತ್ತು ಮಾಧ್ಯಮಗಳ ಸಮನ್ವಯದಿಂದ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ದಿವ್ಯ ಸಾನಿಧ್ಯವನ್ನು ಖಾಸ್ಗತೇಶ್ವರ ಮಠದ ನೀಲಮ್ಮ ಎಸ್. ವಿರಕ್ತಮಠ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುರಸಭೆ ಮಾಜಿ ಉಪಾಧ್ಯಕ್ಷೆ ಪ್ರೀತಿ ಎಸ್. ದೇಗಿನಾಳ,ಅಪ್ಪು ದೇಗಿನಾಳ, ಸಮಾಜ ಸೇವಕ ಅಶೋಕ ನಾಡಗೌಡ ಇದ್ದರು.

ಮುಖಂಡ ಮಹಾಂತೇಶ ಬೂದಿಹಾಳಮಠ, ಪ್ರಜಾನಾಡು ಡಿಜಿಟಲ್ ವಾಹಿನಿಯ ವರದಿಗಾರ ಸಚಿನ್ ಚಲವಾದಿ , ಎಸ್.ಬಿ. ಹುಗ್ಗಿ, ಪರಶುರಾಮ ನಾಲತವಾಡ, ರಫೀಕ್ ಶಿರೋಳ, ಶ್ರೀಕಾಂತ್ ಹಿರೇಮಠ, ಕಾಶಿನಾಥ್ ಹುಗ್ಗಿ, ರಾಜುಗೌಡ ತುಂಬಗಿ, ಶರಣು ಚಲವಾದಿ, ಆನಂದ ಮುದೊರ, ದೇವರಾಜ ಹಂಗರಗಿ, ಸಂಗಮೇಶ ಚಲವಾದಿ, ಸಿದ್ದು ಪಾಟೀಲ್ ಇದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ