Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

Tungabhadra dam: ಕ್ರಸ್ಟ್ ಗೇಟ್ ಕಟ್ಟಾದ ಬಗ್ಗೆ ಬಿಜೆಪಿಯವರು ಭಾರತ ಸರ್ಕಾರವನ್ನ ಪ್ರಶ್ನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ‌ ತೀರುಗೇಟು

ಕೊಪ್ಪಳ: ತುಂಗಭದ್ರಾ ಡ್ಯಾಂನ (Tungabhadra dam) 19ನೇ ಕ್ರಸ್ಟ್ ಗೇಟ್ ಕಟ್ಟಾಗಿರುವ ಕುರಿತು ಕೊಪ್ಪಳದ ಬಸಾಪುರ ಖಾಸಗಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿರೋಧ ಪಕ್ಷ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ಮಾಡಿದರು.

ನಿಮಗೆ ಬೋರ್ಡ್ ಇದೆ ಎಂದು ಗೊತ್ತಾ? ಅದರ ಚೇರ್ ಮನ್ ಭಾರತ ಸರ್ಕಾರ ನೇಮಕ ಮಾಡುತ್ತೆ. ಅವರ ಮೇಲೆ ಆರೋಪ ಮಾಡೋಕೆ ಬಿಜೆಪಿಗೆ ಏನಾಗಿದೆ? ಭಾರತ ಸರ್ಕಾರವನ್ನು ಪ್ರಶ್ನೆ ಮಾಡಬೇಕು ಅಲ್ವಾ? ಎಂದು ಸಿದ್ದರಾಮಯ್ಯ‌ (Siddaramaiah) ಪ್ರಶ್ನಿಸಿದರು.

Join Our Telegram: https://t.me/dcgkannada

ನಾನು ಇದರಲ್ಲಿ ರಾಜಕೀಯ ಮಾಡುವುದಿಲ್ಲ. ಸಿಡಬ್ಲುಸಿ ಅವರು ಅಧಿಕಾರಿಗಳನ್ನು ನೇಮಕ ಮಾಡುತ್ತಾರೆ. ನಮ್ಮ ರಾಜ್ಯದ ಅಧಿಕಾರಿಗಳು, ತೆಲಂಗಾಣ, ಆಂಧ್ರದ ಅಧಿಕಾರಿಗಳು ಇರುತ್ತಾರೆ. ನೀವು ಕೇಳುವುದಕ್ಕೆಲ್ಲ ಉತ್ತರ ಕೊಡೊಕೆ ಆಗಲ್ಲ. ಬಿಜೆಪಿ ಅವರು ರಾಜಕೀಯ ಮಾಡ್ತಾರೆ. ಅದಕ್ಕೆಲ್ಲ ನಾನು ಉತ್ತರ ಕೊಡುವುದಿಲ್ಲ. ಗೇಟ್ ಕಟ್ ಆಗುವುದಕ್ಕೆ ಸರ್ಕಾರದ ಹೊಣಗೇಡಿತನ ಅಂದ್ರ ಹೇಗೆ? ಎಂದು ಮರುಪ್ರಶ್ನೆ ಮಾಡಿದರು.

ಯಾರು ಬೋರ್ಡ್ ನಿರ್ವಹಿಸುತ್ತಾರೆ ಎಂಬುದು ಮುಖ್ಯ. ಬಿಜೆಪಿ ಅವರು ಅದರ ಬಗ್ಗೆ ತಿಳಿದುಕೊಳ್ಳಲಿ. ಕ್ರಸ್ಟ್‌ ಗೇಟ್ ಕಟ್ ಆಗಿದೆ. ಅದರಿಂದ ನೀರು ಪೋಲ್ ಆಗಿದೆ. ಇನ್ನು ಸೆಪ್ಟೆಂಬರ್ ವರೆಗೂ ಮಳೆ ಇದೆ.‌ ಮಳೆಯಿಂದ ಮತ್ತೆ ಜಲಾಶಯ ತುಂಬುತ್ತೆ ಎನ್ನುವ ಆಶಾಭಾವನೆ ಇರಲಿ ಎಂದರು.

ಇದನ್ನೂ ಓದಿ: Viral: ಭಾರತಕ್ಕೆ‌ ಅವಮಾನ‌ ತೋರಿದ ಆರೋಪ‌.. ಮಧ್ಯರಾತ್ರಿ‌ ಕ್ಯಾಬ್ ನಿಂದ ಹೊರದಬ್ಬಿದ ಉಬರ್ ಚಾಲಕ (ವೈರಲ್ ವಿಡಿಯೋ ನೋಡಿ)

ರೈತರ ಹಿತದೃಷ್ಟಿಯಿಂದ ಗೇಟ್ ದುರಸ್ತಿ ಮುಖ್ಯ. ಮಳೆ ಬರುವುದಾಗಿ ಹವಮಾನ ಇಲಾಖೆ ಮನಸ್ಸೂಚನೆ ನೀಡಿದೆ. ಮತ್ತೆ ಮಳೆಯಿಂದ ಜಲಾಶಯ ಭರ್ತಿಯಾಗುತ್ತೆ. ನಾನು ಯಾರು ಮೇಲೂ ಗೂಬೆ ಕೂರಿಸುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ‌ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದರು.

Latest News

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ವಿನಂತಿಸಿದರು. ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಆ.23ರಂದು ಮದ್ಯಾಹ್ನ 12ಗಂಟೆಗೆ ಸಂಗೊಳ್ಳಿ ರಾಯಣ್ಣನ ಜಾತ್ರೆಯ ಸಮಾರಂಭವಿದ್ದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಪ.ಪೂ. ನಿರಂಜನಾನOದಪುರಿ ಮಹಾಸ್ವಾಮೀಜಿಗಳು, ವಿವಿಧ ಜಿಲ್ಲೆಗಳ ಹರಗುರು ಚರಮೂರ್ತಿಗಳು, ಹುಲಜಂತಿ ಮಾಳಿಂಗರಾಯ ಮಹಾರಾಜರು, ರಾಜ್ಯದ ಮಂತ್ರಿ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ ಕೃತಿ ಲೋಕಾರ್ಪಣೆ ಹಾಗೂ ಸಾಧಕ ಕಲಾವಿದರಿಗೆ ಗೌರವ ಸನ್ಮಾನ ಕಾರ್ಯಕ್ರಮ ಆ.22 ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಕುಂಟೋಜಿ ಭಾವೈಕ್ಯತೆ ಮಠದ ಚೆನ್ನವೀರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸುವರು.ಬಸರಕೋಡ ಪವಾಡ ಬಸವೇಶ್ವರ ಕಮೀಟಿ ಅಧ್ಯಕ್ಷ ಕೆ.ವಾಯ್.ಬಿರಾದಾರ ಉದ್ಘಾಟಿಸುವರು.ಎಸ್.ಜಿ.ವಿ.ಸಿ ಕಾಲೇಜಿನ ಕಾರ್ಯದರ್ಶಿ ಅಶೋಕ ತಡಸದ ಕೃತಿ ಲೋಕಾರ್ಪಣೆ ಮಾಡುವರು.ಕರ್ನಾಟಕ