ಮುದ್ದೇಬಿಹಾಳದಲ್ಲಿ RSS ಪಥಸಂಚಲನ ; ಸಾಂಘಿಕ ಶಕ್ತಿ ಅನಾವರಣ

ಮುದ್ದೇಬಿಹಾಳದಲ್ಲಿ RSS ಪಥಸಂಚಲನ ; ಸಾಂಘಿಕ ಶಕ್ತಿ ಅನಾವರಣ

ಮುದ್ದೇಬಿಹಾಳ : ವಿಜಯದಶಮಿ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಶನಿವಾರ ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆಕರ್ಷಕ ಪಥಸಂಚಲನದಲ್ಲಿ ಸಾಂಘಿಕ ಶಕ್ತಿ ಅನಾವರಣಗೊಂಡಿತು‌.

ನಗರದ ಹುಡ್ಕೋ ಬಡಾವಣೆ ಬಳಿ ಇರುವ ಗವಿಸಿದ್ದೇಶ್ವರ ಕ್ರೀಡಾ ಮೈದಾನ ದಿಂದ ಪ್ರಾರಂಭಗೊಂಡ ಭವ್ಯ ಪಥಸಂಚಲನ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ವೃತ್ತದ ಮೂಲಕ ಸ್ಟೇಟ್ ಬ್ಯಾಂಕ ಮುಖ್ಯ ರಸ್ತೆ, ಕೆ.ಎಸ್.ಆರ್.ಟಿ.ಸಿ ಮುಖ್ಯ ರಸ್ತೆ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ಸಂತ ಕನಕದಾಸ ವೃತ್ತ, ವಾಲ್ಮೀಕಿ ವೃತ್ತ, ಶಾರದಾ ದೇವಸ್ಥಾನ, ಲಕ್ಷ್ಮೀ ವೆಂಕಟೇಶ್ವರ ಗುಡಿ, ಛತ್ರಪತಿ ಶಿವಾಜಿ ವೃತ್ತ, ಸಿದ್ರಾಮೇಶ್ವರ ವೃತ್ತ, ನೇತಾಜಿ ಗಲ್ಲಿ, ಕುಂಬಾರಗಲ್ಲಿ, ದ್ಯಾಮವ್ವನ ಗುಡಿ, ಕಿಲ್ಲಾ ಹೊಸಮಠದ ಮುಖಾಂತರ ಸರಾಫ ಬಜಾರ, ಶ್ರೀದುರ್ಗಾದೇವಿ ಗುಡಿ(ದ್ಯಾಮವ್ವನ ಕಟ್ಟಿ), ಮುಖ್ಯ ಬಜಾರ, ಮಾರ್ಗವಾಗಿ ಬಸವೇಶ್ವರ ವೃತ್ತ ತಲುಪಿ ಸಂಗೋಳ್ಳಿ ರಾಯಣ್ಣ ವೃತ್ತ, ಡಾ ಬಿ ಆರ್ ಅಂಬೇಡ್ಕರ ವೃತ್ತದಿಂದ ಹಾಯ್ದು ಕಾರ್ಯಕ್ರಮದ ಸ್ಥಳ ವ್ಹಿ.ಬಿ.ಸಿ ಪ್ರೌಢಶಾಲೆಯ ಆವರಣಕ್ಕೆ ಆಗಮಿಸಿತು.


ಪಥಸಂಚಲನದ ಮಾರ್ಗದಲ್ಲಿ ಮಹಿಳೆಯರು ರಂಗೋಲಿ , ಹೂವುಗಳಿಂದ ರಸ್ತೆಯನ್ನು ಅಲಂಕರಿಸಿದ್ದರು.ಭಾರತದ ಮಹಾನ ಪುರುಷರ ವೇಷಧಾರಿಗಳು ಗಣವೇಷಧಾರಿಗಳ ಮೇಲೆ ಪುಷ್ಪವೃಷ್ಟಿಗೈದರು.
ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್ ಸಂಜಯ ತಿಪರಡ್ಡಿ ಸೇರಿದಂತೆ ನೂರಾರು ಪೊಲೀಸರು ಭದ್ರತೆ ಉಸ್ತುವಾರಿ ವಹಿಸಿದ್ದರು.
ಆರ್.ಎಸ್.ಎಸ್.ಸಂಸ್ಥಾಪಕರ ಹೆಗಡೇವಾರ ಹಾಗೂ ಗೊಲ್ವಾಲ್ಕರ್ ಮತ್ತು ಭಾರತಮಾತೆಯ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ