V Somanna: The MP who attacked the state government.. Somanna inaugurated the office

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣರ (V Somanna) ತುಮಕೂರು ಕಾರ್ಯಾಲಯದ ವಿವಾದ ಕೊನೆಗೂ ಸುಖಾಂತ್ಯಗೊಂಡಿದ್ದು, ಆಡಳಿತಾತ್ಮಕ ಒಪ್ಪಿಗೆಯೊಂದಿಗೆ ಭಾನುವಾರ ವಿದ್ಯುಕ್ತವಾಗಿ ನೂತನ ಕಚೇರಿ ಉದ್ಘಾಟನೆಗೊಂಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada

ಮೈತ್ರಿ ಪಕ್ಷದ ಸಾವಿರಾರು ಕಾರ್ಯಕರ್ತರು, ಮುಖಂಡರ ಜಮಾವಣೆಯೊಂದಿಗೆ ಶಕ್ತಿ ಪ್ರದರ್ಶನ ಮಾಡಿ ನೂತನ ಕಾರ್ಯಾಲಯ ಆರಂಭಗೊಂಡಿದೆ.

ತುಮಕೂರಿನ ಹಳೇ ಪ್ರವಾಸಿ ಮಂದಿರದಲ್ಲಿ ಕಾರ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಮೊದಲು ಅನುಮತಿ ಕೊಟ್ಟಿತ್ತು. ನವೀಕರಣಗೊಂಡು ಉದ್ಘಾಟನೆಗೆ ಸಿದ್ಧಗೊಂಡ ಬಳಿಕ ಅನುಮತಿ ರದ್ದುಗೊಳಿಸಿತ್ತು. ಸರ್ಕಾರದ ಈ ಧೋರಣೆಗೆ ಮೈತ್ರಿ ನಾಯಕರು ಕೆಂಡಾಮಂಡಲವಾಗಿದ್ದರು.

ಈ ನಡುವೆ ಸ್ವತಃ ಸಿಎಂ ಸಿದ್ದರಾಮಯ್ಯ ವಿ.ಸೋಮಣ್ಣರಿಗೆ (V Somanna) ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಬಳಿಕ ಸಿಎಂ ಸಲಹೆ ಮೇರೆಗೆ ವಿ.ಸೋಮಣ್ಣ ಗೃಹ ಸಚಿವ ಜಿ.ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಗೊಂದಲ ಪರಿಹರಿಸಿದ್ದಾರೆ. ಹೀಗಾಗಿ ಯಾವುದೇ ಅಡ್ಡಿ ಆತಂಕ ಇಲ್ಲದೇ ಭಾನುವಾರ ಸುಸೂತ್ರವಾಗಿ ಕಚೇರಿ ಉದ್ಘಾಟನೆ ನಡೆದಿದೆ.

ಇದನ್ನೂ ಓದಿ: Brother Murder: ಆಸ್ತಿಗಾಗಿ ಕಲ್ಲು, ದೊಣ್ಣೆಗಳಿಂದ ಬಡಿದಾಟ; ಅಣ್ಣನ ದುರ್ಮರಣ..!

ಇನ್ನು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ಮಂದಿರದ ಸುತ್ತಲೂ ಬಿಗಿ ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.

‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ ಸೋಮಣ್ಣ ಹೇಳಿಕೆ..

ತುಮಕೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ರಾಜಕೀಯ ಸಂಚಲನವನ್ನು ‌ಸೃಷ್ಟಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತದೆ ಎಂದರು. ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ‘ನನಗೂ 45 ವರ್ಷ ರಾಜಕೀಯ ಅನುಭವವಿದೆ. ಒತ್ತಾಯ ಮಾಡುವುದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬರು ಬುದ್ದಿವಂತರಿದ್ದಾರೆ. ಉಳಿದದ್ದನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದರು.

ಬಿಎಸ್‌ವೈ ರೀತಿ ಸಿದ್ದು ರಾಜೀನಾಮೆ ನೀಡಲಿ: R. Ashok

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದದ ತನಿಖೆಗೆ ರಾಜ್ಯಪಾಲರ ಅನು ಮತಿ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು ಎಂದು ಹೇಳಿ ರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ್ರ ನಾಡಿ ಯಾವುದೇ ವ್ಯಕ್ತಿಯ ವಿರುದ್ದ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದುತಪ್ಪಿತಸ್ಥರಿಗೆ ಶಿಕ್ಷೆಯಾಗ ಬೇಕು ಎಂಬುದು ನಮ್ಮ ಉದ್ದೇಶ ಎಂದರು.

ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

ಬಿಎಸ್‌ವೈ ನಡೆ ಅನುಸರಿಸಿ:

ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಆಗಿನ ಗೌರರ್‌ ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್ ಕೈವಾಡವಿತ್ತು ಎಂದರೆ, ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ ಎಂದರು.

Latest News

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಮುದ್ದೇಬಿಹಾಳ ; ಕರ್ನಾಟಕ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ಅವರ

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

ನವದೆಹಲಿ : ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಶುಭಮನ್ ಗಿಲ್ ತಂಡದಿಂದ

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಕಲಬುರಗಿ : ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಅಸ್ಕಿ ಫೌಂಡೇಶನ್‌ದಿoದ ಸನ್ಮಾನ

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಅಸ್ಕಿ ಫೌಂಡೇಶನ್‌ದಿoದ ಸನ್ಮಾನ

ವಿಜಯಪುರ : ನೂತನವಾಗಿ ವಿಜಯಪುರ ಜಿಲ್ಲೆಗೆ 152 ಹೊಸ ಬಸ್‌ಗಳ ನಗರಸಾರಿಗೆ ಬಸ್ಸುಗಳ ಲೋಕಾರ್ಪಣೆ

ನನ್ನ ಹಕ್ಕುಬಿಟ್ಟುಕೊಡಲು ಸಿದ್ದನಿದ್ದೇನೆ, ಆರೋಪದ ಚರ್ಚೆಗೆ ಸಿದ್ಧ: ಕೃಷ್ಣ ಬೈರೇಗೌಡರ ಸವಾಲ್..!

ಬೆಳಗಾವಿ ಡಿಸೆಂಬರ್ 18: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು. ಗುರುವಾರ ವಿಧಾನಸಭೆ ಶೂನ್ಯ ಚರ್ಚೆಯ ವೇಳೆ ಸಚಿವ ಕೃಷ್ಣ ಬೈರೇಗೌಡ ಅವರು ಮೇಲೆ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಮಾಡಿರುವ ಸ್ಮಶಾನಭೂಮಿ ಒತ್ತುವರಿ ಆರೋಪ ಮಾಡಿದ್ದ ಬಗ್ಗೆ ಚರ್ಚಿಸಲು ಅವಕಾಶ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ:                           ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ: ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬುಧವಾರ ಜಿಲ್ಲಾ ಮಟ್ಟದ ಸಕ್ಕರೆ ಇಳುವರಿ ಹಾಗೂ ತೂಕದ ಯಂತ್ರಗಳ ಪರಿಶೀಲನಾ ತಂಡ ಬುಧವಾರ ಭೇಟಿ ನೀಡಿ ಕಾರ್ಖಾನೆಯ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಪತ್ರಿಕೆಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆನಂದ ಕೆ., ರಾಜ್ಯ ಸರ್ಕಾರ ಆದೇಶಿಸಿತ ಹೆಚ್ಚುವರಿ ಪರಿಹಾರವನ್ನು ಕಾರ್ಖಾನೆಯಿಂದ ರೈತರಿಗೆ ಪಾವತಿಸಲಾಗುತ್ತಿದೆ.ಕಾರ್ಖಾನೆಯ ತೂಕದ ಯಂತ್ರದ ಕುರಿತು ಈಚೇಗೆ ರೈತರು ಆಕ್ಷೇಪಿಸಿದ್ದಕ್ಕೆ ಕಬ್ಬು ಪರೈಸುವ ರೈತರು, ರೈತಪರ ಸಂಘಟನೆ