Tungabhadra dam Installation of five stop log gate element complete

Tungabhadra dam: ಐದೂ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಪೂರ್ಣ.. Good News

Tungabhadra dam: ಐದೂ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಪೂರ್ಣ.. Good News

ಕೊಪ್ಪಳ: ಟಿಬಿ ಡ್ಯಾಮ್ (Tungabhadra dam) ಗೆ ಎಲ್ಲಾ 5 ಸ್ವಾಪ್ ಲಾಗ್ ಗೇಟ್ ಗಳನ್ನ ಯಶಸ್ವಿಯಾಗಿ ಅಳವಡಿಕೆ ಮಾಡಲಾಗಿದ್ದು, ಸತತ ಮೂರು ದಿನಗಳ ಪರಿಶ್ರಮದ ಫಲವಾಗಿ ಶನಿವಾರ ಸಂಜೆ ಡ್ಯಾಮ್ ನ 19ನೇ ಗೇಟ್ ಗೆ ಸ್ಟಾಪ್ ಲಾಗ್ ಗೇಟ್ ಕೂರಿಸಲಾಗಿದೆ.

ಈ ಮೂಲಕ ಡ್ಯಾಂ ನಿಂದ ಹರಿದುಹೋಗುತ್ತಿದ್ದ ಅಪಾರ ಪ್ರಮಾಣದ ನೀಗವ ಸಂರಕ್ಷಿಸುವಲ್ಲಿ ಕನ್ನಯ್ಯ ನಾಯ್ಡು ಮತ್ತು ತಂಡ ಯಶಸ್ವಿಯಾಗಿದೆ.

Join Our Telegram: https://t.me/dcgkannada

ಟಿಬಿ ಡ್ಯಾಮ್ (Tungabhadra dam) ನ ಗೇಟ್ ನಂಬರ್ 19 ಮುರಿದ ಸಂದರ್ಭದಲ್ಲಿ ಅಚ್ಚುಕಟ್ಟು ಪ್ರದೇಶದಲ್ಲಿ ಆತಂಕ ಮನೆ ಮಾಡಿತ್ತು. ಗೇಟ್ ರಿಪೇರಿ ಕಾರ್ಯ ಮಾಡಲು ಜಲಾಶಯದ ಅರ್ಧದಷ್ಟು ನೀರನ್ನ ಖಾಲಿ ಮಾಡಬೇಕು ಎಂದು ಅಂದಾಜಿಸಲಾಗಿತ್ತು. ಆದರೆ ಸುಮಾರು 90 ಟಿಎಂಸಿ ನೀರನ್ನು ಉಳಿಸಿಕೊಳ್ಳುವಲ್ಲಿ ತಜ್ಞರ ತಂಡ ಸಕ್ಸಸ್ ಆಗಿದೆ.

ಇದನ್ನೂ ಓದಿ: Death News: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವ ಸ್ಥಳದಲ್ಲಿಯೇ ದುರ್ಮರಣ..! (ವಿಡಿಯೋ ನೋಡಿ)

ಭಾರತದಲ್ಲಿಯೇ ಈ ರೀತಿಯ ಸ್ಟಾಪ್ ಲಾಲ್ ಗೇಟ್ ಅಳವಡಿಕೆ ವಿಧಾನ ಇದೇ ಮೊದಲ ಪ್ರಯತ್ನವಾಗಿದೆ. ಇದೀಗ ಈ ಕಾರ್ಯಾಚರಣೆ ಯಶಸ್ವಿಯಾಗಿರೋದು ಸರ್ಕಾರ, ರೈತರು ಮತ್ತು ಕಾರ್ಯಾಚರಣೆಯಲ್ಲಿ ತೊಡಗಿದ್ದ ತಂಡದ ಖುಷಿ ತಂದಿದೆ. ಆದರೆ, ಇದು ತಾತ್ಕಾಲಿಕ ಪರಿಹಾರ‌ವಾಗಿದೆ. ಸದ್ಯಕ್ಕೆ ಜಲಾಶಯದ ನೀರನ್ನ ಉಳಿಸಿಕೊಳ್ಳುವಲ್ಲಿ ಉಪಯುಕ್ತವಾಗಿದೆ.

ಮುಂದಿನ ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ ಇಳಿಮುಖವಾದ ನಂತರ ಪೂರ್ಣ ಪ್ರಮಾಣದ ಗೇಟ್ ಅಳವಡಿಕೆ ಕಾಮಗಾರಿ ಕೈಗೊಳ್ಳಬೇಕಿದೆ. ಒಟ್ಟಾರೆ, ನೀರು ಪೋಲಾಗುವುದನ್ನು ತಡೆಯುವಲ್ಲಿ ತಂತ್ರಜ್ಞರ ತಂಡ ಯಶಸ್ಸು ಕಂಡಿದೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ