V Somanna: The MP who attacked the state government.. Somanna inaugurated the office

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣರ (V Somanna) ತುಮಕೂರು ಕಾರ್ಯಾಲಯದ ವಿವಾದ ಕೊನೆಗೂ ಸುಖಾಂತ್ಯಗೊಂಡಿದ್ದು, ಆಡಳಿತಾತ್ಮಕ ಒಪ್ಪಿಗೆಯೊಂದಿಗೆ ಭಾನುವಾರ ವಿದ್ಯುಕ್ತವಾಗಿ ನೂತನ ಕಚೇರಿ ಉದ್ಘಾಟನೆಗೊಂಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada

ಮೈತ್ರಿ ಪಕ್ಷದ ಸಾವಿರಾರು ಕಾರ್ಯಕರ್ತರು, ಮುಖಂಡರ ಜಮಾವಣೆಯೊಂದಿಗೆ ಶಕ್ತಿ ಪ್ರದರ್ಶನ ಮಾಡಿ ನೂತನ ಕಾರ್ಯಾಲಯ ಆರಂಭಗೊಂಡಿದೆ.

ತುಮಕೂರಿನ ಹಳೇ ಪ್ರವಾಸಿ ಮಂದಿರದಲ್ಲಿ ಕಾರ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಮೊದಲು ಅನುಮತಿ ಕೊಟ್ಟಿತ್ತು. ನವೀಕರಣಗೊಂಡು ಉದ್ಘಾಟನೆಗೆ ಸಿದ್ಧಗೊಂಡ ಬಳಿಕ ಅನುಮತಿ ರದ್ದುಗೊಳಿಸಿತ್ತು. ಸರ್ಕಾರದ ಈ ಧೋರಣೆಗೆ ಮೈತ್ರಿ ನಾಯಕರು ಕೆಂಡಾಮಂಡಲವಾಗಿದ್ದರು.

ಈ ನಡುವೆ ಸ್ವತಃ ಸಿಎಂ ಸಿದ್ದರಾಮಯ್ಯ ವಿ.ಸೋಮಣ್ಣರಿಗೆ (V Somanna) ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಬಳಿಕ ಸಿಎಂ ಸಲಹೆ ಮೇರೆಗೆ ವಿ.ಸೋಮಣ್ಣ ಗೃಹ ಸಚಿವ ಜಿ.ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಗೊಂದಲ ಪರಿಹರಿಸಿದ್ದಾರೆ. ಹೀಗಾಗಿ ಯಾವುದೇ ಅಡ್ಡಿ ಆತಂಕ ಇಲ್ಲದೇ ಭಾನುವಾರ ಸುಸೂತ್ರವಾಗಿ ಕಚೇರಿ ಉದ್ಘಾಟನೆ ನಡೆದಿದೆ.

ಇದನ್ನೂ ಓದಿ: Brother Murder: ಆಸ್ತಿಗಾಗಿ ಕಲ್ಲು, ದೊಣ್ಣೆಗಳಿಂದ ಬಡಿದಾಟ; ಅಣ್ಣನ ದುರ್ಮರಣ..!

ಇನ್ನು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ಮಂದಿರದ ಸುತ್ತಲೂ ಬಿಗಿ ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.

‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ ಸೋಮಣ್ಣ ಹೇಳಿಕೆ..

ತುಮಕೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ರಾಜಕೀಯ ಸಂಚಲನವನ್ನು ‌ಸೃಷ್ಟಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತದೆ ಎಂದರು. ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ‘ನನಗೂ 45 ವರ್ಷ ರಾಜಕೀಯ ಅನುಭವವಿದೆ. ಒತ್ತಾಯ ಮಾಡುವುದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬರು ಬುದ್ದಿವಂತರಿದ್ದಾರೆ. ಉಳಿದದ್ದನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದರು.

ಬಿಎಸ್‌ವೈ ರೀತಿ ಸಿದ್ದು ರಾಜೀನಾಮೆ ನೀಡಲಿ: R. Ashok

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದದ ತನಿಖೆಗೆ ರಾಜ್ಯಪಾಲರ ಅನು ಮತಿ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು ಎಂದು ಹೇಳಿ ರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ್ರ ನಾಡಿ ಯಾವುದೇ ವ್ಯಕ್ತಿಯ ವಿರುದ್ದ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದುತಪ್ಪಿತಸ್ಥರಿಗೆ ಶಿಕ್ಷೆಯಾಗ ಬೇಕು ಎಂಬುದು ನಮ್ಮ ಉದ್ದೇಶ ಎಂದರು.

ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

ಬಿಎಸ್‌ವೈ ನಡೆ ಅನುಸರಿಸಿ:

ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಆಗಿನ ಗೌರರ್‌ ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್ ಕೈವಾಡವಿತ್ತು ಎಂದರೆ, ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ ಎಂದರು.

Latest News

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12 ಗಂಟೆಗೆ ಪೂರ್ಣಗೊಂಡಿತು.ಮತಎಣಿಕೆ ಕಾರ್ಯವನ್ನು ಕಂದಾಯ ಇಲಾಖೆಯವರಿಗೆ ವಹಿಸಿದ್ದರಿಂದ ಯಾವುದೇ ಗೊಂದಲಗಳಿಲ್ಲದoತೆ ಫಲಿತಾಂಶ ಪ್ರಕಟಿಸಲಾಯಿತು. ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್,