Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

ಕೊಪ್ಪಳ: ಮಳೆಯ ಅಬ್ಬರಕ್ಕೆ ಭರ್ತಿಯಾಗಿರುವ ತುಂಗಭದ್ರಾ ಜಲಾಶಯದ (Tungabhadra dam) 19ನೇ ಗೇಟ್‌ನ ಚೈನ್‌ ಲಿಂಕ್ ಮುರಿದಿದ್ದು, ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಆತಂಕ ಉಂಟಾಗಿದೆ.

ಏತನ್ಮಧ್ಯೆ, ಬೆಂಗಳೂರು, ಚೆನ್ನೈ, ಹೈದರಾಬಾದಿನಿಂದ ತಜ್ಞರ ತಂಡ ಕ್ರೆಸ್ಟ್ ಗೇಟ್ ದುರಸ್ತಿ ಕಾರ್ಯಕ್ಕಾಗಿ ಜಲಾಶಯಕ್ಕೆ ಭೇಟಿ ನೀಡಲಿದೆ.

Join Our Telegram: https://t.me/dcgkannada

ಕೊಪ್ಪಳ ತಾಲೂಕಿನ ಮುನಿರಾಬಾದ್‌ನಲ್ಲಿ ತುಂಗಭದ್ರಾ ನದಿಗೆ ಅಡ್ಡಲಾಗಿ ಜಲಾಶಯ (Tungabhadra dam) ನಿರ್ಮಾಣ ಮಾಡಲಾಗಿದೆ. ಶನಿವಾರ ಮಧ್ಯರಾತ್ರಿ ಜಲಾಶಯದ ಕ್ರೆಸ್ಟ್‌ ಗೇಟ್ ನಂಬರ್ 19ರ ಚೈನ್ ಲಿಂಕ್ ಮುರಿದು ಹೋಗಿದೆ. ಒಂದೇ ಗೇಟ್‌ ಮೇಲೆ ಒತ್ತಡ ಹೆಚ್ಚಾಗಿ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಗೇಟ್ ಮುರಿದ ಪರಿಣಾಮ ನೀರು ರಭಸವಾಗಿ ನುಗ್ಗುತ್ತಿದ್ದು, ಜಲಾಶಯದ ಹೊರ ಹರಿವು 70 ರಿಂದ 1 ಲಕ್ಷ ಕ್ಯುಸೆಕ್‌ಗೆ ಏರಿಕೆಯಾಗಿದೆ. ಪೂರ್ಣ ಭರ್ತಿಯಾಗಿರುವ ಜಲಾಶಯದ ಒಂದು ಕ್ರೆಸ್ಟ್‌ ಗೇಟ್‌ನ ಚೈನ್ ಲಿಂಕ್ ಮುರಿದಿದ್ದು, ತುಂಗಭದ್ರಾ ನದಿ ಪಾತ್ರದ ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಇದನ್ನೂ ಓದಿ: TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

ಸದ್ಯ, 105 ಟಿಎಂಸಿ ಸಾಮರ್ಥ್ಯದ ಜಲಾಶಯ (Tungabhadra dam) ಸಂಪೂರ್ಣ ಭರ್ತಿಯಾಗಿದೆ. ಗೇಟ್ ಸಂಖ್ಯೆ 19 ರಿಂದ 35 ರಿಂದ 45 ಸಾವಿರ ಕ್ಯುಸೆಕ್‌ ನೀರು ನದಿಗೆ ಹರಿಸಲಾಗುತ್ತಿದೆ. ಉಳಿದ ಗೇಟ್‌ಗಳಿಂದ ಸುಮಾರು 75 ಸಾವಿರ ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದರೆ ಮಾತ್ರವೇ ಗೇಟ್‌ಗೆ ಏನಾಗಿದೆ ಎಂಬುದನ್ನು ನೋಡುವುದಕ್ಕೆ ಸಾಧ್ಯ. ಆದ್ದರಿಂದ ನದಿ ಪಾತ್ರದ ಜನರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ದುರಸ್ತಿಗೆ ಜಲಾಶಯದ ಅರ್ಧ ನೀರು ಖಾಲಿಯಾಗಬೇಕು:
ದುರಸ್ತಿ ಮಾಡಬೇಕಾದರೇ ಜಲಾಶಯದಲ್ಲಿನ 60 ಟಿಎಂಸಿ ನೀರು ಖಾಲಿ ಮಾಡಬೇಕಾಗುತ್ತದೆ. ಜಲಾಶಯದ ಮೂಲ ವಿನ್ಯಾಸದ ಪ್ರತಿ ತರಿಸಿಕೊಳ್ಳಲಾಗಿದ್ದು, ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ತೀರ್ಮಾನಿಸಲಾಗುತ್ತದೆ. ನೀರಿನ ಹೊರ ಹರಿವಿನ ಪ್ರಮಾಣವನ್ನು 1 ರಿಂದ 2 ಲಕ್ಷ ಕ್ಯುಸೆಕ್‌ಗೆ ಏರಿಸಬೇಕು. ನೀರು ಕಡಿಮೆಯಾದ ಬಳಿಕ ತುಂಡಾದ ಚೈನ್‌ ಲಿಂಕ್‌ ಸರಿಪಡಿಸಲು ಸಾಧ್ಯವಾಗುತ್ತದೆ. ದುರಸ್ತಿಗೆ ಅಗತ್ಯವಾಗಿ ಬೇಕಾದ ನೀರು ಕಡಿಮೆ ಮಾಡಲು ಕನಿಷ್ಠ 3- 4 ದಿನವಾದರೂ ಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊಪ್ಪಳ – ಹೊಸಪೇಟೆ ಗಡಿಭಾಗದಲ್ಲಿರುವ ಜಲಾಶಯದ ಕರ್ನಾಟಕದ ವಿವಿಧ ಜಿಲ್ಲೆಗಳು, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಕ್ಕೆ ಜೀವನಾಡಿಯಾಗಿದೆ. ಮಲೆನಾಡು ಭಾಗದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ತುಂಗ ಮತ್ತು ಭದ್ರಾ ನದಿಗಳು ಮೈದುಂಬಿ ಹರಿದಿವೆ. ಆದ್ದರಿಂದ ಜಲಾಶಯ ಜುಲೈನಲ್ಲಿಯೇ ಸಂಪೂರ್ಣ ಭರ್ತಿಯಾಗಿದೆ.

ತುಂಗಭದ್ರಾ ಜಲಾಶಯದ (Tungabhadra dam) ಪೂರ್ಣ ಮಟ್ಟ 1633 ಅಡಿಗಳು. ಸದ್ಯದ ಮಾಹಿತಿಯಂತೆ ಜಲಾಶಯದಲ್ಲಿ 1632 ಅಡಿಗಳ ನೀರಿನ ಸಂಗ್ರಹವಿದೆ. 105 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿ 10 ಟಿಎಂಸಿ ಅಡಿ ನೀರಿದೆ. ಜಲಾಶಯಕ್ಕೆ ಒಳಹರಿವು 45,086 ಕ್ಯುಸೆಕ್ ಇದೆ.

ಸಿಎಂ, ಡಿಸಿಎಂಗೆ ಮಾಹಿತಿ:
ಜಲಾಶಯಕ್ಕೆ ಭಾನುವಾರ ಬೆಳಗಿನ ಜಾವ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘19ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಮುರಿದಿರುವ ಕಾರಣ ಅನಿವಾರ್ಯವಾಗಿ ನೀರು ಹೊರಬಿಡಬೇಕಾಗಿದೆ. ಈ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ.

ಸದ್ಯದ ಮಟ್ಟಿಗೆ 60ರಿಂದ 65 ಟಿಎಂಸಿ ಅಡಿಗೂ ಹೆಚ್ಚು ನೀರು ಖಾಲಿ ಮಾಡಬೇಕಾಗುತ್ತದೆ. ಕನಿಷ್ಠ 20 ಅಡಿ ನೀರು ಖಾಲಿಯಾದರೆ ಮಾತ್ರ ನಿಖರವಾಗಿ ಸಮಸ್ಯೆ ಏನಾಗಿದೆ ಎನ್ನುವುದು ಗೊತ್ತಾಗುತ್ತದೆ’ ಎಂದು ತಿಳಿಸಿದರು.

ಆಣೆಕಟ್ಟು ನಿರ್ಮಿಸಿದ ವಿನ್ಯಾಸವನ್ನು ತರಿಸಿಕೊಳ್ಳಲಾಗಿದ್ದು, ನೀರಿನ ರಭಸ ಹೆಚ್ಚಿರುವ ಕಾರಣ ಕೆಳಗಡೆ ಇಳಿದು ಕೆಲಸಮಾಡಲು ಆಗುವುದಿಲ್ಲ. ಸದ್ಯಕ್ಕೆ ಒಂದು ಲಕ್ಷ ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ. ನೀರು ಹೊರಬಿಡುವ ಪ್ರಮಾಣ 2.50 ಲಕ್ಷ ಕ್ಯುಸೆಕ್ ದಾಟಿದರೆ ಮಾತ್ರ ಜನರಿಗೆ ತೊಂದರೆಯಾಗುತ್ತದೆ. ಈ ಘಟನೆ ಬಗ್ಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರಿಗೆ ಮಾಹಿತಿ ನೀಡಲಾಗಿದೆ’ ಎಂದರು.

ಕಡಿಮೆ ಸಮಯದಲ್ಲಿ ಸಮಸ್ಯೆ ಪರಿಹರಿಸಲು ಬೆಂಗಳೂರು, ಹೈದರಾಬಾದ್, ಚೆನ್ನೈನಿಂದ ತಜ್ಞರ ತಂಡ ಬರಲಿದೆ. ಬಳಿಕ ಏನು ಮಾಡಬೇಕು ಎನ್ನುವುದನ್ನು ನಿರ್ಧರಿಸಲಾಗುವುದು ಎಂದು ಹೇಳಿದರು.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್