Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

ಕೊಪ್ಪಳ: ತುಂಗಭದ್ರಾ ಡ್ಯಾಂನ (Tungabhadra dam) 19ನೇ ಕ್ರಸ್ಟ್ ಗೇಟ್ ಕಟ್ಟಾಗಿರುವ ಕುರಿತು ಕೊಪ್ಪಳದ ಬಸಾಪುರ ಖಾಸಗಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿರೋಧ ಪಕ್ಷ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ಮಾಡಿದರು.

ನಿಮಗೆ ಬೋರ್ಡ್ ಇದೆ ಎಂದು ಗೊತ್ತಾ? ಅದರ ಚೇರ್ ಮನ್ ಭಾರತ ಸರ್ಕಾರ ನೇಮಕ ಮಾಡುತ್ತೆ. ಅವರ ಮೇಲೆ ಆರೋಪ ಮಾಡೋಕೆ ಬಿಜೆಪಿಗೆ ಏನಾಗಿದೆ? ಭಾರತ ಸರ್ಕಾರವನ್ನು ಪ್ರಶ್ನೆ ಮಾಡಬೇಕು ಅಲ್ವಾ? ಎಂದು ಸಿದ್ದರಾಮಯ್ಯ‌ (Siddaramaiah) ಪ್ರಶ್ನಿಸಿದರು.

Join Our Telegram: https://t.me/dcgkannada

ನಾನು ಇದರಲ್ಲಿ ರಾಜಕೀಯ ಮಾಡುವುದಿಲ್ಲ. ಸಿಡಬ್ಲುಸಿ ಅವರು ಅಧಿಕಾರಿಗಳನ್ನು ನೇಮಕ ಮಾಡುತ್ತಾರೆ. ನಮ್ಮ ರಾಜ್ಯದ ಅಧಿಕಾರಿಗಳು, ತೆಲಂಗಾಣ, ಆಂಧ್ರದ ಅಧಿಕಾರಿಗಳು ಇರುತ್ತಾರೆ. ನೀವು ಕೇಳುವುದಕ್ಕೆಲ್ಲ ಉತ್ತರ ಕೊಡೊಕೆ ಆಗಲ್ಲ. ಬಿಜೆಪಿ ಅವರು ರಾಜಕೀಯ ಮಾಡ್ತಾರೆ. ಅದಕ್ಕೆಲ್ಲ ನಾನು ಉತ್ತರ ಕೊಡುವುದಿಲ್ಲ. ಗೇಟ್ ಕಟ್ ಆಗುವುದಕ್ಕೆ ಸರ್ಕಾರದ ಹೊಣಗೇಡಿತನ ಅಂದ್ರ ಹೇಗೆ? ಎಂದು ಮರುಪ್ರಶ್ನೆ ಮಾಡಿದರು.

ಯಾರು ಬೋರ್ಡ್ ನಿರ್ವಹಿಸುತ್ತಾರೆ ಎಂಬುದು ಮುಖ್ಯ. ಬಿಜೆಪಿ ಅವರು ಅದರ ಬಗ್ಗೆ ತಿಳಿದುಕೊಳ್ಳಲಿ. ಕ್ರಸ್ಟ್‌ ಗೇಟ್ ಕಟ್ ಆಗಿದೆ. ಅದರಿಂದ ನೀರು ಪೋಲ್ ಆಗಿದೆ. ಇನ್ನು ಸೆಪ್ಟೆಂಬರ್ ವರೆಗೂ ಮಳೆ ಇದೆ.‌ ಮಳೆಯಿಂದ ಮತ್ತೆ ಜಲಾಶಯ ತುಂಬುತ್ತೆ ಎನ್ನುವ ಆಶಾಭಾವನೆ ಇರಲಿ ಎಂದರು.

ಇದನ್ನೂ ಓದಿ: Viral: ಭಾರತಕ್ಕೆ‌ ಅವಮಾನ‌ ತೋರಿದ ಆರೋಪ‌.. ಮಧ್ಯರಾತ್ರಿ‌ ಕ್ಯಾಬ್ ನಿಂದ ಹೊರದಬ್ಬಿದ ಉಬರ್ ಚಾಲಕ (ವೈರಲ್ ವಿಡಿಯೋ ನೋಡಿ)

ರೈತರ ಹಿತದೃಷ್ಟಿಯಿಂದ ಗೇಟ್ ದುರಸ್ತಿ ಮುಖ್ಯ. ಮಳೆ ಬರುವುದಾಗಿ ಹವಮಾನ ಇಲಾಖೆ ಮನಸ್ಸೂಚನೆ ನೀಡಿದೆ. ಮತ್ತೆ ಮಳೆಯಿಂದ ಜಲಾಶಯ ಭರ್ತಿಯಾಗುತ್ತೆ. ನಾನು ಯಾರು ಮೇಲೂ ಗೂಬೆ ಕೂರಿಸುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ‌ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದರು.

Latest News

ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಂಗಲ:                 ತುಳಿಯುವವರ ಮಧ್ಯೆ ಬೆಳೆದು ನಿಲ್ಲುವುದೇ ಸಾಧನೆ-ಸಿದ್ಧಲಿಂಗ ಶ್ರೀ

ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಂಗಲ: ತುಳಿಯುವವರ ಮಧ್ಯೆ ಬೆಳೆದು ನಿಲ್ಲುವುದೇ ಸಾಧನೆ-ಸಿದ್ಧಲಿಂಗ ಶ್ರೀ

ಮುದ್ದೇಬಿಹಾಳ : ಎಲ್ಲದಕ್ಕೂ ಮನಸ್ಸೆ ಕಾರಣವಾಗಿದ್ದು ಇನ್ನೊಬ್ಬರ ಮನೆ ಹಾಳು ಮಾಡುವುದು ಮನಸ್ಸೇ ಆಗಿದೆ.ತುಳಿಯುವವರ

ಮುದ್ದೇಬಿಹಾಳ : ಸಾಯಿ ಇಂಡೆನ್ ಗ್ಯಾಸ್ ಎಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

ಮುದ್ದೇಬಿಹಾಳ : ಸಾಯಿ ಇಂಡೆನ್ ಗ್ಯಾಸ್ ಎಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

ಮುದ್ದೇಬಿಹಾಳ ತಾಲೂಕಿನ ಸಾಯಿ ಇಂಡೆನ್ ಗ್ಯಾಸ್ ಸರ್ವಿಸ್ ಎಜೆನ್ಸಿಯವರು ಗ್ಯಾಸ್ ವಿತರಣಾ ಸೇವೆಯಲ್ಲಿ ವಿಳಂಬ

ನಾಲತವಾಡ ವೈದ್ಯರ ವರ್ಗಾವಣೆಗೆ ವಿರೋಧ

ನಾಲತವಾಡ ವೈದ್ಯರ ವರ್ಗಾವಣೆಗೆ ವಿರೋಧ

ನಾಲತವಾಡ : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ತಿಂಗಳಿನಿAದ ಒಳ್ಳೆಯ ಸೇವೆ ನೀಡುತ್ತಿದ್ದ ವೈದ್ಯ

ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ:  ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ: ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಯ 2018ರ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ

BREAKING : ನಟ ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್.!

BREAKING : ನಟ ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್.!

ಬೆಂಗಳೂರು: ಹೀರೋ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್ ಆಗಿದ್ದು, 2026ರ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ಈ ಜೋಡಿ ಹಸೆಮಣೆ ಏರಲಿದೆ ಎನ್ನಲಾಗಿದೆ. ಇತ್ತೀಚೆಗೆ ಈ ಇಬ್ಬರೂ ಬಹಳ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡರು. ಈ ಇಬ್ಬರೂ ಎಲ್ಲಿಯೂ ನಿಶ್ಚಿತಾರ್ಥದ ಫೋಟೋ ಗಳನ್ನು ಹಂಚಿಕೊಂಡಿಲ್ಲ, ವಿಜಯ್ ಮತ್ತು ರಶ್ಮಿಕಾ. ನಿಶ್ಚಿತಾರ್ಥದ ನಂತರ, ಅವರು ತಮ್ಮ ಕೆಲಸಗಳಲ್ಲಿ ನಿರತರಾಗಿದ್ದಾರೆ. ಆದಾಗ್ಯೂ, ಅವರ ಮದುವೆ ಶೀಘ್ರದಲ್ಲೇ ನಡೆಯಲಿದೆ ಎಂದು

ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿ ಸುಮಲತಾ ಕ್ಷೌರದ ಹಾವೇರಿ ವಿಶ್ವವಿದ್ಯಾಲಯ ಮಹಿಳಾ ಯೋಗಾಸನ ತಂಡಕ್ಕೆ ಆಯ್ಕೆ.

ಶಿಗ್ಗಾಂವ: ಶಿಗ್ಗಾಂವ ನಗರದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕ್ರೀಡಾಪಟುಗಳು ಯೋಗಾಸನ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.ಹಾವೇರಿ ವಿಶ್ವವಿದ್ಯಾಲಯ, ಕೆರೆಮತ್ತಿಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಯೋಗಾಸನ ಕ್ರೀಡೆಯಲ್ಲಿ ಹಾವೇರಿ ವಿಶ್ವವಿದ್ಯಾಲಯ ಮಹಿಳಾ ತಂಡದ ವಿ.ವಿ ಆಯ್ಕೆ ಪ್ರಕ್ರಿಯೆ ಜರುಗಿದ್ದು, ಈ ಆಯ್ಕೆಯಲ್ಲಿ ಶ್ರೀ ರಂಭಾಪುರಿ ಪದವಿ ಮಹಾವಿದ್ಯಾಲಯದ ಕ್ರೀಡಾಪಟುಗಳು ಭಾಗವಹಿಸಿದ್ದರು. ಇದರಲ್ಲಿ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಸುಮಲತಾ ಕ್ಷೌರದ ಅವರು ಹಾವೇರಿ ವಿಶ್ವವಿದ್ಯಾಲಯ ಮಹಿಳಾ ಯೋಗಾಸನ