V Somanna: The MP who attacked the state government.. Somanna inaugurated the office

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣರ (V Somanna) ತುಮಕೂರು ಕಾರ್ಯಾಲಯದ ವಿವಾದ ಕೊನೆಗೂ ಸುಖಾಂತ್ಯಗೊಂಡಿದ್ದು, ಆಡಳಿತಾತ್ಮಕ ಒಪ್ಪಿಗೆಯೊಂದಿಗೆ ಭಾನುವಾರ ವಿದ್ಯುಕ್ತವಾಗಿ ನೂತನ ಕಚೇರಿ ಉದ್ಘಾಟನೆಗೊಂಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada

ಮೈತ್ರಿ ಪಕ್ಷದ ಸಾವಿರಾರು ಕಾರ್ಯಕರ್ತರು, ಮುಖಂಡರ ಜಮಾವಣೆಯೊಂದಿಗೆ ಶಕ್ತಿ ಪ್ರದರ್ಶನ ಮಾಡಿ ನೂತನ ಕಾರ್ಯಾಲಯ ಆರಂಭಗೊಂಡಿದೆ.

ತುಮಕೂರಿನ ಹಳೇ ಪ್ರವಾಸಿ ಮಂದಿರದಲ್ಲಿ ಕಾರ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಮೊದಲು ಅನುಮತಿ ಕೊಟ್ಟಿತ್ತು. ನವೀಕರಣಗೊಂಡು ಉದ್ಘಾಟನೆಗೆ ಸಿದ್ಧಗೊಂಡ ಬಳಿಕ ಅನುಮತಿ ರದ್ದುಗೊಳಿಸಿತ್ತು. ಸರ್ಕಾರದ ಈ ಧೋರಣೆಗೆ ಮೈತ್ರಿ ನಾಯಕರು ಕೆಂಡಾಮಂಡಲವಾಗಿದ್ದರು.

ಈ ನಡುವೆ ಸ್ವತಃ ಸಿಎಂ ಸಿದ್ದರಾಮಯ್ಯ ವಿ.ಸೋಮಣ್ಣರಿಗೆ (V Somanna) ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಬಳಿಕ ಸಿಎಂ ಸಲಹೆ ಮೇರೆಗೆ ವಿ.ಸೋಮಣ್ಣ ಗೃಹ ಸಚಿವ ಜಿ.ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಗೊಂದಲ ಪರಿಹರಿಸಿದ್ದಾರೆ. ಹೀಗಾಗಿ ಯಾವುದೇ ಅಡ್ಡಿ ಆತಂಕ ಇಲ್ಲದೇ ಭಾನುವಾರ ಸುಸೂತ್ರವಾಗಿ ಕಚೇರಿ ಉದ್ಘಾಟನೆ ನಡೆದಿದೆ.

ಇದನ್ನೂ ಓದಿ: Brother Murder: ಆಸ್ತಿಗಾಗಿ ಕಲ್ಲು, ದೊಣ್ಣೆಗಳಿಂದ ಬಡಿದಾಟ; ಅಣ್ಣನ ದುರ್ಮರಣ..!

ಇನ್ನು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ಮಂದಿರದ ಸುತ್ತಲೂ ಬಿಗಿ ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.

‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ ಸೋಮಣ್ಣ ಹೇಳಿಕೆ..

ತುಮಕೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ರಾಜಕೀಯ ಸಂಚಲನವನ್ನು ‌ಸೃಷ್ಟಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತದೆ ಎಂದರು. ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ‘ನನಗೂ 45 ವರ್ಷ ರಾಜಕೀಯ ಅನುಭವವಿದೆ. ಒತ್ತಾಯ ಮಾಡುವುದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬರು ಬುದ್ದಿವಂತರಿದ್ದಾರೆ. ಉಳಿದದ್ದನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದರು.

ಬಿಎಸ್‌ವೈ ರೀತಿ ಸಿದ್ದು ರಾಜೀನಾಮೆ ನೀಡಲಿ: R. Ashok

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದದ ತನಿಖೆಗೆ ರಾಜ್ಯಪಾಲರ ಅನು ಮತಿ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು ಎಂದು ಹೇಳಿ ರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ್ರ ನಾಡಿ ಯಾವುದೇ ವ್ಯಕ್ತಿಯ ವಿರುದ್ದ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದುತಪ್ಪಿತಸ್ಥರಿಗೆ ಶಿಕ್ಷೆಯಾಗ ಬೇಕು ಎಂಬುದು ನಮ್ಮ ಉದ್ದೇಶ ಎಂದರು.

ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

ಬಿಎಸ್‌ವೈ ನಡೆ ಅನುಸರಿಸಿ:

ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಆಗಿನ ಗೌರರ್‌ ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್ ಕೈವಾಡವಿತ್ತು ಎಂದರೆ, ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ ಎಂದರು.

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ