Tungabhadra dam: Installation of first stop log gate

Tungabhadra dam: ಒಂದನೇ ಸ್ಟಾಪ್ ಲಾಗ್ ಗೇಟ್ ಅಳವಡಿಕೆ‌.. ಸಂಭ್ರಮಾಚರಣೆಯಲ್ಲಿ ಸಚಿವ ತಂಗಡಗಿ, ಸಂಸದ ಹಿಟ್ನಾಳ್ ಭಾಗಿ‌

Tungabhadra dam: ಒಂದನೇ ಸ್ಟಾಪ್ ಲಾಗ್ ಗೇಟ್ ಅಳವಡಿಕೆ‌.. ಸಂಭ್ರಮಾಚರಣೆಯಲ್ಲಿ ಸಚಿವ ತಂಗಡಗಿ, ಸಂಸದ ಹಿಟ್ನಾಳ್ ಭಾಗಿ‌

ಕೊಪ್ಪಳ: ತುಂಗಭದ್ರಾ ಜಲಾಶಯದ (Tungabhadra dam) 19ನೇ ಕ್ರಸ್ಟ್ ಗೇಟ್ ನೀರಿನಲ್ಲಿ ಕೊಚ್ಚಿ ಹೋದ ಹಲವು ದಿನಗಳ ಬಳಿಕ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಮೊದಲ ಹಂತದ ಯಶಸ್ಸು ಸಿಕ್ಕಿದೆ.

ಹೌದು, ಗೇಟ್ ಡಿಸೈನ್ ತಜ್ಞ ಕನ್ಹಯ್ಯ ನಾಯ್ಡು ನೇತೃತ್ವದಲ್ಲಿ ಆಪರೇಷನ್ ತುಂಗಭದ್ರಾ ಡ್ಯಾಂನ ಒಂದನೇ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ.

Join Our Telegram: https://t.me/dcgkannada

ಕನ್ಹಯ್ಯ ನಾಯ್ಡು ನೇತೃತ್ವದಲ್ಲಿ ಸ್ಟಾಪ್ ಲಾಗ್ ಗೇಟ್ ಅಳವಡಿಸಲಾಗಿದೆ. ಒಂದನೇ ಗೇಟ್ ಅಳವಡಿಕೆ ಯಶಸ್ವಿಯಾಗಿದ್ದು, ಮತ್ತೊಂದು ಸ್ಟಾಪ್ ಲಾಗ್ ಗೇಟ್ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ತಿಲಿದು ಬಂದಿದೆ.

ಎರಡು ದಿನಗಳ ಶ್ರಮದಿಂದ ಮೊದಲ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿಯಾದ ಹಿನ್ನೆಲೆ ತುಂಗಭದ್ರಾ ಜಲಾಶಯದ ಮೇಲೆ ಸಂಭ್ರಮಾಚರಣೆ ನಡೆಸಲಾಗಿದೆ. ಈ ವೇಳೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ್ ಮೊದಲಾದವರಿದ್ದರು. ಉಳಿದ ಎಲಿಮೆಂಟ್ ಗಳನ್ನು ಅಳವಡಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ವಿದ್ಯುತ್ ಪ್ರವಹಿಸಿ ಹೊಲದಲ್ಲಿ ದಂಪತಿಗಳ ದಾರುಣ ಸಾವು!

Tungabhadra dam: ಕಟ್ ಆದ ಗೇಟ್ ಚೈನ್ ಅಳವಡಿಸುವಾಗ ಅವಘಡ!

ಕೊಪ್ಪಳ: ತುಂಗಭದ್ರಾ ಡ್ಯಾಂನ 19ನೇ ಗೇಟ್ ಚೈನ್ ಲಿಂಕ್ ಕಟ್ ಆಗಿ ನೀರಿನಲ್ಲಿ ಕೊಚ್ಚಿ ಹೋಗಿರುವ ಹಿನ್ನೆಲೆಯಲ್ಲಿ ಗೇಟ್ ಅಳವಡಿಕೆ ಕಾರ್ಯ ನಡೆದಿದ್ದು, ಅಚಾರ್ತುವೊಂದು ಸಂಭವಿಸಿತ್ತು.

ಹೌದು, ಕೊಪ್ಪಳ ಜಿಲ್ಲೆಯ ಮುನಿರಾಬಾದ್ ತುಂಗಭದ್ರಾ ಡ್ಯಾಂ ಬಳಿ ಗೇಟ್ ಅಳವಡಿಕೆ ನಡೆಸಲಾಗುತ್ತಿದೆ. ತಜ್ಞರು ಹಾಗೂ ಸಿಬ್ಬಂದಿ ಟ್ರಕ್ ಮೂಲಕವಾಗಿ ಟಿಬಿ ಡ್ಯಾಂ ಬಳಿ ಬೃಹತ್ ಗೇಟ್ ಸಾಗಿಸುವಾಗ ಅವಘಡ ಸಂಭವಿಸಿತ್ತು.

ಟ್ರಕ್ ನಿಂದ ಗೇಟ್ ಇಳಿಸುತ್ತಿದ್ದ ವೇಳೆ ಏಕಾಏಕಿ ಬ್ಯಾಲೆನ್ಸ್ ತಪ್ಪಿದೆ. ಗೇಟ್ ಅನ್ನು ಡ್ಯಾಂನ ಮೇಲ್ಭಾಗಕ್ಕೆ ಬೆಲ್ಟ್ ಕಟ್ಟಿ ಎತ್ತುವಾಗ ಒಮ್ಮೆಲೆ ಬ್ಯಾಲೆನ್ಸ್ ತಪ್ಪಿದೆ. ಬಳಿಕ ಸಿಬ್ಬಂದಿ ನಿಧಾನವಾಗಿ ಗೇಟ್ ಇಳಿಸಿದ್ದಾರೆ‌. ಯಾವುದೇ ಅಪಾಯ ಸಂಭವಿಸಿಲ್ಲ.

ಟಿಬಿ ಡ್ಯಾಂಗೆ ಗೇಟ್ ಅಳವಡಿಸುವುದೇ ಒಂದು ದೊಡ್ಡ ಚಾಲೇಂಜ್. ಇನ್ನು, ಮೂರು ದಿನಗಳಲ್ಲಿ ಶುಭ ಸುದ್ದಿ ಕೊಡುತ್ತೇವೆ ಎಂದು ತಜ್ಞರು ತಿಳಿಸಿದ್ದರು. ಈಗ ಮೊದಲು ಗೇಟ್ ಅಳವಡಿಸಿದ್ದು, ಶೀರ್ಘದಲ್ಲಿಯೇ ಪೂರ್ಣ ಪ್ರಮಾಣದಲ್ಲ ಕಾಮಗಾರಿ ನಡೆಸಲಾಗುವುದು ಎಂದು ವರದಿಯಾಗಿದೆ.

Latest News

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ

ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟಸಭೆ : ಅಶ್ವತ ಟಿ ಮರೀಗೌಡ್ರು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಈ ಸಭೆಯನ್ನು ಹರಿಹರ ತಾಲ್ಲೂಕಿನ ಹೊಸಪೇಟೆ ಬೀದಿ ಶ್ರೀ ಮುರುಘಾರಾಜೇಂದ್ರ ಕಲ್ಯಾಣ ಮಂಟಪ ಎದುರು ಶ್ರೀ ಹರಿಹರೇಶ್ವರ ಕಟ್ಟಡ ಕಾರ್ಮಿಕರ ಸಂಘ ಕಛೇರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಅಶ್ವತ ಟಿ ಮರೀಗೌಡ್ರು, ಶಿವಕುಮಾರ್ ಗೌಡ, ರಮೇಶ್, ಲೋಕೇಶ್ ನಾಯಕ, ಹಾಲೇಶ್, ಭೀಮಣ್ಣ, ಶಶಿನಾಯ್ಕ್ , ಶಿವಣ್ಣ, ಪರಶುರಾಮ, ನಾಗರಾಜು,

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ಮುದ್ದೇಬಿಹಾಳ : ಪಟ್ಟಣದ ವಿಜಯಪುರ ರಸ್ತೆಯ ಸಾಯಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ. ಸಾಯಿ ಬಡಾವಣೆ ನಿವಾಸಿ ಮಹಿಬೂಬ ಕುಮಸಿ ಅವರ ಮನೆಯಲ್ಲಿದ್ದ ಫ್ರಿಜ್, ಫ್ಯಾನ್ ಸೇರಿದಂತೆ ಮನೆ ಬಳಕೆ ವಸ್ತುಗಳು ಹಾನಿಯಾಗಿವೆ ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಠಾಣಾಧಿಕಾರಿ ನಾಗೇಶ ರಾಠೋಡ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು.