Two injured, one in police custody: Fight on the road over a trivial matter..!

ಇಬ್ಬರಿಗೆ ಗಾಯ,ಒರ್ವ ಪೊಲೀಸ ವಶಕ್ಕೆ:ಕ್ಷುಲ್ಲಕ ವಿಷಯಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ..!

ಇಬ್ಬರಿಗೆ ಗಾಯ,ಒರ್ವ ಪೊಲೀಸ ವಶಕ್ಕೆ:ಕ್ಷುಲ್ಲಕ ವಿಷಯಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ..!

Ad
Ad

ಮುದ್ದೇಬಿಹಾಳ : ರಸ್ತೆಯಲ್ಲಿ ಬೈಕ್ ತಗುಲಿದ ವಿಚಾರಕ್ಕೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಇಬ್ಬರು ವ್ಯಕ್ತಿಗಳು ಮುಖ್ಯರಸ್ತೆಯಲ್ಲೇ ಹೊಡೆದಾಡಿಕೊಂಡಿರುವ ಘಟನೆ ಪಟ್ಟಣದಲ್ಲಿ ಸೋಮವಾರ ಸಾರ್ವಜನಿಕವಾಗಿ ನಡೆದಿದೆ.

Ad
Ad

ಪಟ್ಟಣದ ಐಶ್ವರ್ಯಾ ಹೊಟೇಲ್ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು ಬೈಕ್ ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಕೈಯ್ಯಲ್ಲಿದ್ದ ಬೈಕ್ ಚಾವಿಯಿಂದ ವ್ಯಕ್ತಿಯ ಕಿವಿಗೆ ಚುಚ್ಚಿದ್ದಾನೆ.

ಇದರಿಂದ ತೀವ್ರ ರಕ್ತಸ್ರಾವವಾಗಿದ್ದು ಹಾಕಿಕೊಂಡಿದ್ದ ಬಟ್ಟೆ ತುಂಬೆಲ್ಲಾ ರಕ್ತಸಿಕ್ತವಾಗಿತ್ತು. ಯುವಕನ ತಲೆಗೂ ಪೆಟ್ಟಾಗಿದ್ದು ಇಬ್ಬರು ವಾದವಿವಾದ ನಡೆಸುತ್ತಾ ಮುಖ್ಯರಸ್ತೆಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದ್ದರು. ಸಾರ್ವಜನಿಕರು ತಿಳಿಹೇಳಿದರೂ ಜಟಾಪಟಿ ಮುಂದುವರೆಸಿದ್ದರು. ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆದೊಯ್ದಿದ್ದಾರೆ.

ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಕುರಿತಂತೆ ಯಾವುದೇ ದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿಲ್ಲ. ಮುಖ್ಯರಸ್ತೆಯ ದೊಡ್ಡ ದೊಡ್ಡ ಅಂಗಡಿಗಳ ಮುಂದೆ ಬೈಕ್‌ಗಳನ್ನು ಮನಬಂದಂತೆ ನಿಲುಗಡೆ ಮಾಡುತ್ತಿರುವ ಕಾರಣ ಪಾದಚಾರಿಗಳು ಸಂಚರಿಸುವುದೂ ಕಷ್ಟಕರ ಎನ್ನುವಂತ ಪರಿಸ್ಥಿತಿ ನಿರ್ಮಾಣವಾಗಿದ್ದು ಪೊಲೀಸ್ ಇಲಾಖೆ ಇದಕ್ಕೆ ಪರಿಹಾರ ಕಂಡು ಹಿಡಿದು ಸಾರ್ವಜನಿಕರ ಸಂಚಾರವನ್ನು ಸುಗಮಗೊಳಿಸಬೇಕಿದೆ ಎಂದು ನಾಗರಿಕರು ಒತ್ತಾಯಿಸಿದ್ದಾರೆ.

Latest News

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ :

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ಮುದ್ದೇಬಿಹಾಳ : ಮೊದಲು ಸಂಸ್ಕಾರ ಹೆಚ್ಚಾಗಿತ್ತು,ಶಿಕ್ಷಣ ಕಡಿಮೆ ಇತ್ತು. ಆದರೆ ಇಂದು ಶಿಕ್ಷಣ ಹೆಚ್ಚಿದಂತೆ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು,

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ವಿವರಗಳನ್ನು ಅವರು ನೀಡಿದರು. ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಈ