ಶಂಕರಗೌಡ ಬಿರಾದಾರಗೆ ಗೆಲುವು: ಸರ್ಕಾರಿ ನೌಕರರ ಸಂಘದ ಒಂದು ಸ್ಥಾನಕ್ಕೆ ಚುನಾವಣೆ

ಶಂಕರಗೌಡ ಬಿರಾದಾರಗೆ ಗೆಲುವು: ಸರ್ಕಾರಿ ನೌಕರರ ಸಂಘದ ಒಂದು ಸ್ಥಾನಕ್ಕೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಒಂದು ನಿರ್ದೇಶಕ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ತುಂಬಗಿ ಎಚ್.ಪಿ.ಎಸ್ ಶಾಲೆಯ ಶಿಕ್ಷಕ ಶಂಕರಗೌಡ ಬಿರಾದಾರ ಆಯ್ಕೆಯಾಗಿದ್ದಾರೆ.

ಪಟ್ಟಣದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯಿತು.431 ಒಟ್ಟು ಮತದಾರರಲ್ಲಿ 395 ಮತದಾರರು ತಮ್ಮ ಹಕ್ಕು ಚಲಾಯಿಸಿದರು.ಅದರಲ್ಲಿ ಶಂಕರಗೌಡ ಬಿರಾದಾರಗೆ 217 , ಬಂದಗಿಪಟೇಲ್ ಗಣಿಯಾರ ಅವರಿಗೆ 173 ಮತಗಳು ದೊರೆತವು. ಐದು ಮತಗಳು ಅಸಿಂಧುಗೊಂಡವು. ಶಂಕರಗೌಡ ಬಿರಾದಾರ ಅವರು 44 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಆರ್.ಕಟ್ಟಿಮನಿ, ಎಆರ್‌ಒ ಬಿ.ಎಚ್.ಹೂಗಾರ ಮಾಹಿತಿ ನೀಡಿದರು.
ಸಹಾಯಕರಾಗಿ ಮಹಾಂತೇಶ ಮಾಗಿ, ಆರ್.ಎಸ್.ಹೊಸೂರ,ರಿಯಾಜ ನಾಯ್ಕೋಡಿ, ಮುತ್ತಣ್ಣ ವಾಲೀಕಾರ ಕಾರ್ಯನಿರ್ವಹಿಸಿದರು.

ವಿಜೇತ ಅಭ್ಯರ್ಥಿಗೆ ಜಿ.ಒ.ಸಿ.ಸಿ ಬ್ಯಾಂಕ್ ನಿರ್ದೇಶಕ ಅರವಿಂದ ಹೂಗಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ,ಗ್ರಾಮ ಆಡಳಿತಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಜೂಲಗುಡ್ಡ, ತಾಲ್ಲೂಕು ಅಧ್ಯಕ್ಷ ಮನೋಜ ರಾಠೋಡ, ವೆಂಕಟೇಶ ಅಂಬಿಗೇರ, ಎನ್.ಎಸ್.ತುರುಡಗಿ,ಬಿ.ಎಸ್.ಹೊಳಿ,ಎಂ.ಎನ್.ಪಾಟೀಲ್ ಅಭಿನಂದಿಸಿದರು.

ವಿಜಯೋತ್ಸವ: ಅವಿರೋಧ ಆಯ್ಕೆಗೆ ಸಾಕಷ್ಟು ಪ್ರಯತ್ನ ಪಟ್ಟರೂ ಒಂದು ಸ್ಥಾನಕ್ಕೆ ಚುನಾವಣೆ ನಡೆಸುವುದು ಅನಿವಾರ್ಯವಾಯಿತು.ಶಾಂತಿಯುತವಾಗಿ ಚುನಾವಣೆ ನಡೆಸಲಾಗಿದ್ದು ನಮ್ಮ ಪೆನಲ್ ಅಭ್ಯರ್ಥಿ ಶಂಕರಗೌಡ ಬಿರಾದಾರ ಆಯ್ಕೆಯಾಗಿರುವುದು ಖುಷಿ ತಂದಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಳಿಕೋಟಿ ಘಟಕದ ಅಧ್ಯಕ್ಷ ಬಿ.ಟಿ.ವಜ್ಜಲ ತಿಳಿಸಿದರು.ಈ ಸಂದರ್ಭದಲ್ಲಿ ಬೆಂಬಲಿಗರಾದ ಸುರೇಶ ಬೀರಗೊಂಡ, ಸುರೇಶ ವಾಲೀಕಾರ, ರಮೇಶ ಹಿಪ್ಪರಗಿ,ಬಿ.ಎಸ್.ಶೇಖಣ್ಣವರ, ಶ್ರೀಕಾಂತ ಪವಾರ ಇದ್ದರು.ಎಎಸ್‌ಐ ಬಿ.ಡಿ.ಪವಾರ ಭದ್ರತೆ ಒದಗಿಸಿದ್ದರು.


Latest News

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಮುದ್ದೇಬಿಹಾಳ : ಭೂಮಿಯ ಮೇಳೆ ಮನುಷ್ಯ ಸ್ವಾರ್ಥವಿಲ್ಲದ ಜೀವನ ನಡೆಸಬೇಕು. ಈ ಭೂಮಿಯ ಮೇಲೆ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ಖಾತ್ರಿ ಯೋಜನೆಯಡಿ ನಿರಂತರ ಕೆಲಸ : ಗಣಾಚಾರಿ ಮುದ್ದೇಬಿಹಾಳ : ತಾಲ್ಲೂಕಿನ ಮುದ್ನಾಳ ಗ್ರಾಮದ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಮುದ್ದೇಬಿಹಾಳ : ಕ್ರೀಡಾಪಟುಗಳನ್ನು ಅವರ ಕೌಟುಂಬಿಕ ಹಿನ್ನೆಲೆ, ಜಾತಿ, ಮತದ ಆಧಾರದ ಮೇಲೆ ಗುರುತಿಸದೇ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್‌ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್‌ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.