ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ.

ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12 ಗಂಟೆಗೆ ಪೂರ್ಣಗೊಂಡಿತು.ಮತಎಣಿಕೆ ಕಾರ್ಯವನ್ನು ಕಂದಾಯ ಇಲಾಖೆಯವರಿಗೆ ವಹಿಸಿದ್ದರಿಂದ ಯಾವುದೇ ಗೊಂದಲಗಳಿಲ್ಲದoತೆ ಫಲಿತಾಂಶ ಪ್ರಕಟಿಸಲಾಯಿತು.

ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್, ಅಂಜುಮನ್ ಸಂಸ್ಥೆಯ ಕೇರಟೇಕರ್ ತಬಸ್ಸುಮ್ ಮುಲ್ಲಾ,ತಹಶೀಲ್ದಾರ ಆನಂದ ಕೋಲಾರ,ಸಿಪಿಐ ಮೊಹ್ಮದ ಫಸಿವುದ್ದೀನ್,ಪಿಎಸ್‌ಐ ಸಂಜಯ ತಿಪರೆಡ್ಡಿ,ಆಲಮಟ್ಟಿ,ತಾಳಿಕೋಟಿ ಪಿಎಸೈಗಳು ಮತ ಎಣಿಕೆ ಕಾರ್ಯಪೂರ್ಣಗೊಳ್ಳುವವರೆಗೂ ಮತ ಎಣಿಕೆ ಕೇಂದ್ರದಲ್ಲಿದ್ದು ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ನೋಡಿಕೊಂಡರು.

ಫಲಿತಾoಶ ಪ್ರಕಟಿಸಿರುವ ಚುನಾವಣಾಧಿಕಾರಿ ಔದ್ರಾಮ್, ಕಲ್ಬುರ್ಗಿ ಹೈಕೋರ್ಟ್ ಪೀಠದ ಎರಡು ಪ್ರಕರಣಗಳ ಅಂತಿಮ ಆದೇಶಕ್ಕೆ ಈ ಫಲಿತಾಂಶವು ಒಳಗೊಂಡಿದೆ ಎಂದು ಘೋಷಿಸಿದರು.ಡಿವೈಎಸ್ಪಿ ಚಂದ್ರಕಾoತ ನಂದರೆಡ್ಡಿ ಸಂಜೆಯವರೆಗೂ ಮತ ಎಣಿಕೆ ಕೇಂದ್ರದಲ್ಲಿದ್ದು ಕಿರಿಯ ಅಧಿಕಾರಿಗಳಿಗೆ ಭದ್ರತೆ ಉಸ್ತುವಾರಿ ಮಾರ್ಗದರ್ಶನ ಮಾಡಿದರು.

ಒಟ್ಟು 2625 ಮತದಾರರ ಪೈಕಿ 2440 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.ಶೇ.92.95ರಷ್ಟು ದಾಖಲೆ ಪ್ರಮಾಣದ ಮತದಾನ ದಾಖಲಾಗಿತ್ತು.ಚುನಾವಣಾಧಿಕಾರಿಯಿಂದ ನಾಮಪತ್ರ ತಿರಸ್ಕಾರಗೊಂಡು ಕಣದಿಂದ ಹೊರಗೆ ಬಿದ್ದಿದ್ದ ಅಂಜುಮನ್ ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ,ಪತ್ರಕರ್ತ ಗುಲಾಮಮೊಹ್ಮದ ದಫೇದಾರ, ಟೆಂಟ್ ಹೌಸ್ ಮಾಲೀಕರ ಸಂಘದ ಅಧ್ಯಕ್ಷ ಯಾಸೀನ ಸೋಠೆ,ಕಾರ್ಮಿಕ ಮುಖಂಡ ಇಸ್ಮಾಯಿಲ್ ಗೋಲಂದಾಜ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾತ್ರಿ 12ಗಂಟೆಯಾದರೂ ಅಭ್ಯರ್ಥಿಗಳ ಫಲಿತಾಂಶ ಪ್ರಕಟಗೊಳ್ಳುವ ನಿರೀಕ್ಷೆಯನ್ನು ಕಾದು ಕೂತಿದ್ದ ಸಾವಿರಾರು ಬೆಂಬಲಿಗರು ವಿಜಯಪುರ ರಸ್ತೆಯಲ್ಲಿ ಗೆಲುವಿನ ಸಂಭ್ರಮಾಚರಣೆ ಆಚರಿಸುವುದು ಕಂಡು ಬಂದಿತು.

ಗೆಲುವು ಸಾಧಿಸಿದವರು:
ಅಬ್ದುಲಮಜೀದ ಮಕಾನದಾರ(ಮುನ್ನಾ)-1052,ಡೋಂಗ್ರಿಸಾಬ ಢವಳಗಿ-962,ಅಲ್ಲಾಭಕ್ಷ ದೇಸಾಯಿ-954,ಇರ್ಫಾನಲಿ ಕೂಡಗಿ-940,ರಮಜಾನ್ ನದಾಫ-882.ನೂರೇಹುಸೇನ್ ನದಾಫ(ಸದ್ದಾಂ)-872,ಅಬ್ದುಲಗಫೂರ ಮಕಾನದಾರ-871,ಲಾಲಸಾ ಮೋಮಿನ(ದಾದಾ)-851,ಅಬ್ದುಲಅಜೀಜ ನಾಯ್ಕೋಡಿ-815,ಇಶಾಕಸಾ ಮಕಾನದಾರ-794,ಮೊಹ್ಮದರಫೀಕ ನಾಗರಾಳ-773,ಹುಸೇನಬಾದಷಾ ಸಾಲಿಮನಿ-755,ಯಾಸೀನ ಸೋಠೆ-755,ಅತಾವುಲ್ಲಾಷಾ ಮಕಾನದಾರ-734,ಇಸ್ಮಾಯಿಲ್ ಗೊಳಸಂಗಿ-722,ಅಸ್ಲಾo ನಾಗೂರ-717,ಶಬ್ಬೀರ ಕಲ್ಮನಿ-696,ಇಸ್ಮಾಯಿಲ್ ಗೋಲಂದಾಜ-687,ಮಹೆಬೂಬ ಎಂ.ಮುಲ್ಲಾ-672,ಮಹೆಬೂಬ ಆರ್.ಮುಲ್ಲಾ(ಟಾಪ್‌ಇನ್‌ಟೌನ್)-672,ಉಮರಫಾರೂಕ್ ಚೌಧರಿ-667,ಸುಲೇಮಾನ ಮಮದಾಪುರ-660,ಗುಲಾಮಮೊಹ್ಮದ ದಫೇದಾರ-640,ಅಬ್ದುಲಜಬ್ಬಾರ ಗೋಲಂದಾಜ-630,ಅಮೀರಸೂಹೈಲ್ ದಖನಿ-626 ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದ್ದಾರೆ.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ