V Somanna: The MP who attacked the state government.. Somanna inaugurated the office

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣರ (V Somanna) ತುಮಕೂರು ಕಾರ್ಯಾಲಯದ ವಿವಾದ ಕೊನೆಗೂ ಸುಖಾಂತ್ಯಗೊಂಡಿದ್ದು, ಆಡಳಿತಾತ್ಮಕ ಒಪ್ಪಿಗೆಯೊಂದಿಗೆ ಭಾನುವಾರ ವಿದ್ಯುಕ್ತವಾಗಿ ನೂತನ ಕಚೇರಿ ಉದ್ಘಾಟನೆಗೊಂಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada

ಮೈತ್ರಿ ಪಕ್ಷದ ಸಾವಿರಾರು ಕಾರ್ಯಕರ್ತರು, ಮುಖಂಡರ ಜಮಾವಣೆಯೊಂದಿಗೆ ಶಕ್ತಿ ಪ್ರದರ್ಶನ ಮಾಡಿ ನೂತನ ಕಾರ್ಯಾಲಯ ಆರಂಭಗೊಂಡಿದೆ.

ತುಮಕೂರಿನ ಹಳೇ ಪ್ರವಾಸಿ ಮಂದಿರದಲ್ಲಿ ಕಾರ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಮೊದಲು ಅನುಮತಿ ಕೊಟ್ಟಿತ್ತು. ನವೀಕರಣಗೊಂಡು ಉದ್ಘಾಟನೆಗೆ ಸಿದ್ಧಗೊಂಡ ಬಳಿಕ ಅನುಮತಿ ರದ್ದುಗೊಳಿಸಿತ್ತು. ಸರ್ಕಾರದ ಈ ಧೋರಣೆಗೆ ಮೈತ್ರಿ ನಾಯಕರು ಕೆಂಡಾಮಂಡಲವಾಗಿದ್ದರು.

ಈ ನಡುವೆ ಸ್ವತಃ ಸಿಎಂ ಸಿದ್ದರಾಮಯ್ಯ ವಿ.ಸೋಮಣ್ಣರಿಗೆ (V Somanna) ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಬಳಿಕ ಸಿಎಂ ಸಲಹೆ ಮೇರೆಗೆ ವಿ.ಸೋಮಣ್ಣ ಗೃಹ ಸಚಿವ ಜಿ.ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಗೊಂದಲ ಪರಿಹರಿಸಿದ್ದಾರೆ. ಹೀಗಾಗಿ ಯಾವುದೇ ಅಡ್ಡಿ ಆತಂಕ ಇಲ್ಲದೇ ಭಾನುವಾರ ಸುಸೂತ್ರವಾಗಿ ಕಚೇರಿ ಉದ್ಘಾಟನೆ ನಡೆದಿದೆ.

ಇದನ್ನೂ ಓದಿ: Brother Murder: ಆಸ್ತಿಗಾಗಿ ಕಲ್ಲು, ದೊಣ್ಣೆಗಳಿಂದ ಬಡಿದಾಟ; ಅಣ್ಣನ ದುರ್ಮರಣ..!

ಇನ್ನು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ಮಂದಿರದ ಸುತ್ತಲೂ ಬಿಗಿ ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.

‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ ಸೋಮಣ್ಣ ಹೇಳಿಕೆ..

ತುಮಕೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ರಾಜಕೀಯ ಸಂಚಲನವನ್ನು ‌ಸೃಷ್ಟಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತದೆ ಎಂದರು. ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ‘ನನಗೂ 45 ವರ್ಷ ರಾಜಕೀಯ ಅನುಭವವಿದೆ. ಒತ್ತಾಯ ಮಾಡುವುದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬರು ಬುದ್ದಿವಂತರಿದ್ದಾರೆ. ಉಳಿದದ್ದನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದರು.

ಬಿಎಸ್‌ವೈ ರೀತಿ ಸಿದ್ದು ರಾಜೀನಾಮೆ ನೀಡಲಿ: R. Ashok

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದದ ತನಿಖೆಗೆ ರಾಜ್ಯಪಾಲರ ಅನು ಮತಿ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು ಎಂದು ಹೇಳಿ ರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ್ರ ನಾಡಿ ಯಾವುದೇ ವ್ಯಕ್ತಿಯ ವಿರುದ್ದ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದುತಪ್ಪಿತಸ್ಥರಿಗೆ ಶಿಕ್ಷೆಯಾಗ ಬೇಕು ಎಂಬುದು ನಮ್ಮ ಉದ್ದೇಶ ಎಂದರು.

ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

ಬಿಎಸ್‌ವೈ ನಡೆ ಅನುಸರಿಸಿ:

ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಆಗಿನ ಗೌರರ್‌ ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್ ಕೈವಾಡವಿತ್ತು ಎಂದರೆ, ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ ಎಂದರು.

Latest News

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ಸಮಗ್ರ ಪ್ರಶಸ್ತಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ಸಮಗ್ರ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹುಲ್ಲೂರ ಕ್ಲಸ್ಟರ್

ಮನೆಮನೆಗೆ ಪೋಲಿಸ್ ಭೇಟಿ ನೀಡಿ ಕಾನೂನು ಅರಿವು ಕಾರ್ಯಕ್ರಮ

ಮನೆಮನೆಗೆ ಪೋಲಿಸ್ ಭೇಟಿ ನೀಡಿ ಕಾನೂನು ಅರಿವು ಕಾರ್ಯಕ್ರಮ

ನಾಲತವಾಡ: ಸ್ಥಳೀಯ ಹೊರ ಪೋಲಿಸ್ ಠಾಣೆ ಆರಕ್ಷಕ ಸಿಬ್ಬಂದಿ ಘಾಳಪೂಜಿ, ಬಿಜ್ಜೂರ, ಖಾನೀಕೇರಿ, ಲೊಟಗೇರಿ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸೋಣ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸೋಣ

ಮುದ್ದೇಬಿಹಾಳ : ಮುಸ್ಲಿಂ ಸಮಾಜದ ಪ್ರಾತಿನಿಧಿಕ ಸಂಸ್ಥೆ ಅಂಜುಮನ್ ಇಸ್ಲಾಂ ಕಮೀಟಿಗೆ ಆಡಳಿತ ಮಂಡಳಿ ರಚನೆಗೊಂಡರೆ ಸಮಾಜದ ಶೈಕ್ಷಣಿಕ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಆದ್ಯತೆ ದೊರೆಯುತ್ತದೆ ಎಂದು ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹರನಾಳ ಪಿಕೆಪಿಎಸ್ ಅಧ್ಯಕ್ಷ ಕಾಶೀಂಪಟೇಲ್ ಮೂಕಿಹಾಳ ಹಾಗೂ ಅಂಜುಮನ್ ಸಂಸ್ಥೆಯ ಮತದಾರ ಸದಸ್ಯರ ದಾಖಲಾತಿ ಅಧಿಕಾರಿಯಾಗಿ ನೇಮಕವಾದ ಹುಸೇನ ನಾಯಕೋಡಿ ಅವರ

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ 12 ಸ್ಥಾನಗಳಿಗೆ ಸೋಮವಾರ ಅವಿರೋಧ ಆಯ್ಕೆ ನಡೆದಿದ್ದು ಹಿಂದಿನ ಅಧ್ಯಕ್ಷ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ ದೊರೆತಿದೆ. ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ಅವರು 12 ನಿರ್ದೇಶಕರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ಸಾಮಾನ್ಯ ವರ್ಗದಿಂದ ಹಿಂದಿನ ಅಧ್ಯಕ್ಷ ಹೇಮಣ್ಣ ಮೇಟಿ, ಬಸವರಾಜ ಪಾಟೀಲ, ಶಾಂತಪ್ಪ ಸಂಕನಾಳ, ಬಾಬು ಸೂಳಿಭಾವಿ,ಸಿಂದೂಬಲ್ಲಾಳ ನಾಡಗೌಡ, ಹಿಂದುಳಿದ ಅ