Various events on May 27, 28: Mother of seven children fair: Goddess film procession

ಮೇ.27, 28 ರಂದು ವಿವಿಧ ಕಾರ್ಯಕ್ರಮ:ಏಳುಮಕ್ಕಳ ತಾಯಿ ಜಾತ್ರೆ : ದೇವಿ ಚಿತ್ರದ ಮೆರವಣಿಗೆ

ಮೇ.27, 28 ರಂದು ವಿವಿಧ ಕಾರ್ಯಕ್ರಮ:ಏಳುಮಕ್ಕಳ ತಾಯಿ ಜಾತ್ರೆ : ದೇವಿ ಚಿತ್ರದ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದ ಹಳೆಯ ತಹಶೀಲ್ದಾರ ಕಚೇರಿ ಸಮೀಪದಲ್ಲಿರುವ ಏಳುಮಕ್ಕಳ ತಾಯಿಯ ಜಾತ್ರಾ ಮಹೋತ್ಸವ ಮೂರು ವರ್ಷಕ್ಕೊಮ್ಮೆ ಅದ್ದೂರಿಯಾಗಿ ಜರುಗುತ್ತಿದ್ದು ದೇವಿ ಚಿತ್ರದ ಮೆರವಣಿಗೆ ಸೋಮವಾರ ಅದ್ದೂರಿಯಾಗಿ ನಡೆಯಿತು.
ಪಟ್ಟಣದ ಕಿಲ್ಲಾದಲ್ಲಿರುವ ಹಳೆಯ ಬಾವಿಯಿಂದ ದೇವಿಯ ಚಿತ್ರದೊಂದಿಗೆ ದೇವಸ್ಥಾನದವರೆಗೆ 101 ಕುಂಭಗಳನ್ನು ಹೊತ್ತುಕೊಂಡ ಮಹಿಳೆಯರು ಮೆರವಣಿಗೆಯಲ್ಲಿ ಸಾಗಿದರು.

ಚಲವಾದಿ ಸಮಾಜದ ಮುಖಂಡರಾದ ರೇವಣಪ್ಪ ಹರಿಜನ, ಶಿವಪ್ಪ ಅಜಮನಿ, ಪುರಸಭೆ ಸದಸ್ಯ ಶಿವು ಶಿವಪೂರ, ಕೆಯುಸಿ ಬ್ಯಾಂಕನ ನಿರ್ದೇಶಕ ಶ್ರೀಕಾಂತ ಚಲವಾದಿ, ರವಿ ಚಲವಾದಿ, ಯಲ್ಲಪ್ಪ ಅಜಮನಿ, ಚನ್ನಪ್ಪ ಮೂಕಿಹಾಳ, ರಾಮು ಹಂಗರಗಿ, ಮಹಾಂತೇಶ ಚಲವಾದಿ, ಶಂಕರ ಅಜಮನಿ, ಪವಾಡೆಪ್ಪ ದೊಡ್ಡಮನಿ, ಸಿದ್ದಪ್ಪ ಚಲವಾದಿ ಸೇರಿದಂತೆ ಹಲವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮೇ.27 ರಂದು ವಾದಿ ಪ್ರತಿವಾದಿ ಗೀಗೀ ಪದಗಳ ಕಾರ್ಯಕ್ರಮ, ಸಾಯಂಕಾಲ 6ಕ್ಕೆ ಏಳುಮಕ್ಕಳ ತಾಯಿ ಜಾತ್ರಾ ಮಹೋತ್ಸವದ ಅಂಗವಾಗಿ ಧರ್ಮಸಭೆ ಹಾಗೂ ಪ್ರತಿಭಾ ಪುರಸ್ಕಾರ ನಡೆಯಲಿದೆ. ಕುಂಟೋಜಿ ಚೆನ್ನವೀರ ಶಿವಾಚಾರ್ಯರು ಸಾನಿಧ್ಯ ವಹಿಸಲಿದ್ದು ಶಾಸಕ ಸಿ. ಎಸ್. ನಾಡಗೌಡ ಅಧ್ಯಕ್ಷತೆ ವಹಿಸುವರು. ಹುಬ್ಬಳ್ಳಿ-ಧಾರವಾಡ ಶಾಸಕ ಪ್ರಸಾದ ಅಬ್ಬಯ, ಸಿದ್ದಣ್ಣ ಮೇಟಿ ಉದ್ಟಾಟಿಸುವರು. ಮಾಜಿ ಶಾಸಕ ಎ. ಎಸ್. ಪಾಟೀಲ್ ನಡಹಳ್ಳಿ, ಮಾಜಿ ಶಾಸಕ ರಾಜು ಆಲಗೂರ, ಪುರಸಭೆ ಅಧ್ಯಕ್ಷ್ಯ ಮಹಿಬೂಬ ಗೊಳಸಂಗಿ, ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಕಾಂಗ್ರೆಸ್ ಮುಖಂಡ ಸಿ. ಬಿ. ಅಸ್ಕಿ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ ಸೇರಿದಂತೆ ಅನೇಕರು ಆಗಮಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ರಾತ್ರಿ ರಸಮಂಜರಿ ಕಾರ್ಯಕ್ರಮ, ಮೇ. 28 ರಂದು ವಾದಿ ಪ್ರತಿವಾದಿ ಗೀ ಗೀ ಪದಗಳ ಕಾರ್ಯಕ್ರಮ, ಸಂಜೆ 6ಕ್ಕೆ ಕಲಶ ಶಿಖರಕ್ಕೇರಲಿದೆ ಎಂದು ಜಾತ್ರಾ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್