HD Kumaraswamy on Tungabhadra dam

Tungabhadra dam: ಕಾಸಿಗಾಗಿ ಪೋಸ್ಟಿಂಗ್.. ತುಂಗಭದ್ರಾ ಸರಪಳಿ ಕಟ್: ಹೆಚ್.ಡಿ. ಕುಮಾರಸ್ವಾಮಿ‌ ಗಂಭೀರ ಆರೋಪ

Tungabhadra dam: ಕಾಸಿಗಾಗಿ ಪೋಸ್ಟಿಂಗ್.. ತುಂಗಭದ್ರಾ ಸರಪಳಿ ಕಟ್: ಹೆಚ್.ಡಿ. ಕುಮಾರಸ್ವಾಮಿ‌ ಗಂಭೀರ ಆರೋಪ

Advt
Advt

 

ಬೆಂಗಳೂರು: ರಾಜ್ಯ ಸರಕಾರ ಹಣ ಪಡೆದು ಪೋಸ್ಟಿಂಗ್ ನೀಡುವುದು ನಿಲ್ಲಿಸಿದರೆ ತುಂಗಭದ್ರಾ ಜಲಾಶಯದಲ್ಲಿ (Tungabhadra dam) ಕ್ರಸ್ಟ್ ಗೇಟ್ ಕೊಚ್ಚಿ ಹೋದಂತಹ ಗಂಭೀರ ಪ್ರಕರಣಗಳು ನಿಲ್ಲುತ್ತವೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಘಟನೆ ಅತ್ಯಂತ ಗಂಭೀರವಾದದ್ದು. ನಾನು ಸರಕಾರಕ್ಕೆ ಒಂದು ಸಲಹೆ ಕೊಡಲು ಬಯಸುತ್ತೇನೆ. ಅಧಿಕಾರಿಗಳ ವರ್ಗಾವಣೆ ಮಾಡುವಾಗ ಹಣ ತೆಗೆದುಕೊಂಡು ವರ್ಗ ಮಾಡುವ ಕೆಲಸ ಬಿಡಿ ಎಂದು ತರಾಟೆಗೆ ತೆಗೆದುಕೊಂಡರು.

Join Our Telegram: https://t.me/dcgkannada

ನಾನು ಕೂಡ ಸಿಎಂ ಆಗಿ ಎರಡು ಬಾರಿ ಕೆಲಸ ಮಾಡಿದ್ದೇನೆ. ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ನವರು ಎಷ್ಟರಮಟ್ಟಿಗೆ ತೊಡಗುತ್ತಿದ್ದರು ಎಂದರೆ, ನನಗೆ ಬಹಳ ಹಿಂದೆ ಕೊಡುತ್ತಿದ್ದರು. ನನಗೆ ವರ್ಗಾವಣೆ ಮಾಡುವ ಅಧಿಕಾರ ಇರಲಿಲ್ಲ ಎಂದರು.

ದುಡ್ಡು ಕೊಟ್ಡು ವರ್ಗಾವಣೆ ಮಾಡಿಸಿಕೊಳ್ಳುವ ಅಧಿಕಾರಿಗೆ ಕೆಲಸದ ಕಡೆ ಗಮನ ಎಲ್ಲಿರುತ್ತದೆ. ಕೊಟ್ಟ ದುಡ್ಡನ್ನು ಮರಳಿ ವಸೂಲಿ ಮಾಡಿಕೊಳ್ಳುವ ಕಡೆ ಅವನ ಗಮನ ಇರುತ್ತದೆ. ಅಲ್ಲಿರುವಷ್ಟರಲ್ಲಿ ಅಷ್ಟೂ ಹಣವನ್ನು ಸಂಗ್ರಹ ಮಾಡುವ ಗುರಿ ಹೊಂದಿರುತ್ತಾನೆ. ಹೀಗಾಗಿ ಅವನ ಗಮನವೆಲ್ಲಾ ಹಣದ ಕಡೆಯೇ ಇರುತ್ತದೆ. ಮುಖ್ಯ ಎಂಜಿನಿಯರ್, ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿ ಎಲ್ಲಾ ಉನ್ನತ ಅಧಿಕಾರಿಗಳಿಗೆ ದುಡ್ಡು ತೆಗೆದುಕೊಂಡು ಪೋಸ್ಟಿಂಗ್ ಕೊಡಲಾಗುತ್ತಿದೆ ಎಂದು ಸಚಿವರು ಆರೋಪಿಸಿದರು.

ಇದನ್ನೂ ಓದಿ: CM Siddaramaiah: ಮುಡಾ ಹಗರಣ.. ಸಿಎಂ ಪರ ಸಲ್ಲಿಸಿದ್ದ ಅರ್ಜಿ ವಜಾ.. ಸಿದ್ದುಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ?

ತುಂಗಭದ್ರಾ ಅಣೆಕಟ್ಟು (Tungabhadra dam) ಪ್ರಕರಣದ ಬಗ್ಗೆ ವಿಸ್ತೃತ ತನಿಖೆ ಮಾಡಬೇಕು. ತರಾತುರಿಯಲ್ಲಿ ಮಾಡಲು ಹೋಗಿ ಮತ್ತೇನೋ ಅವಾಂತರ ಮಾಡಿಕೊಳ್ಳಬೇಡಿ. ಪರಿಣಿತರ ನೆರವು ಪಡೆದು ಶಾಶ್ವತವಾಗಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿ. ಮತ್ತೆ ರೈತರಿಗೆ ತೊಂದರೆ ಕೊಡುವುದು ಬೇಡ ಎಂದು ಅವರು ಸಲಹೆ ಮಾಡಿದರು.

ಅಣೆಕಟ್ಟೆಯ ಸುರಕ್ಷತೆಯ ಬಗ್ಗೆ ತಾಂತ್ರಿಕ ಸಮಿತಿ ಪ್ರತೀ ವರ್ಷ ಭೇಟಿ ಕೊಟ್ಟು ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ಮಾಡುತ್ತದೆ. ರೆಡಿಮೇಡ್ ಪ್ರಶ್ನಾವಳಿಗೆ ರೆಡಿಮೇಡ್ ಉತ್ತರ ಬರೆದು ಕಾಟಾಚಾರಕ್ಕೆ ಆ ಕೆಲಸ ಮುಗಿಸುತ್ತದೆ. ಕ್ರಸ್ಟ್ ಗೇಟ್ ಗಳಿಗೆ ಅಳವಡಿಸಿರುವ ಸರಪಳಿಗಳನ್ನು ಕಾಲ ಕಾಲಕ್ಕೆ ಪರಿಶೀಲನೆ ಮಾಡುತ್ತಿರಬೇಕು. ಅವುಗಳಿಗೆ ಹಲವಾರು ವರ್ಷಗಳಿಂದ ಲೂಬ್ರಿಕೇಷನ್ ಮಾಡದ ಕರ್ಣಾಕ್ಕೆ ಈ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

Latest News

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಮುದ್ದೇಬಿಹಾಳ : ಹಂಡೇ ಹನುಮಪ್ಪ ನಾಯಕರ ಇತಿಹಾಸ ಈಗಾಗಲೇ ಆಂಧ್ರಪ್ರದೇಶದ ಸರ್ಕಾರ ತನ್ನ ಶಾಲೆಗಳಲ್ಲಿನ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ 2.20 ಲಕ್ಷ ಕೋಟಿ ರೂ.ಬಿಲ್

ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಮುಧೋಳ: ಮಹಾನ್ ನಾಯಕರ ಕನಸಿನಂತೆ ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆಯಾಗಿದೆ ಎಂದು

ಹಳ್ಳದಲ್ಲಿ ಕೊಚ್ಚಿಹೋದ ಬಾಲಕ-ಯುವಕ ಶವವಾಗಿ ಪತ್ತೆ!

ಹಳ್ಳದಲ್ಲಿ ಕೊಚ್ಚಿಹೋದ ಬಾಲಕ-ಯುವಕ ಶವವಾಗಿ ಪತ್ತೆ!

ಇಳಕಲ್: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್

ಅನೈತಿಕ‌ ಸಂಬಂಧಕ್ಕೆ ಆಲಮೇಲನಲ್ಲಿ ಬಿತ್ತು ಹೆಣ?

ಅನೈತಿಕ‌ ಸಂಬಂಧಕ್ಕೆ ಆಲಮೇಲನಲ್ಲಿ ಬಿತ್ತು ಹೆಣ?

ಆಲಮೇಲ: ಪಟ್ಟಣದಲ್ಲಿ ಯುವಕನನೊರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಫಾರೂಕ ಆಮದಸಾಬ ಲಾಳಸಂಗಿ (26) ಕೊಲೆಯಾದ ವ್ಯಕ್ತಿ. ಕೊಲೆಗೆ ಅನೈತಿಕ ಸಂಭದದ ಶಂಕೆ ವ್ಯಕ್ತವಾಗಿದೆ. ಪೋಲಿಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸಿಂದಗಿ ಸಿಪಿಐ ನಾನಾಗೌಡ ಪೋಲಿಸ್ ಪಾಟೀಲ, ಪಿಎಸ್ಐ ಅರವಿಂದ ಅಂಗಡಿ ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ. ಸ್ವಾನದಳ ಸಿಬ್ಬಂದಿ ಆಗಮಿಸಿ ಶೋಧ ನಡೆಸಿದ್ದಾರೆ.

ಹುಟ್ಟು ಹೋರಾಟಗಾರ ರಾಜಕೀಯ ಮುತ್ಸದಿ ಕಾಶಪ್ಪನವರ ಅಗಲಿಕೆ ಎರಡು ದಶಕಗಳು

ಹುಟ್ಟು ಹೋರಾಟಗಾರ ರಾಜಕೀಯ ಮುತ್ಸದಿ ಕಾಶಪ್ಪನವರ ಅಗಲಿಕೆ ಎರಡು ದಶಕಗಳು

ಹುನಗುಂದ-ಅಖಂಡ ವಿಜಯಪುರ ಮತ್ತು ಬಾಗಲಕೋಟಿ ಜಿಲ್ಲೆಯ ಹುನಗುಂದ ತಾಲೂಕಿನ ಕೃಷ್ಣ ನದಿಯ ದಡದಲ್ಲಿರುವ ಒಂದು ಪುಟ್ಟ ಗ್ರಾಮವಾದ ಹಾವರಗಿಯಲ್ಲಿ ಜನಿಸಿದ ಲಿಂ, ಎಸ್.ಆರ್.ಕಾಶಪ್ಪನವರ ಮೊದಲು ತಾಲೂಕ ಅಭಿವೃದ್ದಿ ಮಂಡಳಿ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ತಮ್ಮ ರಾಜಕೀಯ ಜರ್ನಿ ಆರಂಭಿಸುವ ಮೂಲಕ ರಾಜ್ಯ ಸರ್ಕಾರದ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನದವರಿಗೂ ಸಾಗಿದರು. ಹಮ್ಮು ಬಿಮ್ಮಿಲ್ಲದ ಸರಳ ವ್ಯಕ್ತಿತ್ವದ ರಾಜಕಾರಣಿಯಾಗಿದ್ದರು. ಜಿಗಿಟುತನ ಹಾಗೂ ಜವಾರಿ ಭಾಷೆ ಮತ್ತು ಸ್ವಭಾವ ಅವರನ್ನು ಅಲ್ಲಿಯತನಕ ಕರೆದುಕೊಂಡು