Vijayalakshmi Ilakalla Electd President, Gangana Gowdra Electd Unopposed As Vice President

ವಿಜಯಲಕ್ಷ್ಮಿ ಇಲಕಲ್ಲ ಅಧ್ಯಕ್ಷೆ, ಗಂಗನಗೌಡ್ರ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

ವಿಜಯಲಕ್ಷ್ಮಿ ಇಲಕಲ್ಲ ಅಧ್ಯಕ್ಷೆ, ಗಂಗನಗೌಡ್ರ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ/ನಾಲತವಾಡ : ಪಟ್ಟಣ ಪಂಚಾಯತ್ ಆಡಳಿತ ನಿರೀಕ್ಷೆಯಂತೆ ಕಾಂಗ್ರೆಸ್ ಸದಸ್ಯರ ಪಾಲಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

14 ಸದಸ್ಯರ ಬಲದ ಪಟ್ಟಣ ಪಂಚಾಯತ್‌ನಲ್ಲಿ ಸೋಮವಾರ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಘೋಷಿಸಲಾಯಿತು.

ಸಾಮಾನ್ಯ ಮಹಿಳೆಗೆ ಮೀಸಲಿದ್ದ ಅಧ್ಯಕ್ಷ ಸ್ಥಾನಕ್ಕೆ ವಿಜಯಲಕ್ಷ್ಮಿ ಇಲಕಲ್ಲ, ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜ ಗಂಗನಗೌಡರ ಅವರಿಬ್ಬರೇ ನಾಮಪತ್ರ ಸಲ್ಲಿಸಿದ್ದರು. ಇಬ್ಬರ ನಾಮಪತ್ರಗಳು ಕ್ರಮಬದ್ಧವಾಗಿದ್ದು ವಿಜಯಲಕ್ಷ್ಮಿ ಇಲಕಲ್ ಅಧ್ಯಕ್ಷರಾಗಿ, ಬಸವರಾಜ ಗಂಗನಗೌಡರ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಹಶೀಲ್ದಾರ್ರು ಆಗಿರುವ ಚುನಾವಣಾಧಿಕಾರಿ ಬಲರಾಮ ಕಟ್ಟಿಮನಿ ಘೋಷಿಸಿದರು.

ಶಾಸಕ ನಾಡಗೌಡರ ಭಾಗಿ:

ಚುನಾವಣಾ ಪ್ರಕ್ರಿಯೆಯಲ್ಲಿ ಸಾಮಾನ್ಯವಾಗಿ ವಿಧಾನಸಭೆ, ಲೋಕಸಭೆ ಸದಸ್ಯರಿಗೂ ಪಾಲ್ಗೊಳ್ಳಲು ಅವಕಾಶ ಇರುತ್ತದೆ. ಈ ಹಿನ್ನೆಲೆಯಲ್ಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾದರು.

ಅಧ್ಯಕ್ಷ ಸ್ಥಾನಕ್ಕೆ ಎಸ್.ಬಿ.ಗಂಗನಗೌಡರ ಸೂಚಕರಾಗಿ ಸಹಿ ಮಾಡಿದರೆ ಉಪಾಧ್ಯಕ್ಷ ಸ್ಥಾನಕ್ಕೆ ಸಂಗಣ್ಣ ಬಾರಡ್ಡಿ ಸೂಚಕರಾಗಿ ಸಹಿ ಮಾಡಿದರು. ಪಪಂ ಮುಖ್ಯಾಧಿಕಾರಿ ಈರಣ್ಣ ಕೊಣ್ಣೂರ ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಹಿಸಿದರು.

ವಿಜಯೋತ್ಸವದ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ನಾಲತವಾಡ ಪಟ್ಟಣದ ವ್ಯಾಪ್ತಿಯಲ್ಲಿ ಸರ್ಕಾರದಿಂದ ಬಂದಿರುವ ಯೋಜನೆಗಳನ್ನು ಬಡವರಿಗೆ ತಲುಪಿಸುವ ಕೆಲಸ ಮಾಡಬೇಕು. ಒಳ್ಳೆಯ ಆಡಳಿತ ನೀಡುವಂತೆ ಶುಭ ಹಾರೈಸಿದರು.

ಇದನ್ನೂ ಓದಿ: ಶರೀಫ್ ಅಜ್ಜರ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮುಖಂಡರಾದ ಶಂಕರರಾವ ದೇಶಮುಖ, ಗುರುಪ್ರಸಾದ ದೇಶಮುಖ, ರಾಯನಗೌಡ ತಾತರೆಡ್ಡಿ, ಪಟ್ಟಣದ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಪೃಥ್ವಿರಾಜ ನಾಡಗೌಡ್ರ ಸೇರಿದಂತೆ ಸದಸ್ಯರು, ಕಾಂಗ್ರೆಸ್ ಮುಖಂಡರು ಇದ್ದರು.

Latest News

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ವಿನಂತಿಸಿದರು. ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಆ.23ರಂದು ಮದ್ಯಾಹ್ನ 12ಗಂಟೆಗೆ ಸಂಗೊಳ್ಳಿ ರಾಯಣ್ಣನ ಜಾತ್ರೆಯ ಸಮಾರಂಭವಿದ್ದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಪ.ಪೂ. ನಿರಂಜನಾನOದಪುರಿ ಮಹಾಸ್ವಾಮೀಜಿಗಳು, ವಿವಿಧ ಜಿಲ್ಲೆಗಳ ಹರಗುರು ಚರಮೂರ್ತಿಗಳು, ಹುಲಜಂತಿ ಮಾಳಿಂಗರಾಯ ಮಹಾರಾಜರು, ರಾಜ್ಯದ ಮಂತ್ರಿ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ ಕೃತಿ ಲೋಕಾರ್ಪಣೆ ಹಾಗೂ ಸಾಧಕ ಕಲಾವಿದರಿಗೆ ಗೌರವ ಸನ್ಮಾನ ಕಾರ್ಯಕ್ರಮ ಆ.22 ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಕುಂಟೋಜಿ ಭಾವೈಕ್ಯತೆ ಮಠದ ಚೆನ್ನವೀರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸುವರು.ಬಸರಕೋಡ ಪವಾಡ ಬಸವೇಶ್ವರ ಕಮೀಟಿ ಅಧ್ಯಕ್ಷ ಕೆ.ವಾಯ್.ಬಿರಾದಾರ ಉದ್ಘಾಟಿಸುವರು.ಎಸ್.ಜಿ.ವಿ.ಸಿ ಕಾಲೇಜಿನ ಕಾರ್ಯದರ್ಶಿ ಅಶೋಕ ತಡಸದ ಕೃತಿ ಲೋಕಾರ್ಪಣೆ ಮಾಡುವರು.ಕರ್ನಾಟಕ