Veerashaiva and Lingayat are not different - Shankara Bidari

ವೀರಶೈವ, ಲಿಂಗಾಯತ ಬೇರೆ ಬೇರೆಯಲ್ಲ-ಶಂಕರ ಬಿದರಿ

ವೀರಶೈವ, ಲಿಂಗಾಯತ ಬೇರೆ ಬೇರೆಯಲ್ಲ-ಶಂಕರ ಬಿದರಿ

Ad
Ad

ಮುದ್ದೇಬಿಹಾಳ : ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ, ರಂಭಾಪುರಿ ಸ್ವಾಮೀಜಿಯವರು ಸೇರಿದಂತೆ ಹಲವು ಮಠಾಧೀಶರು ವೀರಶೈವ ಹಾಗೂ ಲಿಂಗಾಯತ ಸಮಾಜಗಳು ಬೇರೆಯಲ್ಲ, ಎರಡೂ ಒಂದೇ ಎಂದು ಪ್ರತಿಪಾದಿಸಿದ್ದಾರೆ ಎಂದು ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಬಿದರಿ ಹೇಳಿದರು.

Ad
Ad

ಪಟ್ಟಣದ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವೀರಶೈವ ಲಿಂಗಾಯತ ಮಹಾಸಭಾ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಶಿಖ್ ಜನಾಂಗಕ್ಕಿಂತ ಎರಡುವರೆ ಪಟ್ಟು ವೀರಶೈವ ಲಿಂಗಾಯತ ಸಮಾಜದ ಜನಸಂಖ್ಯೆ ಇದೆ. ಶತ ಶತಮಾನದಿಂದ ಪರಿಶ್ರಮದಿಂದ ನಡೆದುಕೊಳ್ಳುವ ನ್ಯಾಯ ನಿಷ್ಠುರ ಜನಾಂಗ ವೀರಶೈವ, ಲಿಂಗಾಯತ ಸಮುದಾಯವಾಗಿದೆ. ಆದರೆ ರಾಜಕೀಯವಾಗಿ ಕಳೆದ 27 ವರ್ಷಗಳಲ್ಲಿ ಯಾವ ಪಕ್ಷವನ್ನು ಬೆಂಬಲಿಸುತ್ತ ಬರುತ್ತಿದ್ದೇವೆಯೋ ಕೇಂದ್ರದಲ್ಲಿ ಸೂಕ್ತ ಸ್ಥಾನಮಾನ ಸಿಗಲಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.

ನಮ್ಮ ಸಮುದಾಯದಿಂದ ಶೇ.90 ರಷ್ಟು ಬೆಂಬಲ ಕೊಟ್ಟಿದ್ದರೂ ಸಮಾಜದ ಒಬ್ಬರೂ ಗವರ್ನರ್ ಆಗಿಲ್ಲ.ರಾಷ್ಟ್ರಿಕೃತ ಬ್ಯಾಂಕುಗಳಲ್ಲಿ ನಾಮನಿರ್ದೇಶನ ಮಾಡಿಲ್ಲ. ಸಮುದಾಯದಿಂದ ಆಯ್ಕೆಯಾಗಿರುವ ಸಂಸದರು ಸಮಾಜದ ಬಗ್ಗೆ ಮಾತನಾಡುತ್ತಿಲ್ಲ. ಸಮಾಜವನ್ನು ನಮ್ಮಲ್ಲಿ ನಾವು ವಿಘಟನೆ ಮಾಡಿಕೊಂಡಿದ್ದೇವೆ. ಸಂಕುಚಿತ ಮನೋಭಾವನೆಯ ತಡೆಗೋಡೆಗಳನ್ನು ತೆರವುಗೊಳಿಸುವರೆಗೂ ನಾವು ಉದ್ಧಾರವಾಗುವುದಿಲ್ಲ. ಜಾತಿ ಸೂಚಕವನ್ನು ಬಿಟ್ಟು ನಾವೆಲ್ಲ ಲಿಂಗಾಯತರು, ವೀರಶೈವರು ಎಂದು ಒಂದೇ ವೇದಿಕೆಯಲ್ಲಿ ಹೇಳಬೇಕು ಎಂದರು. ಮನೆಯಲ್ಲಿ ಮಕ್ಕಳಿಗೆ ನಿತ್ಯವೂ ಒಂದೆರಡು ವಚನಗಳನ್ನು ಹೇಳಿಕೊಡಿ. ತಾಯಂದಿರು, ಪಾಲಕರು ಮಕ್ಕಳಿಗೆ ಒಂದು ವಚನ ಹೇಳಿಕೊಟ್ಟರೆ ಸಂಸ್ಕಾರ, ಸಂಸ್ಕೃತಿ ಉಳಿಯುತ್ತದೆ ಎಂದರು.

ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಸಿದ್ರಾಮಪ್ಪ ಉಪ್ಪಿನ, ಜಿಲ್ಲಾ ಘಟಕದ ಅಧ್ಯಕ್ಷ ವ್ಹಿ.ಸಿ.ನಾಗಠಾಣ, ಸಿದ್ಧರಾಜ ಹೊಳಿ ಮಾತನಾಡಿದರು. ಮಹಾಸಭಾ ಮಹಿಳಾ ಘಟಕದ ಅಧ್ಯಕ್ಷೆ ಮುಕ್ತಾಂಬಾ, ಗಣ್ಯರಾದ ಉಮಾದೇವಿ ಬಿದರಿ, ಮಹಾಸಭಾ ತಾಲ್ಲೂಕು ಅಧ್ಯಕ್ಷ ವೆಂಕನಗೌಡ ಪಾಟೀಲ್, ನಿಕಟಪೂರ್ವ ಅಧ್ಯಕ್ಷ ಬಾಪುಗೌಡ ಪಾಟೀಲ್, ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾವತಿ ತಡಸದ ಇದ್ದರು. ಕಾರ್ಯಕ್ರಮದಲ್ಲಿ ವಿವಿಧ ಸಮಾಜದ ಪ್ರಮುಖರಾದ ಬಸವಂತ್ರಾಯ ಗೂಳಿ, ಶರಣಪ್ಪ ಬಸರಕೋಡ, ಬಸವರಾಜ ಲಮಾಣಿ, ಬಸವರಾಜ ಹಡಪದ, ಶರಣಪ್ಪ ಚಲವಾದಿ, ಮಹೆಬೂಬ ಮುಲ್ಲಾ ಅವರನ್ನು ಸನ್ಮಾನಿಸಲಾಯಿತು. ಚಂದ್ರಶೇಖರ ನಾಗರಾಳ ಹಾಗೂ ಹೇಮಾ ಬಿರಾದಾರ ನಿರೂಪಿಸಿದರು. ರವೀಂದ್ರ ನಂದೆಪ್ಪನವರ ವಂದಿಸಿದರು. ಯುವ ಘಟಕ, ಮಹಿಳಾ ಘಟಕ ಹಾಗೂ ನೂತನ ಘಟಕದ ಪದಾಧಿಕಾರಿಗಳ ಪದಗ್ರಹಣ ನಡೆಸಲಾಯಿತು.

Latest News

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ :

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ಮುದ್ದೇಬಿಹಾಳ : ಮೊದಲು ಸಂಸ್ಕಾರ ಹೆಚ್ಚಾಗಿತ್ತು,ಶಿಕ್ಷಣ ಕಡಿಮೆ ಇತ್ತು. ಆದರೆ ಇಂದು ಶಿಕ್ಷಣ ಹೆಚ್ಚಿದಂತೆ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು,

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ವಿವರಗಳನ್ನು ಅವರು ನೀಡಿದರು. ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಈ