V Somanna: The MP who attacked the state government.. Somanna inaugurated the office

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣರ (V Somanna) ತುಮಕೂರು ಕಾರ್ಯಾಲಯದ ವಿವಾದ ಕೊನೆಗೂ ಸುಖಾಂತ್ಯಗೊಂಡಿದ್ದು, ಆಡಳಿತಾತ್ಮಕ ಒಪ್ಪಿಗೆಯೊಂದಿಗೆ ಭಾನುವಾರ ವಿದ್ಯುಕ್ತವಾಗಿ ನೂತನ ಕಚೇರಿ ಉದ್ಘಾಟನೆಗೊಂಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada

ಮೈತ್ರಿ ಪಕ್ಷದ ಸಾವಿರಾರು ಕಾರ್ಯಕರ್ತರು, ಮುಖಂಡರ ಜಮಾವಣೆಯೊಂದಿಗೆ ಶಕ್ತಿ ಪ್ರದರ್ಶನ ಮಾಡಿ ನೂತನ ಕಾರ್ಯಾಲಯ ಆರಂಭಗೊಂಡಿದೆ.

ತುಮಕೂರಿನ ಹಳೇ ಪ್ರವಾಸಿ ಮಂದಿರದಲ್ಲಿ ಕಾರ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಮೊದಲು ಅನುಮತಿ ಕೊಟ್ಟಿತ್ತು. ನವೀಕರಣಗೊಂಡು ಉದ್ಘಾಟನೆಗೆ ಸಿದ್ಧಗೊಂಡ ಬಳಿಕ ಅನುಮತಿ ರದ್ದುಗೊಳಿಸಿತ್ತು. ಸರ್ಕಾರದ ಈ ಧೋರಣೆಗೆ ಮೈತ್ರಿ ನಾಯಕರು ಕೆಂಡಾಮಂಡಲವಾಗಿದ್ದರು.

ಈ ನಡುವೆ ಸ್ವತಃ ಸಿಎಂ ಸಿದ್ದರಾಮಯ್ಯ ವಿ.ಸೋಮಣ್ಣರಿಗೆ (V Somanna) ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಬಳಿಕ ಸಿಎಂ ಸಲಹೆ ಮೇರೆಗೆ ವಿ.ಸೋಮಣ್ಣ ಗೃಹ ಸಚಿವ ಜಿ.ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಗೊಂದಲ ಪರಿಹರಿಸಿದ್ದಾರೆ. ಹೀಗಾಗಿ ಯಾವುದೇ ಅಡ್ಡಿ ಆತಂಕ ಇಲ್ಲದೇ ಭಾನುವಾರ ಸುಸೂತ್ರವಾಗಿ ಕಚೇರಿ ಉದ್ಘಾಟನೆ ನಡೆದಿದೆ.

ಇದನ್ನೂ ಓದಿ: Brother Murder: ಆಸ್ತಿಗಾಗಿ ಕಲ್ಲು, ದೊಣ್ಣೆಗಳಿಂದ ಬಡಿದಾಟ; ಅಣ್ಣನ ದುರ್ಮರಣ..!

ಇನ್ನು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ಮಂದಿರದ ಸುತ್ತಲೂ ಬಿಗಿ ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.

‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ ಸೋಮಣ್ಣ ಹೇಳಿಕೆ..

ತುಮಕೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ರಾಜಕೀಯ ಸಂಚಲನವನ್ನು ‌ಸೃಷ್ಟಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತದೆ ಎಂದರು. ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ‘ನನಗೂ 45 ವರ್ಷ ರಾಜಕೀಯ ಅನುಭವವಿದೆ. ಒತ್ತಾಯ ಮಾಡುವುದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬರು ಬುದ್ದಿವಂತರಿದ್ದಾರೆ. ಉಳಿದದ್ದನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದರು.

ಬಿಎಸ್‌ವೈ ರೀತಿ ಸಿದ್ದು ರಾಜೀನಾಮೆ ನೀಡಲಿ: R. Ashok

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದದ ತನಿಖೆಗೆ ರಾಜ್ಯಪಾಲರ ಅನು ಮತಿ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು ಎಂದು ಹೇಳಿ ರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ್ರ ನಾಡಿ ಯಾವುದೇ ವ್ಯಕ್ತಿಯ ವಿರುದ್ದ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದುತಪ್ಪಿತಸ್ಥರಿಗೆ ಶಿಕ್ಷೆಯಾಗ ಬೇಕು ಎಂಬುದು ನಮ್ಮ ಉದ್ದೇಶ ಎಂದರು.

ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

ಬಿಎಸ್‌ವೈ ನಡೆ ಅನುಸರಿಸಿ:

ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಆಗಿನ ಗೌರರ್‌ ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್ ಕೈವಾಡವಿತ್ತು ಎಂದರೆ, ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ ಎಂದರು.

Latest News

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ ಹಿಂದೂಗಳದ್ದಲ್ಲ.ಎಲ್ಲ ಬಣ್ಣಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ.ಲಾಂಛನಗಳನ್ನು ನಾವು ಮಾಡಿಕೊಂಡು ನಮ್ಮ ನಮ್ಮಲ್ಲಿ ಬೇಧಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ ಎಂದು ಇಳಕಲ್‌ನ ಖ್ಯಾತ ಪ್ರವಚನಕಾರ ಲಾಲ್‌ಹುಸೇನ್ ಕಂದಗಲ್ ಹೇಳಿದರು. ಪಟ್ಟಣದ ಸಾರಿಗೆ ಘಟಕದಲ್ಲಿ ಬುಧವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವನ ಘನತೆ ಎತ್ತಿ ಹಿಡಿಯುವ ಕೆಲಸವನ್ನು ಪ್ರವಾದಿ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು ಯಾರ ಹೆಸರು ಬಂದಿಲ್ಲವೋ ಅವರಿಗೆ ನೋಟಿಸ್ ಕೊಡುವ ಕಾರ್ಯ ಆರಂಭಗೊಳ್ಳಲಿದೆ ಎಂದು ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ ತಿಳಿಸಿದ್ದಾರೆ. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕುರಿತು ಮಾಹಿತಿ ನೀಡಿದರು. ಜೂ.29,2026ರಲ್ಲಿ ಮತಕ್ಷೇತ್ರದ ಮತಗಟ್ಟೆ ಸಂಖ್ಯೆ 246 ಇದ್ದು ಪರಿಷ್ಕರಣೆಯ