V Somanna: The MP who attacked the state government.. Somanna inaugurated the office

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣರ (V Somanna) ತುಮಕೂರು ಕಾರ್ಯಾಲಯದ ವಿವಾದ ಕೊನೆಗೂ ಸುಖಾಂತ್ಯಗೊಂಡಿದ್ದು, ಆಡಳಿತಾತ್ಮಕ ಒಪ್ಪಿಗೆಯೊಂದಿಗೆ ಭಾನುವಾರ ವಿದ್ಯುಕ್ತವಾಗಿ ನೂತನ ಕಚೇರಿ ಉದ್ಘಾಟನೆಗೊಂಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada

ಮೈತ್ರಿ ಪಕ್ಷದ ಸಾವಿರಾರು ಕಾರ್ಯಕರ್ತರು, ಮುಖಂಡರ ಜಮಾವಣೆಯೊಂದಿಗೆ ಶಕ್ತಿ ಪ್ರದರ್ಶನ ಮಾಡಿ ನೂತನ ಕಾರ್ಯಾಲಯ ಆರಂಭಗೊಂಡಿದೆ.

ತುಮಕೂರಿನ ಹಳೇ ಪ್ರವಾಸಿ ಮಂದಿರದಲ್ಲಿ ಕಾರ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಮೊದಲು ಅನುಮತಿ ಕೊಟ್ಟಿತ್ತು. ನವೀಕರಣಗೊಂಡು ಉದ್ಘಾಟನೆಗೆ ಸಿದ್ಧಗೊಂಡ ಬಳಿಕ ಅನುಮತಿ ರದ್ದುಗೊಳಿಸಿತ್ತು. ಸರ್ಕಾರದ ಈ ಧೋರಣೆಗೆ ಮೈತ್ರಿ ನಾಯಕರು ಕೆಂಡಾಮಂಡಲವಾಗಿದ್ದರು.

ಈ ನಡುವೆ ಸ್ವತಃ ಸಿಎಂ ಸಿದ್ದರಾಮಯ್ಯ ವಿ.ಸೋಮಣ್ಣರಿಗೆ (V Somanna) ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಬಳಿಕ ಸಿಎಂ ಸಲಹೆ ಮೇರೆಗೆ ವಿ.ಸೋಮಣ್ಣ ಗೃಹ ಸಚಿವ ಜಿ.ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಗೊಂದಲ ಪರಿಹರಿಸಿದ್ದಾರೆ. ಹೀಗಾಗಿ ಯಾವುದೇ ಅಡ್ಡಿ ಆತಂಕ ಇಲ್ಲದೇ ಭಾನುವಾರ ಸುಸೂತ್ರವಾಗಿ ಕಚೇರಿ ಉದ್ಘಾಟನೆ ನಡೆದಿದೆ.

ಇದನ್ನೂ ಓದಿ: Brother Murder: ಆಸ್ತಿಗಾಗಿ ಕಲ್ಲು, ದೊಣ್ಣೆಗಳಿಂದ ಬಡಿದಾಟ; ಅಣ್ಣನ ದುರ್ಮರಣ..!

ಇನ್ನು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ಮಂದಿರದ ಸುತ್ತಲೂ ಬಿಗಿ ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.

‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ ಸೋಮಣ್ಣ ಹೇಳಿಕೆ..

ತುಮಕೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ರಾಜಕೀಯ ಸಂಚಲನವನ್ನು ‌ಸೃಷ್ಟಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತದೆ ಎಂದರು. ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ‘ನನಗೂ 45 ವರ್ಷ ರಾಜಕೀಯ ಅನುಭವವಿದೆ. ಒತ್ತಾಯ ಮಾಡುವುದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬರು ಬುದ್ದಿವಂತರಿದ್ದಾರೆ. ಉಳಿದದ್ದನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದರು.

ಬಿಎಸ್‌ವೈ ರೀತಿ ಸಿದ್ದು ರಾಜೀನಾಮೆ ನೀಡಲಿ: R. Ashok

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದದ ತನಿಖೆಗೆ ರಾಜ್ಯಪಾಲರ ಅನು ಮತಿ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು ಎಂದು ಹೇಳಿ ರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ್ರ ನಾಡಿ ಯಾವುದೇ ವ್ಯಕ್ತಿಯ ವಿರುದ್ದ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದುತಪ್ಪಿತಸ್ಥರಿಗೆ ಶಿಕ್ಷೆಯಾಗ ಬೇಕು ಎಂಬುದು ನಮ್ಮ ಉದ್ದೇಶ ಎಂದರು.

ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

ಬಿಎಸ್‌ವೈ ನಡೆ ಅನುಸರಿಸಿ:

ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಆಗಿನ ಗೌರರ್‌ ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್ ಕೈವಾಡವಿತ್ತು ಎಂದರೆ, ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ ಎಂದರು.

Latest News

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ ಹೊಸ ತಂತ್ರಾoಶವು ಶಿಕ್ಷಣ ಇಲಾಖೆಯಲ್ಲಿ ನಡೆದಿದ್ದ ಹಲವು ಅಕ್ರಮಗಳಿಗೆ ತಡೆ ನೀಡುವ ಉದ್ದೇಶ ಹೊಂದಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಕರೆಂದರೆ ದೇಶದ ಸಂಸ್ಕೃತಿ ಎತ್ತಿ ಹಿಡಿಯುವವರು.ಅತ್ಯುನ್ನತ ವ್ರತ್ತಿಯಲ್ಲಿರುವವರು.ಸರ್ಕಾರಿ ಶಾಲೆಯ

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಮುದ್ದೇಬಿಹಾಳ : ರಾಷ್ಟ್ರೀಯ ಮಟ್ಟದ ಇಬಿಕ್ ರೀಡಥಾನ್ -2,2025ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ಬಸವ ಇಂಟರ್‌ನ್ಯಾಶನಲ್ ಶಾಲೆಯ ವಿದ್ಯಾರ್ಥಿಗಳು ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಹರ್ಲಾಪೂರ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ಬಸವ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮಂಗಳವಾರ ನಡೆದ ಸಾಧನೆ ತೋರಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರನ್ನು ಸನ್ಮಾನಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವುದರ ಜೊತೆಗೆ