V Somanna: The MP who attacked the state government.. Somanna inaugurated the office

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣರ (V Somanna) ತುಮಕೂರು ಕಾರ್ಯಾಲಯದ ವಿವಾದ ಕೊನೆಗೂ ಸುಖಾಂತ್ಯಗೊಂಡಿದ್ದು, ಆಡಳಿತಾತ್ಮಕ ಒಪ್ಪಿಗೆಯೊಂದಿಗೆ ಭಾನುವಾರ ವಿದ್ಯುಕ್ತವಾಗಿ ನೂತನ ಕಚೇರಿ ಉದ್ಘಾಟನೆಗೊಂಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada

ಮೈತ್ರಿ ಪಕ್ಷದ ಸಾವಿರಾರು ಕಾರ್ಯಕರ್ತರು, ಮುಖಂಡರ ಜಮಾವಣೆಯೊಂದಿಗೆ ಶಕ್ತಿ ಪ್ರದರ್ಶನ ಮಾಡಿ ನೂತನ ಕಾರ್ಯಾಲಯ ಆರಂಭಗೊಂಡಿದೆ.

ತುಮಕೂರಿನ ಹಳೇ ಪ್ರವಾಸಿ ಮಂದಿರದಲ್ಲಿ ಕಾರ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಮೊದಲು ಅನುಮತಿ ಕೊಟ್ಟಿತ್ತು. ನವೀಕರಣಗೊಂಡು ಉದ್ಘಾಟನೆಗೆ ಸಿದ್ಧಗೊಂಡ ಬಳಿಕ ಅನುಮತಿ ರದ್ದುಗೊಳಿಸಿತ್ತು. ಸರ್ಕಾರದ ಈ ಧೋರಣೆಗೆ ಮೈತ್ರಿ ನಾಯಕರು ಕೆಂಡಾಮಂಡಲವಾಗಿದ್ದರು.

ಈ ನಡುವೆ ಸ್ವತಃ ಸಿಎಂ ಸಿದ್ದರಾಮಯ್ಯ ವಿ.ಸೋಮಣ್ಣರಿಗೆ (V Somanna) ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಬಳಿಕ ಸಿಎಂ ಸಲಹೆ ಮೇರೆಗೆ ವಿ.ಸೋಮಣ್ಣ ಗೃಹ ಸಚಿವ ಜಿ.ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಗೊಂದಲ ಪರಿಹರಿಸಿದ್ದಾರೆ. ಹೀಗಾಗಿ ಯಾವುದೇ ಅಡ್ಡಿ ಆತಂಕ ಇಲ್ಲದೇ ಭಾನುವಾರ ಸುಸೂತ್ರವಾಗಿ ಕಚೇರಿ ಉದ್ಘಾಟನೆ ನಡೆದಿದೆ.

ಇದನ್ನೂ ಓದಿ: Brother Murder: ಆಸ್ತಿಗಾಗಿ ಕಲ್ಲು, ದೊಣ್ಣೆಗಳಿಂದ ಬಡಿದಾಟ; ಅಣ್ಣನ ದುರ್ಮರಣ..!

ಇನ್ನು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ಮಂದಿರದ ಸುತ್ತಲೂ ಬಿಗಿ ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.

‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ ಸೋಮಣ್ಣ ಹೇಳಿಕೆ..

ತುಮಕೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ರಾಜಕೀಯ ಸಂಚಲನವನ್ನು ‌ಸೃಷ್ಟಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತದೆ ಎಂದರು. ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ‘ನನಗೂ 45 ವರ್ಷ ರಾಜಕೀಯ ಅನುಭವವಿದೆ. ಒತ್ತಾಯ ಮಾಡುವುದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬರು ಬುದ್ದಿವಂತರಿದ್ದಾರೆ. ಉಳಿದದ್ದನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದರು.

ಬಿಎಸ್‌ವೈ ರೀತಿ ಸಿದ್ದು ರಾಜೀನಾಮೆ ನೀಡಲಿ: R. Ashok

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದದ ತನಿಖೆಗೆ ರಾಜ್ಯಪಾಲರ ಅನು ಮತಿ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು ಎಂದು ಹೇಳಿ ರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ್ರ ನಾಡಿ ಯಾವುದೇ ವ್ಯಕ್ತಿಯ ವಿರುದ್ದ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದುತಪ್ಪಿತಸ್ಥರಿಗೆ ಶಿಕ್ಷೆಯಾಗ ಬೇಕು ಎಂಬುದು ನಮ್ಮ ಉದ್ದೇಶ ಎಂದರು.

ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

ಬಿಎಸ್‌ವೈ ನಡೆ ಅನುಸರಿಸಿ:

ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಆಗಿನ ಗೌರರ್‌ ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್ ಕೈವಾಡವಿತ್ತು ಎಂದರೆ, ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ ಎಂದರು.

Latest News

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಮುದ್ದೇಬಿಹಾಳ ,ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡುತ್ತಿಲ್ಲ.ರೈತರು ಸಂಕಷ್ಟದಲ್ಲಿದ್ದು ಅವರಿಗೆ ಬೆಂಬಲಿಸಲು, ಸರ್ಕಾರದ ಮೇಲೆ ಒತ್ತಡ ಹೇರಲು ಈ ಬಂದ್ ಆಚರಿಸಲಾಗುತ್ತದೆ ಎಂದು ಹೇಳಿದರು. ಸೆ.12