Various events on May 27, 28: Mother of seven children fair: Goddess film procession

ಮೇ.27, 28 ರಂದು ವಿವಿಧ ಕಾರ್ಯಕ್ರಮ:ಏಳುಮಕ್ಕಳ ತಾಯಿ ಜಾತ್ರೆ : ದೇವಿ ಚಿತ್ರದ ಮೆರವಣಿಗೆ

ಮೇ.27, 28 ರಂದು ವಿವಿಧ ಕಾರ್ಯಕ್ರಮ:ಏಳುಮಕ್ಕಳ ತಾಯಿ ಜಾತ್ರೆ : ದೇವಿ ಚಿತ್ರದ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದ ಹಳೆಯ ತಹಶೀಲ್ದಾರ ಕಚೇರಿ ಸಮೀಪದಲ್ಲಿರುವ ಏಳುಮಕ್ಕಳ ತಾಯಿಯ ಜಾತ್ರಾ ಮಹೋತ್ಸವ ಮೂರು ವರ್ಷಕ್ಕೊಮ್ಮೆ ಅದ್ದೂರಿಯಾಗಿ ಜರುಗುತ್ತಿದ್ದು ದೇವಿ ಚಿತ್ರದ ಮೆರವಣಿಗೆ ಸೋಮವಾರ ಅದ್ದೂರಿಯಾಗಿ ನಡೆಯಿತು.
ಪಟ್ಟಣದ ಕಿಲ್ಲಾದಲ್ಲಿರುವ ಹಳೆಯ ಬಾವಿಯಿಂದ ದೇವಿಯ ಚಿತ್ರದೊಂದಿಗೆ ದೇವಸ್ಥಾನದವರೆಗೆ 101 ಕುಂಭಗಳನ್ನು ಹೊತ್ತುಕೊಂಡ ಮಹಿಳೆಯರು ಮೆರವಣಿಗೆಯಲ್ಲಿ ಸಾಗಿದರು.

ಚಲವಾದಿ ಸಮಾಜದ ಮುಖಂಡರಾದ ರೇವಣಪ್ಪ ಹರಿಜನ, ಶಿವಪ್ಪ ಅಜಮನಿ, ಪುರಸಭೆ ಸದಸ್ಯ ಶಿವು ಶಿವಪೂರ, ಕೆಯುಸಿ ಬ್ಯಾಂಕನ ನಿರ್ದೇಶಕ ಶ್ರೀಕಾಂತ ಚಲವಾದಿ, ರವಿ ಚಲವಾದಿ, ಯಲ್ಲಪ್ಪ ಅಜಮನಿ, ಚನ್ನಪ್ಪ ಮೂಕಿಹಾಳ, ರಾಮು ಹಂಗರಗಿ, ಮಹಾಂತೇಶ ಚಲವಾದಿ, ಶಂಕರ ಅಜಮನಿ, ಪವಾಡೆಪ್ಪ ದೊಡ್ಡಮನಿ, ಸಿದ್ದಪ್ಪ ಚಲವಾದಿ ಸೇರಿದಂತೆ ಹಲವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮೇ.27 ರಂದು ವಾದಿ ಪ್ರತಿವಾದಿ ಗೀಗೀ ಪದಗಳ ಕಾರ್ಯಕ್ರಮ, ಸಾಯಂಕಾಲ 6ಕ್ಕೆ ಏಳುಮಕ್ಕಳ ತಾಯಿ ಜಾತ್ರಾ ಮಹೋತ್ಸವದ ಅಂಗವಾಗಿ ಧರ್ಮಸಭೆ ಹಾಗೂ ಪ್ರತಿಭಾ ಪುರಸ್ಕಾರ ನಡೆಯಲಿದೆ. ಕುಂಟೋಜಿ ಚೆನ್ನವೀರ ಶಿವಾಚಾರ್ಯರು ಸಾನಿಧ್ಯ ವಹಿಸಲಿದ್ದು ಶಾಸಕ ಸಿ. ಎಸ್. ನಾಡಗೌಡ ಅಧ್ಯಕ್ಷತೆ ವಹಿಸುವರು. ಹುಬ್ಬಳ್ಳಿ-ಧಾರವಾಡ ಶಾಸಕ ಪ್ರಸಾದ ಅಬ್ಬಯ, ಸಿದ್ದಣ್ಣ ಮೇಟಿ ಉದ್ಟಾಟಿಸುವರು. ಮಾಜಿ ಶಾಸಕ ಎ. ಎಸ್. ಪಾಟೀಲ್ ನಡಹಳ್ಳಿ, ಮಾಜಿ ಶಾಸಕ ರಾಜು ಆಲಗೂರ, ಪುರಸಭೆ ಅಧ್ಯಕ್ಷ್ಯ ಮಹಿಬೂಬ ಗೊಳಸಂಗಿ, ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಕಾಂಗ್ರೆಸ್ ಮುಖಂಡ ಸಿ. ಬಿ. ಅಸ್ಕಿ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ ಸೇರಿದಂತೆ ಅನೇಕರು ಆಗಮಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ರಾತ್ರಿ ರಸಮಂಜರಿ ಕಾರ್ಯಕ್ರಮ, ಮೇ. 28 ರಂದು ವಾದಿ ಪ್ರತಿವಾದಿ ಗೀ ಗೀ ಪದಗಳ ಕಾರ್ಯಕ್ರಮ, ಸಂಜೆ 6ಕ್ಕೆ ಕಲಶ ಶಿಖರಕ್ಕೇರಲಿದೆ ಎಂದು ಜಾತ್ರಾ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ