V Somanna: The MP who attacked the state government.. Somanna inaugurated the office

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣರ (V Somanna) ತುಮಕೂರು ಕಾರ್ಯಾಲಯದ ವಿವಾದ ಕೊನೆಗೂ ಸುಖಾಂತ್ಯಗೊಂಡಿದ್ದು, ಆಡಳಿತಾತ್ಮಕ ಒಪ್ಪಿಗೆಯೊಂದಿಗೆ ಭಾನುವಾರ ವಿದ್ಯುಕ್ತವಾಗಿ ನೂತನ ಕಚೇರಿ ಉದ್ಘಾಟನೆಗೊಂಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada

ಮೈತ್ರಿ ಪಕ್ಷದ ಸಾವಿರಾರು ಕಾರ್ಯಕರ್ತರು, ಮುಖಂಡರ ಜಮಾವಣೆಯೊಂದಿಗೆ ಶಕ್ತಿ ಪ್ರದರ್ಶನ ಮಾಡಿ ನೂತನ ಕಾರ್ಯಾಲಯ ಆರಂಭಗೊಂಡಿದೆ.

ತುಮಕೂರಿನ ಹಳೇ ಪ್ರವಾಸಿ ಮಂದಿರದಲ್ಲಿ ಕಾರ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಮೊದಲು ಅನುಮತಿ ಕೊಟ್ಟಿತ್ತು. ನವೀಕರಣಗೊಂಡು ಉದ್ಘಾಟನೆಗೆ ಸಿದ್ಧಗೊಂಡ ಬಳಿಕ ಅನುಮತಿ ರದ್ದುಗೊಳಿಸಿತ್ತು. ಸರ್ಕಾರದ ಈ ಧೋರಣೆಗೆ ಮೈತ್ರಿ ನಾಯಕರು ಕೆಂಡಾಮಂಡಲವಾಗಿದ್ದರು.

ಈ ನಡುವೆ ಸ್ವತಃ ಸಿಎಂ ಸಿದ್ದರಾಮಯ್ಯ ವಿ.ಸೋಮಣ್ಣರಿಗೆ (V Somanna) ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಬಳಿಕ ಸಿಎಂ ಸಲಹೆ ಮೇರೆಗೆ ವಿ.ಸೋಮಣ್ಣ ಗೃಹ ಸಚಿವ ಜಿ.ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಗೊಂದಲ ಪರಿಹರಿಸಿದ್ದಾರೆ. ಹೀಗಾಗಿ ಯಾವುದೇ ಅಡ್ಡಿ ಆತಂಕ ಇಲ್ಲದೇ ಭಾನುವಾರ ಸುಸೂತ್ರವಾಗಿ ಕಚೇರಿ ಉದ್ಘಾಟನೆ ನಡೆದಿದೆ.

ಇದನ್ನೂ ಓದಿ: Brother Murder: ಆಸ್ತಿಗಾಗಿ ಕಲ್ಲು, ದೊಣ್ಣೆಗಳಿಂದ ಬಡಿದಾಟ; ಅಣ್ಣನ ದುರ್ಮರಣ..!

ಇನ್ನು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ಮಂದಿರದ ಸುತ್ತಲೂ ಬಿಗಿ ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.

‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ ಸೋಮಣ್ಣ ಹೇಳಿಕೆ..

ತುಮಕೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ರಾಜಕೀಯ ಸಂಚಲನವನ್ನು ‌ಸೃಷ್ಟಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತದೆ ಎಂದರು. ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ‘ನನಗೂ 45 ವರ್ಷ ರಾಜಕೀಯ ಅನುಭವವಿದೆ. ಒತ್ತಾಯ ಮಾಡುವುದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬರು ಬುದ್ದಿವಂತರಿದ್ದಾರೆ. ಉಳಿದದ್ದನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದರು.

ಬಿಎಸ್‌ವೈ ರೀತಿ ಸಿದ್ದು ರಾಜೀನಾಮೆ ನೀಡಲಿ: R. Ashok

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದದ ತನಿಖೆಗೆ ರಾಜ್ಯಪಾಲರ ಅನು ಮತಿ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು ಎಂದು ಹೇಳಿ ರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ್ರ ನಾಡಿ ಯಾವುದೇ ವ್ಯಕ್ತಿಯ ವಿರುದ್ದ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದುತಪ್ಪಿತಸ್ಥರಿಗೆ ಶಿಕ್ಷೆಯಾಗ ಬೇಕು ಎಂಬುದು ನಮ್ಮ ಉದ್ದೇಶ ಎಂದರು.

ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

ಬಿಎಸ್‌ವೈ ನಡೆ ಅನುಸರಿಸಿ:

ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಆಗಿನ ಗೌರರ್‌ ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್ ಕೈವಾಡವಿತ್ತು ಎಂದರೆ, ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ ಎಂದರು.

Latest News

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ 9ಕ್ಕೆ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಮಾಡಿದ ಕಳ್ಳರನ್ನು ಬಂಧಿಸಿದ ಪೊಲೀಸರಿಗೆ,ಪೊಲೀಸ್ ಅಧಿಕಾರಿಗಳಿಗೆ ಅಭಿನಂದನಾ ಸಮಾರಂಭ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕಪ್ಪತ್ತಗುಡ್ಡ ನಂದಿವೇರಿಮಠದ ಶಿವಕುಮಾರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಜ್ಯೋತಿ ಬೆಳಗಿಸುವರು.ಸಂಸ್ಥೆ ಅಧ್ಯಕ್ಷ ಕೆ.ವಾಯ್.ಬಿರಾದಾರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಉಪಾಧ್ಯಕ್ಷ ಎಂ.ಆರ್.ನಾಡಗೌಡ್ರ,ಪ್ರಧಾನ ಕಾರ್ಯದರ್ಶಿ