Veerashaiva and Lingayat are not different - Shankara Bidari

ವೀರಶೈವ, ಲಿಂಗಾಯತ ಬೇರೆ ಬೇರೆಯಲ್ಲ-ಶಂಕರ ಬಿದರಿ

ವೀರಶೈವ, ಲಿಂಗಾಯತ ಬೇರೆ ಬೇರೆಯಲ್ಲ-ಶಂಕರ ಬಿದರಿ

ಮುದ್ದೇಬಿಹಾಳ : ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ, ರಂಭಾಪುರಿ ಸ್ವಾಮೀಜಿಯವರು ಸೇರಿದಂತೆ ಹಲವು ಮಠಾಧೀಶರು ವೀರಶೈವ ಹಾಗೂ ಲಿಂಗಾಯತ ಸಮಾಜಗಳು ಬೇರೆಯಲ್ಲ, ಎರಡೂ ಒಂದೇ ಎಂದು ಪ್ರತಿಪಾದಿಸಿದ್ದಾರೆ ಎಂದು ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಬಿದರಿ ಹೇಳಿದರು.

ಪಟ್ಟಣದ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವೀರಶೈವ ಲಿಂಗಾಯತ ಮಹಾಸಭಾ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಶಿಖ್ ಜನಾಂಗಕ್ಕಿಂತ ಎರಡುವರೆ ಪಟ್ಟು ವೀರಶೈವ ಲಿಂಗಾಯತ ಸಮಾಜದ ಜನಸಂಖ್ಯೆ ಇದೆ. ಶತ ಶತಮಾನದಿಂದ ಪರಿಶ್ರಮದಿಂದ ನಡೆದುಕೊಳ್ಳುವ ನ್ಯಾಯ ನಿಷ್ಠುರ ಜನಾಂಗ ವೀರಶೈವ, ಲಿಂಗಾಯತ ಸಮುದಾಯವಾಗಿದೆ. ಆದರೆ ರಾಜಕೀಯವಾಗಿ ಕಳೆದ 27 ವರ್ಷಗಳಲ್ಲಿ ಯಾವ ಪಕ್ಷವನ್ನು ಬೆಂಬಲಿಸುತ್ತ ಬರುತ್ತಿದ್ದೇವೆಯೋ ಕೇಂದ್ರದಲ್ಲಿ ಸೂಕ್ತ ಸ್ಥಾನಮಾನ ಸಿಗಲಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.

ನಮ್ಮ ಸಮುದಾಯದಿಂದ ಶೇ.90 ರಷ್ಟು ಬೆಂಬಲ ಕೊಟ್ಟಿದ್ದರೂ ಸಮಾಜದ ಒಬ್ಬರೂ ಗವರ್ನರ್ ಆಗಿಲ್ಲ.ರಾಷ್ಟ್ರಿಕೃತ ಬ್ಯಾಂಕುಗಳಲ್ಲಿ ನಾಮನಿರ್ದೇಶನ ಮಾಡಿಲ್ಲ. ಸಮುದಾಯದಿಂದ ಆಯ್ಕೆಯಾಗಿರುವ ಸಂಸದರು ಸಮಾಜದ ಬಗ್ಗೆ ಮಾತನಾಡುತ್ತಿಲ್ಲ. ಸಮಾಜವನ್ನು ನಮ್ಮಲ್ಲಿ ನಾವು ವಿಘಟನೆ ಮಾಡಿಕೊಂಡಿದ್ದೇವೆ. ಸಂಕುಚಿತ ಮನೋಭಾವನೆಯ ತಡೆಗೋಡೆಗಳನ್ನು ತೆರವುಗೊಳಿಸುವರೆಗೂ ನಾವು ಉದ್ಧಾರವಾಗುವುದಿಲ್ಲ. ಜಾತಿ ಸೂಚಕವನ್ನು ಬಿಟ್ಟು ನಾವೆಲ್ಲ ಲಿಂಗಾಯತರು, ವೀರಶೈವರು ಎಂದು ಒಂದೇ ವೇದಿಕೆಯಲ್ಲಿ ಹೇಳಬೇಕು ಎಂದರು. ಮನೆಯಲ್ಲಿ ಮಕ್ಕಳಿಗೆ ನಿತ್ಯವೂ ಒಂದೆರಡು ವಚನಗಳನ್ನು ಹೇಳಿಕೊಡಿ. ತಾಯಂದಿರು, ಪಾಲಕರು ಮಕ್ಕಳಿಗೆ ಒಂದು ವಚನ ಹೇಳಿಕೊಟ್ಟರೆ ಸಂಸ್ಕಾರ, ಸಂಸ್ಕೃತಿ ಉಳಿಯುತ್ತದೆ ಎಂದರು.

ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಸಿದ್ರಾಮಪ್ಪ ಉಪ್ಪಿನ, ಜಿಲ್ಲಾ ಘಟಕದ ಅಧ್ಯಕ್ಷ ವ್ಹಿ.ಸಿ.ನಾಗಠಾಣ, ಸಿದ್ಧರಾಜ ಹೊಳಿ ಮಾತನಾಡಿದರು. ಮಹಾಸಭಾ ಮಹಿಳಾ ಘಟಕದ ಅಧ್ಯಕ್ಷೆ ಮುಕ್ತಾಂಬಾ, ಗಣ್ಯರಾದ ಉಮಾದೇವಿ ಬಿದರಿ, ಮಹಾಸಭಾ ತಾಲ್ಲೂಕು ಅಧ್ಯಕ್ಷ ವೆಂಕನಗೌಡ ಪಾಟೀಲ್, ನಿಕಟಪೂರ್ವ ಅಧ್ಯಕ್ಷ ಬಾಪುಗೌಡ ಪಾಟೀಲ್, ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾವತಿ ತಡಸದ ಇದ್ದರು. ಕಾರ್ಯಕ್ರಮದಲ್ಲಿ ವಿವಿಧ ಸಮಾಜದ ಪ್ರಮುಖರಾದ ಬಸವಂತ್ರಾಯ ಗೂಳಿ, ಶರಣಪ್ಪ ಬಸರಕೋಡ, ಬಸವರಾಜ ಲಮಾಣಿ, ಬಸವರಾಜ ಹಡಪದ, ಶರಣಪ್ಪ ಚಲವಾದಿ, ಮಹೆಬೂಬ ಮುಲ್ಲಾ ಅವರನ್ನು ಸನ್ಮಾನಿಸಲಾಯಿತು. ಚಂದ್ರಶೇಖರ ನಾಗರಾಳ ಹಾಗೂ ಹೇಮಾ ಬಿರಾದಾರ ನಿರೂಪಿಸಿದರು. ರವೀಂದ್ರ ನಂದೆಪ್ಪನವರ ವಂದಿಸಿದರು. ಯುವ ಘಟಕ, ಮಹಿಳಾ ಘಟಕ ಹಾಗೂ ನೂತನ ಘಟಕದ ಪದಾಧಿಕಾರಿಗಳ ಪದಗ್ರಹಣ ನಡೆಸಲಾಯಿತು.

Latest News

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ. ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ 3 ಗಂಟೆ ನಂತರ, ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು