V Somanna: The MP who attacked the state government.. Somanna inaugurated the office

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣರ (V Somanna) ತುಮಕೂರು ಕಾರ್ಯಾಲಯದ ವಿವಾದ ಕೊನೆಗೂ ಸುಖಾಂತ್ಯಗೊಂಡಿದ್ದು, ಆಡಳಿತಾತ್ಮಕ ಒಪ್ಪಿಗೆಯೊಂದಿಗೆ ಭಾನುವಾರ ವಿದ್ಯುಕ್ತವಾಗಿ ನೂತನ ಕಚೇರಿ ಉದ್ಘಾಟನೆಗೊಂಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada

ಮೈತ್ರಿ ಪಕ್ಷದ ಸಾವಿರಾರು ಕಾರ್ಯಕರ್ತರು, ಮುಖಂಡರ ಜಮಾವಣೆಯೊಂದಿಗೆ ಶಕ್ತಿ ಪ್ರದರ್ಶನ ಮಾಡಿ ನೂತನ ಕಾರ್ಯಾಲಯ ಆರಂಭಗೊಂಡಿದೆ.

ತುಮಕೂರಿನ ಹಳೇ ಪ್ರವಾಸಿ ಮಂದಿರದಲ್ಲಿ ಕಾರ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಮೊದಲು ಅನುಮತಿ ಕೊಟ್ಟಿತ್ತು. ನವೀಕರಣಗೊಂಡು ಉದ್ಘಾಟನೆಗೆ ಸಿದ್ಧಗೊಂಡ ಬಳಿಕ ಅನುಮತಿ ರದ್ದುಗೊಳಿಸಿತ್ತು. ಸರ್ಕಾರದ ಈ ಧೋರಣೆಗೆ ಮೈತ್ರಿ ನಾಯಕರು ಕೆಂಡಾಮಂಡಲವಾಗಿದ್ದರು.

ಈ ನಡುವೆ ಸ್ವತಃ ಸಿಎಂ ಸಿದ್ದರಾಮಯ್ಯ ವಿ.ಸೋಮಣ್ಣರಿಗೆ (V Somanna) ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಬಳಿಕ ಸಿಎಂ ಸಲಹೆ ಮೇರೆಗೆ ವಿ.ಸೋಮಣ್ಣ ಗೃಹ ಸಚಿವ ಜಿ.ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಗೊಂದಲ ಪರಿಹರಿಸಿದ್ದಾರೆ. ಹೀಗಾಗಿ ಯಾವುದೇ ಅಡ್ಡಿ ಆತಂಕ ಇಲ್ಲದೇ ಭಾನುವಾರ ಸುಸೂತ್ರವಾಗಿ ಕಚೇರಿ ಉದ್ಘಾಟನೆ ನಡೆದಿದೆ.

ಇದನ್ನೂ ಓದಿ: Brother Murder: ಆಸ್ತಿಗಾಗಿ ಕಲ್ಲು, ದೊಣ್ಣೆಗಳಿಂದ ಬಡಿದಾಟ; ಅಣ್ಣನ ದುರ್ಮರಣ..!

ಇನ್ನು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ಮಂದಿರದ ಸುತ್ತಲೂ ಬಿಗಿ ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.

‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ ಸೋಮಣ್ಣ ಹೇಳಿಕೆ..

ತುಮಕೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ರಾಜಕೀಯ ಸಂಚಲನವನ್ನು ‌ಸೃಷ್ಟಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಕೆಲಸ ಕಾನೂನು ಮಾಡುತ್ತದೆ ಎಂದರು. ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ‘ನನಗೂ 45 ವರ್ಷ ರಾಜಕೀಯ ಅನುಭವವಿದೆ. ಒತ್ತಾಯ ಮಾಡುವುದು, ಮತ್ತೊಂದು ಮಾಡೋದಕ್ಕಿಂತ ಹೆಚ್ಚಾಗಿ ಸಿದ್ದರಾಮಯ್ಯ ಸಾಹೇಬರು ಬುದ್ದಿವಂತರಿದ್ದಾರೆ. ಉಳಿದದ್ದನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದರು.

ಬಿಎಸ್‌ವೈ ರೀತಿ ಸಿದ್ದು ರಾಜೀನಾಮೆ ನೀಡಲಿ: R. Ashok

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದದ ತನಿಖೆಗೆ ರಾಜ್ಯಪಾಲರ ಅನು ಮತಿ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು ಎಂದು ಹೇಳಿ ರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ್ರ ನಾಡಿ ಯಾವುದೇ ವ್ಯಕ್ತಿಯ ವಿರುದ್ದ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದುತಪ್ಪಿತಸ್ಥರಿಗೆ ಶಿಕ್ಷೆಯಾಗ ಬೇಕು ಎಂಬುದು ನಮ್ಮ ಉದ್ದೇಶ ಎಂದರು.

ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

ಬಿಎಸ್‌ವೈ ನಡೆ ಅನುಸರಿಸಿ:

ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಆಗಿನ ಗೌರರ್‌ ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್ ಕೈವಾಡವಿತ್ತು ಎಂದರೆ, ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ ಎಂದರು.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ