ವಕೀಲ ಮೇಲಿನಕೇರಿ ಮರ್ಡರ್ ಕೇಸ್.. ನಾಲ್ಕೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿಪಡೆ..!

ವಕೀಲ ಮೇಲಿನಕೇರಿ ಮರ್ಡರ್ ಕೇಸ್.. ನಾಲ್ಕೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿಪಡೆ..!

ವಿಜಯಪುರ : ಆ.8 ರಂದು ವಿಜಯಪುರದಲ್ಲಿ ವಕೀಲ ರವಿ ಮೇಲಿನಕೇರಿ (Ravi Melinakeri) ಅವರನ್ನು ಸ್ಕೂಟಿಗೆ ಕಾರು ಡಿಕ್ಕಿ ಹೊಡೆಸಿ ಕೊಲೆಗೈದ ಘಟನೆಗೆ ಸಂಬಂಧಿಸಿದ ವಿಜಯಪುರ ಪೊಲೀಸರು ಆರೋಪಿಗಳನ್ನು ನಾಲ್ಕೇ ದಿನದಲ್ಲಿ ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.

ಘಟನೆ ವಿವರ : ಆ.8 ರಂದು ವಕೀಲ ರವಿ ಮೇಲಿನಕೇರಿ ಅವರು, ಬಾಗಲಕೋಟ ಕ್ರಾಸ್ ಕಡೆಗೆ ಹೋಗುತ್ತಿರುವಾಗ ಪಾಲಿಟೆಕ್ನಿಕ್ ಹಾಸ್ಟೆಲ್ ಹತ್ತಿರ ಯಾರೋ ದುಷ್ಕರ್ಮಿಗಳು ಒಂದು ನಂಬರ್ ಪ್ಲೇಟ್ ಇಲ್ಲದ ಇನೋವಾ ಗಾಡಿಯಲ್ಲಿ ಬಂದು ವಕೀಲ ರವಿ ಇವರಿಗೆ ಹಿಂದಿನಿಂದ ಡಿಕ್ಕಿ ಹೊಡೆಸಿದ್ದು, ಆಗ ರವಿ (Ravi Melinakeri) ಇವರು ಸದರಿ ಇನೋವಾ ಗಾಡಿಯ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದರು. ಆಗ ಆ ದುಷ್ಕರ್ಮಿಗಳು ತನ್ನ ಇನೋವಾ ಗಾಡಿಯನ್ನು ನಿಲ್ಲಿಸದೇ ಗಾಡಿಯ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದ ರವಿಯನ್ನು ಹಾಗೆಯೇ ಎಳೆಯಿಸಿಕೊಂಡು ಮುಂದೆ ಹೋಗಿ ಬಲಕ್ಕೆ ತಿರುಗಿ ಬಿಎಲ್‌ಡಿಇ ಆಯುರ್ವೇದಿಕ ಕಾಲೇಜಿನ ಮುಂದೆ ಹಾಯ್ದು ಮನಗೂಳಿ ಅಗಸಿಯಿಂದ ಬಲಕ್ಕೆ ತಿರುಗಿ ಮನಗೂಳಿ ಕಡೆಗೆ ಹೋಗುವ ರಸ್ತೆಯ ಮೇಲೆ ಹೊರಟಾಗ ಇನೋವಾ ಗಾಡಿಯ ಕೆಳಗೆ ಸಿಕ್ಕಿಕೊಂಡಿದ್ದ ವಕೀಲ ರವಿ ಇವರ ಶವವು ಮನಗೂಳಿ ರಸ್ತೆಯ ಮೇಲೆ ಇರುವ ಸ್ಮಶಾಣದ ಹತ್ತಿರ ರಸ್ತೆಯ ಮೇಲೆ ಬಿದ್ದಿತ್ತು.

Join Our Telegram: https://t.me/dcgkannada

ಇದಕ್ಕೆ ಸಂಬಂಧಪಟ್ಟಂತೆ ಮೃತ ರವಿ ಈತನ ಸಹೋದರ ಪ್ರಕಾಶ ಮೇಲಿನಕೇರಿ ಕೊಟ್ಟ ದೂರಿನ ಮೇಲೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಗುನ್ನಾ ನಂ: 161/2024 ಕಲಂ 281, 106(1) ಬಿಎನ್‌ಎಸ್ ಹಾಗೂ 187 ಐಎಮ್‌ವಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಸದರಿ ಪ್ರಕರಣದ ತನಿಖಾ ಕಾಲದಲ್ಲಿ ಇದು ರಸ್ತೆ ಅಪಘಾತವಾಗಿರದೇ ಒಂದು ಕೊಲೆ ಪ್ರಕರಣವೆಂದು ಪತ್ತೆ ಹಚ್ಚಿ ಸದರಿ ಕೊಲೆಯ ಪ್ರಮುಖ ಸೂತ್ರಧಾರ ತುಳಸಿರಾಮ ಪಂಡಿತ ಹರಿಜನ ಎನ್ನುವವನನ್ನು ದಸ್ತಗಿರಿ ಮಾಡಿ ವಿಚಾರಣೆಗೆ ಒಳಪಡಿಸಿದ್ದು ಅವನು ತನಗೂ ಮತ್ತು ರವಿಗೂ 4-5 ತಿಂಗಳುಗಳ ಹಿಂದೆ ಜಗಳವಾಗಿ ರವಿಯು ತನ್ನ ಸಹೋದರರ ಜೊತೆ ಸೇರಿ ತನಗೆ ಹೊಡೆದು ಅವಮಾನ ಪಡಿಸಿದ್ದಲ್ಲದೇ ತನ್ನನ್ನು ಕೊಲೆ ಮಾಡುವುದಾಗಿ ಹೇಳುತ್ತಾ ತಿರುಗಾಡುತ್ತಿದ್ದನು.

ಇದನ್ನೂ‌ ಓದಿ: ಅಪರಿಚಿತ ವಾಹನ ಡಿಕ್ಕಿ.. ರೈತ ಸ್ಥಳದಲ್ಲಿಯೇ ದುರ್ಮರಣ..!

ಈಗ ಸುಮಾರು 20 ದಿನಗಳ ಹಿಂದೆ ರವಿ ಮೇಲಿನಕೇರಿ ಇವನು ತನ್ನ ಸಹೋದರರ ಜೊತೆ ಸೇರಿ ಅಲೆಕ್ಸ್ನನ್ನು ಮನೆಯಿಂದ ಕಿಡ್ನಾಪ್ ಮಾಡಿಕೊಂಡು ಒಯ್ದು ಹೊಡೆದು, ತುಳಸಿರಾಮನನ್ನು ನಿನ್ನನ್ನು ಕೊಲೆ ಮಾಡುತ್ತೇವೆ. ತುಳಸಿರಾಮನಿಗೆ ಹೇಳು ಎಂದು ಧಮ್ಮಾಯಿಸಿ ಕಳಿಸಿದ್ದನು. ಆದ್ದರಿಂದ ತಾನು ತನ್ನ ಸ್ನೇಹಿತರಾದ ಅಲೆಕ್ಸ್ ಗೊಲ್ಲರ, ಪ್ರಕಾಶ ಗೊಲ್ಲರ, ಷಣ್ಮುಖ ನಡುವಿನಕೇರಿ, ಜುಮನಾಳದ ಸದ್ದಾಮ್, ಮುರುಗೇಶ ಉಳ್ಳಾಗಡ್ಡಿ, ಅಮೀನ ಶೇಖ್ ಇವರ ಜೊತೆ ಸೇರಿ ರವಿ ಮೇಲಿನಕೇರಿ ಇವನನ್ನು ಕೊಲೆ ಮಾಡುವ ಸಂಚು ರೂಪಿಸಿ, ಆ.8 ರಂದು ಆನಂದ ಅತಾಲಟ್ಟಿ ಇವನು ಸದ್ದಾಮ್‌ನ ಹತ್ತಿರ ಒಂದು ಲಕ್ಷ ರೂ.ಗಳಿಗೆ ಒತ್ತೆ ಇಟ್ಟಿದ್ದ ಇನೋವಾ ಗಾಡಿಯಿಂದ ವಕೀಲ ತನ್ನ ಬಿಳಿ ಬಣ್ಣದ ಸ್ಕೂಟಿಯ ಮೇಲೆ ಹೊರಟಾಗ ಪಾಲಿಟೆಕ್ನಿಕ್ ಹಾಸ್ಟೇಲ್ ಮುಂದೆ ಹಿಂದಿನಿಂದ ಹಾಯಿಸಿ ಅವನಿಗೆ ಕೊಲೆ ಮಾಡಿರುತ್ತಾರೆ ಎಂದು ಒಪ್ಪಿಕೊಂಡಿರುತ್ತಾನೆ.

ಇತರೆ ಆರೋಪಿತರಾದ ಅಲೆಕ್ಸ್ ಗೊಲ್ಲರ, ಷಣ್ಮುಖ ನಡುವಿನಕೇರಿ, ಪ್ರಕಾಶ ಗೊಲ್ಲರ, ಮುರುಗೇಶ ಉಳ್ಳಾಗಡ್ಡಿ ಇವರನ್ನು ಸಹ ಬಂಧಿಸಿ ತನಿಖೆ ಕೈಗೊಳ್ಳಲಾಗಿದೆ. ಕೊಲೆ ಮಾಡುವ ಸಮಯದಲ್ಲಿ ಆ ಗಾಡಿಯಲ್ಲಿ ಅಲೆಕ್ಸ್, ಷಣ್ಮುಖ ಹಾಗೂ ಸದ್ದಾಮ್ ಇದ್ದು ಅಲೆಕ್ಸ್ ಇವನು ಗಾಡಿಯನ್ನು ಓಡಿಸುತ್ತಿದ್ದನು ಎಂದು ತನಿಖೆಯಲ್ಲಿ ದೃಢಪಟ್ಟಿರುತ್ತದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ