Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

ಕೊಪ್ಪಳ: ಮಳೆಯ ಅಬ್ಬರಕ್ಕೆ ಭರ್ತಿಯಾಗಿರುವ ತುಂಗಭದ್ರಾ ಜಲಾಶಯದ (Tungabhadra dam) 19ನೇ ಗೇಟ್‌ನ ಚೈನ್‌ ಲಿಂಕ್ ಮುರಿದಿದ್ದು, ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಆತಂಕ ಉಂಟಾಗಿದೆ.

ಏತನ್ಮಧ್ಯೆ, ಬೆಂಗಳೂರು, ಚೆನ್ನೈ, ಹೈದರಾಬಾದಿನಿಂದ ತಜ್ಞರ ತಂಡ ಕ್ರೆಸ್ಟ್ ಗೇಟ್ ದುರಸ್ತಿ ಕಾರ್ಯಕ್ಕಾಗಿ ಜಲಾಶಯಕ್ಕೆ ಭೇಟಿ ನೀಡಲಿದೆ.

Join Our Telegram: https://t.me/dcgkannada

ಕೊಪ್ಪಳ ತಾಲೂಕಿನ ಮುನಿರಾಬಾದ್‌ನಲ್ಲಿ ತುಂಗಭದ್ರಾ ನದಿಗೆ ಅಡ್ಡಲಾಗಿ ಜಲಾಶಯ (Tungabhadra dam) ನಿರ್ಮಾಣ ಮಾಡಲಾಗಿದೆ. ಶನಿವಾರ ಮಧ್ಯರಾತ್ರಿ ಜಲಾಶಯದ ಕ್ರೆಸ್ಟ್‌ ಗೇಟ್ ನಂಬರ್ 19ರ ಚೈನ್ ಲಿಂಕ್ ಮುರಿದು ಹೋಗಿದೆ. ಒಂದೇ ಗೇಟ್‌ ಮೇಲೆ ಒತ್ತಡ ಹೆಚ್ಚಾಗಿ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಗೇಟ್ ಮುರಿದ ಪರಿಣಾಮ ನೀರು ರಭಸವಾಗಿ ನುಗ್ಗುತ್ತಿದ್ದು, ಜಲಾಶಯದ ಹೊರ ಹರಿವು 70 ರಿಂದ 1 ಲಕ್ಷ ಕ್ಯುಸೆಕ್‌ಗೆ ಏರಿಕೆಯಾಗಿದೆ. ಪೂರ್ಣ ಭರ್ತಿಯಾಗಿರುವ ಜಲಾಶಯದ ಒಂದು ಕ್ರೆಸ್ಟ್‌ ಗೇಟ್‌ನ ಚೈನ್ ಲಿಂಕ್ ಮುರಿದಿದ್ದು, ತುಂಗಭದ್ರಾ ನದಿ ಪಾತ್ರದ ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಇದನ್ನೂ ಓದಿ: TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

ಸದ್ಯ, 105 ಟಿಎಂಸಿ ಸಾಮರ್ಥ್ಯದ ಜಲಾಶಯ (Tungabhadra dam) ಸಂಪೂರ್ಣ ಭರ್ತಿಯಾಗಿದೆ. ಗೇಟ್ ಸಂಖ್ಯೆ 19 ರಿಂದ 35 ರಿಂದ 45 ಸಾವಿರ ಕ್ಯುಸೆಕ್‌ ನೀರು ನದಿಗೆ ಹರಿಸಲಾಗುತ್ತಿದೆ. ಉಳಿದ ಗೇಟ್‌ಗಳಿಂದ ಸುಮಾರು 75 ಸಾವಿರ ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದರೆ ಮಾತ್ರವೇ ಗೇಟ್‌ಗೆ ಏನಾಗಿದೆ ಎಂಬುದನ್ನು ನೋಡುವುದಕ್ಕೆ ಸಾಧ್ಯ. ಆದ್ದರಿಂದ ನದಿ ಪಾತ್ರದ ಜನರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ದುರಸ್ತಿಗೆ ಜಲಾಶಯದ ಅರ್ಧ ನೀರು ಖಾಲಿಯಾಗಬೇಕು:
ದುರಸ್ತಿ ಮಾಡಬೇಕಾದರೇ ಜಲಾಶಯದಲ್ಲಿನ 60 ಟಿಎಂಸಿ ನೀರು ಖಾಲಿ ಮಾಡಬೇಕಾಗುತ್ತದೆ. ಜಲಾಶಯದ ಮೂಲ ವಿನ್ಯಾಸದ ಪ್ರತಿ ತರಿಸಿಕೊಳ್ಳಲಾಗಿದ್ದು, ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ತೀರ್ಮಾನಿಸಲಾಗುತ್ತದೆ. ನೀರಿನ ಹೊರ ಹರಿವಿನ ಪ್ರಮಾಣವನ್ನು 1 ರಿಂದ 2 ಲಕ್ಷ ಕ್ಯುಸೆಕ್‌ಗೆ ಏರಿಸಬೇಕು. ನೀರು ಕಡಿಮೆಯಾದ ಬಳಿಕ ತುಂಡಾದ ಚೈನ್‌ ಲಿಂಕ್‌ ಸರಿಪಡಿಸಲು ಸಾಧ್ಯವಾಗುತ್ತದೆ. ದುರಸ್ತಿಗೆ ಅಗತ್ಯವಾಗಿ ಬೇಕಾದ ನೀರು ಕಡಿಮೆ ಮಾಡಲು ಕನಿಷ್ಠ 3- 4 ದಿನವಾದರೂ ಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊಪ್ಪಳ – ಹೊಸಪೇಟೆ ಗಡಿಭಾಗದಲ್ಲಿರುವ ಜಲಾಶಯದ ಕರ್ನಾಟಕದ ವಿವಿಧ ಜಿಲ್ಲೆಗಳು, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಕ್ಕೆ ಜೀವನಾಡಿಯಾಗಿದೆ. ಮಲೆನಾಡು ಭಾಗದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ತುಂಗ ಮತ್ತು ಭದ್ರಾ ನದಿಗಳು ಮೈದುಂಬಿ ಹರಿದಿವೆ. ಆದ್ದರಿಂದ ಜಲಾಶಯ ಜುಲೈನಲ್ಲಿಯೇ ಸಂಪೂರ್ಣ ಭರ್ತಿಯಾಗಿದೆ.

ತುಂಗಭದ್ರಾ ಜಲಾಶಯದ (Tungabhadra dam) ಪೂರ್ಣ ಮಟ್ಟ 1633 ಅಡಿಗಳು. ಸದ್ಯದ ಮಾಹಿತಿಯಂತೆ ಜಲಾಶಯದಲ್ಲಿ 1632 ಅಡಿಗಳ ನೀರಿನ ಸಂಗ್ರಹವಿದೆ. 105 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿ 10 ಟಿಎಂಸಿ ಅಡಿ ನೀರಿದೆ. ಜಲಾಶಯಕ್ಕೆ ಒಳಹರಿವು 45,086 ಕ್ಯುಸೆಕ್ ಇದೆ.

ಸಿಎಂ, ಡಿಸಿಎಂಗೆ ಮಾಹಿತಿ:
ಜಲಾಶಯಕ್ಕೆ ಭಾನುವಾರ ಬೆಳಗಿನ ಜಾವ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘19ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಮುರಿದಿರುವ ಕಾರಣ ಅನಿವಾರ್ಯವಾಗಿ ನೀರು ಹೊರಬಿಡಬೇಕಾಗಿದೆ. ಈ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ.

ಸದ್ಯದ ಮಟ್ಟಿಗೆ 60ರಿಂದ 65 ಟಿಎಂಸಿ ಅಡಿಗೂ ಹೆಚ್ಚು ನೀರು ಖಾಲಿ ಮಾಡಬೇಕಾಗುತ್ತದೆ. ಕನಿಷ್ಠ 20 ಅಡಿ ನೀರು ಖಾಲಿಯಾದರೆ ಮಾತ್ರ ನಿಖರವಾಗಿ ಸಮಸ್ಯೆ ಏನಾಗಿದೆ ಎನ್ನುವುದು ಗೊತ್ತಾಗುತ್ತದೆ’ ಎಂದು ತಿಳಿಸಿದರು.

ಆಣೆಕಟ್ಟು ನಿರ್ಮಿಸಿದ ವಿನ್ಯಾಸವನ್ನು ತರಿಸಿಕೊಳ್ಳಲಾಗಿದ್ದು, ನೀರಿನ ರಭಸ ಹೆಚ್ಚಿರುವ ಕಾರಣ ಕೆಳಗಡೆ ಇಳಿದು ಕೆಲಸಮಾಡಲು ಆಗುವುದಿಲ್ಲ. ಸದ್ಯಕ್ಕೆ ಒಂದು ಲಕ್ಷ ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ. ನೀರು ಹೊರಬಿಡುವ ಪ್ರಮಾಣ 2.50 ಲಕ್ಷ ಕ್ಯುಸೆಕ್ ದಾಟಿದರೆ ಮಾತ್ರ ಜನರಿಗೆ ತೊಂದರೆಯಾಗುತ್ತದೆ. ಈ ಘಟನೆ ಬಗ್ಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರಿಗೆ ಮಾಹಿತಿ ನೀಡಲಾಗಿದೆ’ ಎಂದರು.

ಕಡಿಮೆ ಸಮಯದಲ್ಲಿ ಸಮಸ್ಯೆ ಪರಿಹರಿಸಲು ಬೆಂಗಳೂರು, ಹೈದರಾಬಾದ್, ಚೆನ್ನೈನಿಂದ ತಜ್ಞರ ತಂಡ ಬರಲಿದೆ. ಬಳಿಕ ಏನು ಮಾಡಬೇಕು ಎನ್ನುವುದನ್ನು ನಿರ್ಧರಿಸಲಾಗುವುದು ಎಂದು ಹೇಳಿದರು.

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ