Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

ಕೊಪ್ಪಳ: ತುಂಗಭದ್ರಾ ಡ್ಯಾಂನ (Tungabhadra dam) 19ನೇ ಕ್ರಸ್ಟ್ ಗೇಟ್ ಕಟ್ಟಾಗಿರುವ ಕುರಿತು ಕೊಪ್ಪಳದ ಬಸಾಪುರ ಖಾಸಗಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿರೋಧ ಪಕ್ಷ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ಮಾಡಿದರು.

ನಿಮಗೆ ಬೋರ್ಡ್ ಇದೆ ಎಂದು ಗೊತ್ತಾ? ಅದರ ಚೇರ್ ಮನ್ ಭಾರತ ಸರ್ಕಾರ ನೇಮಕ ಮಾಡುತ್ತೆ. ಅವರ ಮೇಲೆ ಆರೋಪ ಮಾಡೋಕೆ ಬಿಜೆಪಿಗೆ ಏನಾಗಿದೆ? ಭಾರತ ಸರ್ಕಾರವನ್ನು ಪ್ರಶ್ನೆ ಮಾಡಬೇಕು ಅಲ್ವಾ? ಎಂದು ಸಿದ್ದರಾಮಯ್ಯ‌ (Siddaramaiah) ಪ್ರಶ್ನಿಸಿದರು.

Join Our Telegram: https://t.me/dcgkannada

ನಾನು ಇದರಲ್ಲಿ ರಾಜಕೀಯ ಮಾಡುವುದಿಲ್ಲ. ಸಿಡಬ್ಲುಸಿ ಅವರು ಅಧಿಕಾರಿಗಳನ್ನು ನೇಮಕ ಮಾಡುತ್ತಾರೆ. ನಮ್ಮ ರಾಜ್ಯದ ಅಧಿಕಾರಿಗಳು, ತೆಲಂಗಾಣ, ಆಂಧ್ರದ ಅಧಿಕಾರಿಗಳು ಇರುತ್ತಾರೆ. ನೀವು ಕೇಳುವುದಕ್ಕೆಲ್ಲ ಉತ್ತರ ಕೊಡೊಕೆ ಆಗಲ್ಲ. ಬಿಜೆಪಿ ಅವರು ರಾಜಕೀಯ ಮಾಡ್ತಾರೆ. ಅದಕ್ಕೆಲ್ಲ ನಾನು ಉತ್ತರ ಕೊಡುವುದಿಲ್ಲ. ಗೇಟ್ ಕಟ್ ಆಗುವುದಕ್ಕೆ ಸರ್ಕಾರದ ಹೊಣಗೇಡಿತನ ಅಂದ್ರ ಹೇಗೆ? ಎಂದು ಮರುಪ್ರಶ್ನೆ ಮಾಡಿದರು.

ಯಾರು ಬೋರ್ಡ್ ನಿರ್ವಹಿಸುತ್ತಾರೆ ಎಂಬುದು ಮುಖ್ಯ. ಬಿಜೆಪಿ ಅವರು ಅದರ ಬಗ್ಗೆ ತಿಳಿದುಕೊಳ್ಳಲಿ. ಕ್ರಸ್ಟ್‌ ಗೇಟ್ ಕಟ್ ಆಗಿದೆ. ಅದರಿಂದ ನೀರು ಪೋಲ್ ಆಗಿದೆ. ಇನ್ನು ಸೆಪ್ಟೆಂಬರ್ ವರೆಗೂ ಮಳೆ ಇದೆ.‌ ಮಳೆಯಿಂದ ಮತ್ತೆ ಜಲಾಶಯ ತುಂಬುತ್ತೆ ಎನ್ನುವ ಆಶಾಭಾವನೆ ಇರಲಿ ಎಂದರು.

ಇದನ್ನೂ ಓದಿ: Viral: ಭಾರತಕ್ಕೆ‌ ಅವಮಾನ‌ ತೋರಿದ ಆರೋಪ‌.. ಮಧ್ಯರಾತ್ರಿ‌ ಕ್ಯಾಬ್ ನಿಂದ ಹೊರದಬ್ಬಿದ ಉಬರ್ ಚಾಲಕ (ವೈರಲ್ ವಿಡಿಯೋ ನೋಡಿ)

ರೈತರ ಹಿತದೃಷ್ಟಿಯಿಂದ ಗೇಟ್ ದುರಸ್ತಿ ಮುಖ್ಯ. ಮಳೆ ಬರುವುದಾಗಿ ಹವಮಾನ ಇಲಾಖೆ ಮನಸ್ಸೂಚನೆ ನೀಡಿದೆ. ಮತ್ತೆ ಮಳೆಯಿಂದ ಜಲಾಶಯ ಭರ್ತಿಯಾಗುತ್ತೆ. ನಾನು ಯಾರು ಮೇಲೂ ಗೂಬೆ ಕೂರಿಸುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ‌ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದರು.

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ