Vachana darshana Minister MB Patil received request from Vijayapur Pragatipara organization

Vachana darshana: ‘ವಚನ ದರ್ಶನ’ ಬಿಡುಗಡೆ ಬಸವ ನಾಡಿನಲ್ಲಿ‌ ವಿರೋಧ

Vachana darshana: ‘ವಚನ ದರ್ಶನ’ ಬಿಡುಗಡೆ ಬಸವ ನಾಡಿನಲ್ಲಿ‌ ವಿರೋಧ

ವಿಜಯಪುರ :ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ವಿರೂಪಗೊಳಿಸಿ, ಶರಣ ಸಂಸ್ಕತಿಯನ್ನು ನಾಶಮಾಡುವ ದುರುದ್ದೇಶದಿಂದ ಪ್ರಕಟಗೊಂಡಿರುವ ಆರೆಸ್ಸೆಸ್ ಪ್ರಣೀತ ‘ವಚನ ದರ್ಶನ’ (Vachana darshana) ಪುಸ್ತಕ ಬಿಡುಗಡೆಗೆ ವಿಜಯಪುರದಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿದೆ.

ಶರಣ ಸಂಸ್ಕೃತಿ ರಕ್ಷಣಾ ಸಮಿತಿಯ ಸದಸ್ಯರು ಜಿಲ್ಲಾ ಉಸ್ತವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲರು ಹಾಗೂ ಜಿಲ್ಲಾ ಆಪ್ತ ಜಿಲ್ಲಾಧಿಕಾರಿಗಳಿಗೆ ಮನವಿಯೊಂದನ್ನು ನೀಡಿದ್ದು, ಈ ಪುಸ್ತಕ (Vachana darshana) ಬಿಡುಗಡೆ ಕಾರ್ಯಕ್ರಮಕ್ಕೆ ಅನುಮತಿ ಕೊಡಬಾರದು ಎಂದು ವಿಜಯಪುರದ ಪ್ರಗತಿಪರ ಒಕ್ಕೂಟವು ಆಗ್ರಹಿಸಿದ್ದಾರೆ.

Join Out Telegram: https://t.me/dcgkannada

ಈ ಪುಸ್ತಕವು ಬಸವಣ್ಣನವರ ಸಿದ್ಧಾಂತಕ್ಕೆ ವಿರುದ್ಧವಾಗಿದ್ದು, ಇದು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವಂತಹ ಕೃತಿಯಾಗಿದೆ ಎಂದು ಹೇಳಿದ್ದಾರೆ.

ಮನವಿ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ಶರಣ ಸಂಸ್ಕೃತಿ ರಕ್ಷಣಾ ಸಮಿತಿಯ ಸದಸ್ಯರಾದ ಕಲ್ಲಪ್ಪ ಕಡೆಚೂರ, ಹನಮಂತ ಚಿಂಚಿಲಿ, ಜಂಬುನಾಥ ಕಂಚಾಣಿ, ಬಸವರಾಜ ಕೊಂಡಗೊಳಿ, ಮಿಲಿಂದ ಚೆಂಚಲಕರ, ಚಂದ್ರಶೇಖರ ಘಂಟೆಪ್ಪಗೋಳ, ಡಾ. ರವಿ ಬಿರಾದಾರ, ಶಾಂತವೀರ ಥಾಲಬಾವಡಿ, ಮೋಹನ ಕಟ್ಟಿಮನಿ, ರಾಜೇಶ್ವರಿ ಯರನಾಳ, ರಾಜಶೇಖರ ಯರನಾಳ, ಅಕ್ಷಯಕುಮಾರ ಅಜಮನಿ, ಅನಿಲ ಹೊಸಮನಿ, ಪ್ರಭುಗೌಡ ಪಾಟೀಲ, ಚೆನ್ನು ಕಟ್ಟಿಮನಿ, ನಂದಕುಮಾರ ಗೊಬ್ಬೂರ, ದಾನೇಶ್ ಆವಟಿ, ಡಾ ಮಹಾಂತೇಶ್ ಮಡಿಕೇಶ್ವರ್ ,ಅಕ್ಷಯ ,ಈರಣ್ಣ ತೊಂಡೀಕಟ್ಟಿ , ಬಸವರಾಜ ಕಾರಕುರ ಮುಂತಾದವರು ಈ ಸಮಯದಲ್ಲಿ ಇದ್ದರು.

Muddebihal: ರೈತರ ಆರ್ಥಿಕ ಬಲವರ್ಧನೆಗೆ ಸಹಕಾರಿಗಳು ಶ್ರಮಿಸಲಿ: ಸ್ವಾಮೀಜಿ

ಮುದ್ದೇಬಿಹಾಳ : ಶರಣ ವೀರೇಶ್ವರರ ಹೆಸರಿನಲ್ಲಿ ಸ್ಥಾಪಿತವಾದ ಬ್ಯಾಂಕ್‌ನಿಂದ ರೈತರು, ವ್ಯಾಪಾರಿಗಳ ಆರ್ಥಿಕ ಚೈತನ್ಯಕ್ಕೆ ಸಹಕಾರ ನೀಡುವ ಕಾರ್ಯ ಮುಂದೆ ಸಾಗಲಿ ಎಂದು ಉಪ್ಪಿನಬೆಟಗೇರಿ ವಿರುಪಾಕ್ಷ ಸ್ವಾಮೀಜಿ ಹೇಳಿದರು.

ಪಟ್ಟಣದ ದಾನೇಶ್ವರಿ ಪೆಟ್ರೋಲ್ ಹಿಂಭಾಗದಲ್ಲಿ ಬುಧವಾರ ನಾಲತವಾಡದ ಶರಣ ವೀರೇಶ್ವರ ಬ್ಯಾಂಕ್ ನೂತನ ಶಾಖೆಯ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿವಯೋಗಮಂದಿರದಲ್ಲಿ ಶರಣ ವೀರೇಶ್ವರರ ಪುತ್ಥಳಿ ಅವರ ಹೆಸರಿನ ಉದ್ಯಾನವನ ಇದೆ. ಅಲ್ಲಿ ಜಂಗಮ ವಟುಗಳಿಗೆ ಪಾಠ ಶಾಲೆಯಾಗಿದ್ದು ಶ್ರೇಷ್ಠ ಶರಣರ ಹೆಸರಿನಲ್ಲಿ ಬ್ಯಾಂಕು ಉತ್ತಮ ಅಭಿವೃದ್ಧಿ ಹೊಂದಿದೆ ಎಂದರು.

ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ್ ಮಾತನಾಡಿ, ದಿ.ಬಿ.ಎಂ.ಅಂಗಡಿ ಅವರು ಹುಟ್ಟು ಹಾಕಿದ ಬ್ಯಾಂಕು ಇಂದು ಹೆಮ್ಮರವಾಗಿ ಬೆಳೆದಿದೆ.ಬ್ಯಾಂಕುಗಳ ಆರ್ಥಿಕ ಸದೃಢತೆಗೆ ಗ್ರಾಹಕರ ನಿಯಮಿತ ವ್ಯವಹಾರ ಆಧಾರವಾಗಿದೆ ಎಂದರು.

ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ,ಬ್ಯಾಂಕ್ ಅಧ್ಯಕ್ಷ ಮಹಾಂತಪ್ಪಗೌಡ ಪಾಟೀಲ್, ಗಣ್ಯ ವರ್ತಕ ಬಿ.ಸಿ.ಮೋಟಗಿ,ಸಲಹಾ ಸಮಿತಿ ಪ್ರಮುಖ ಶಾಂತಪ್ಪ ಕಮತ, ಯುವ ಉದ್ಯಮಿ ಭರತಗೌಡ ಪಾಟೀಲ ನಡಹಳ್ಳಿ, ಬ್ಯಾಂಕ ಪ್ರಧಾನ ವ್ಯವಸ್ಥಾಪಕ ನಾಗರಾಜ ಗಂಗನಗೌಡರ ಇದ್ದರು.ಡಿ.ಆರ್.ಮಳಖೇಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೀರೇಶ ಬಂಗಾರಗುಂಡ ವಚನಗೀತೆಗೆ ಭರತನಾಟ್ಯ ನೃತ್ಯಗೈದರು. ಸಂಗಮೇಶ ಶಿವಣಗಿ ಸಂಗಡಿಗರು ಪ್ರಾರ್ಥಿಸಿದರು. ರಾಜು ಹಾದಿಮನಿ ನಿರೂಪಿಸಿದರು.

Latest News

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ "ಕಾಯಕ ಯೋಗಿ" ರಾಜ್ಯ ಪ್ರಶಸ್ತಿ ಲಭಿಸಿದೆ. ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ 'ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ದೊಡ್ಡಬಳ್ಳಾಪುರ ಇವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಗಡೇದ ಅವರು ಸದ್ಯಕ್ಕೆ ಹೂವಿನ ಹಿಪ್ಪರಗಿ ಅಂಚೆ ಇಲಾಖೆಯಲ್ಲಿ ಸಬ್ ಪೋಸ್ಟ್ಮಾಸ್ಟರ್ ಆಗಿ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ ಯಲ್ಲಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಸನ್ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ಸಭಾಭವನದ ಭೂಮಿಪೂಜೆ