ವಕೀಲ ಮೇಲಿನಕೇರಿ ಮರ್ಡರ್ ಕೇಸ್.. ನಾಲ್ಕೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿಪಡೆ..!

ವಕೀಲ ಮೇಲಿನಕೇರಿ ಮರ್ಡರ್ ಕೇಸ್.. ನಾಲ್ಕೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿಪಡೆ..!

ವಿಜಯಪುರ : ಆ.8 ರಂದು ವಿಜಯಪುರದಲ್ಲಿ ವಕೀಲ ರವಿ ಮೇಲಿನಕೇರಿ (Ravi Melinakeri) ಅವರನ್ನು ಸ್ಕೂಟಿಗೆ ಕಾರು ಡಿಕ್ಕಿ ಹೊಡೆಸಿ ಕೊಲೆಗೈದ ಘಟನೆಗೆ ಸಂಬಂಧಿಸಿದ ವಿಜಯಪುರ ಪೊಲೀಸರು ಆರೋಪಿಗಳನ್ನು ನಾಲ್ಕೇ ದಿನದಲ್ಲಿ ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.

ಘಟನೆ ವಿವರ : ಆ.8 ರಂದು ವಕೀಲ ರವಿ ಮೇಲಿನಕೇರಿ ಅವರು, ಬಾಗಲಕೋಟ ಕ್ರಾಸ್ ಕಡೆಗೆ ಹೋಗುತ್ತಿರುವಾಗ ಪಾಲಿಟೆಕ್ನಿಕ್ ಹಾಸ್ಟೆಲ್ ಹತ್ತಿರ ಯಾರೋ ದುಷ್ಕರ್ಮಿಗಳು ಒಂದು ನಂಬರ್ ಪ್ಲೇಟ್ ಇಲ್ಲದ ಇನೋವಾ ಗಾಡಿಯಲ್ಲಿ ಬಂದು ವಕೀಲ ರವಿ ಇವರಿಗೆ ಹಿಂದಿನಿಂದ ಡಿಕ್ಕಿ ಹೊಡೆಸಿದ್ದು, ಆಗ ರವಿ (Ravi Melinakeri) ಇವರು ಸದರಿ ಇನೋವಾ ಗಾಡಿಯ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದರು. ಆಗ ಆ ದುಷ್ಕರ್ಮಿಗಳು ತನ್ನ ಇನೋವಾ ಗಾಡಿಯನ್ನು ನಿಲ್ಲಿಸದೇ ಗಾಡಿಯ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದ ರವಿಯನ್ನು ಹಾಗೆಯೇ ಎಳೆಯಿಸಿಕೊಂಡು ಮುಂದೆ ಹೋಗಿ ಬಲಕ್ಕೆ ತಿರುಗಿ ಬಿಎಲ್‌ಡಿಇ ಆಯುರ್ವೇದಿಕ ಕಾಲೇಜಿನ ಮುಂದೆ ಹಾಯ್ದು ಮನಗೂಳಿ ಅಗಸಿಯಿಂದ ಬಲಕ್ಕೆ ತಿರುಗಿ ಮನಗೂಳಿ ಕಡೆಗೆ ಹೋಗುವ ರಸ್ತೆಯ ಮೇಲೆ ಹೊರಟಾಗ ಇನೋವಾ ಗಾಡಿಯ ಕೆಳಗೆ ಸಿಕ್ಕಿಕೊಂಡಿದ್ದ ವಕೀಲ ರವಿ ಇವರ ಶವವು ಮನಗೂಳಿ ರಸ್ತೆಯ ಮೇಲೆ ಇರುವ ಸ್ಮಶಾಣದ ಹತ್ತಿರ ರಸ್ತೆಯ ಮೇಲೆ ಬಿದ್ದಿತ್ತು.

Join Our Telegram: https://t.me/dcgkannada

ಇದಕ್ಕೆ ಸಂಬಂಧಪಟ್ಟಂತೆ ಮೃತ ರವಿ ಈತನ ಸಹೋದರ ಪ್ರಕಾಶ ಮೇಲಿನಕೇರಿ ಕೊಟ್ಟ ದೂರಿನ ಮೇಲೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಗುನ್ನಾ ನಂ: 161/2024 ಕಲಂ 281, 106(1) ಬಿಎನ್‌ಎಸ್ ಹಾಗೂ 187 ಐಎಮ್‌ವಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಸದರಿ ಪ್ರಕರಣದ ತನಿಖಾ ಕಾಲದಲ್ಲಿ ಇದು ರಸ್ತೆ ಅಪಘಾತವಾಗಿರದೇ ಒಂದು ಕೊಲೆ ಪ್ರಕರಣವೆಂದು ಪತ್ತೆ ಹಚ್ಚಿ ಸದರಿ ಕೊಲೆಯ ಪ್ರಮುಖ ಸೂತ್ರಧಾರ ತುಳಸಿರಾಮ ಪಂಡಿತ ಹರಿಜನ ಎನ್ನುವವನನ್ನು ದಸ್ತಗಿರಿ ಮಾಡಿ ವಿಚಾರಣೆಗೆ ಒಳಪಡಿಸಿದ್ದು ಅವನು ತನಗೂ ಮತ್ತು ರವಿಗೂ 4-5 ತಿಂಗಳುಗಳ ಹಿಂದೆ ಜಗಳವಾಗಿ ರವಿಯು ತನ್ನ ಸಹೋದರರ ಜೊತೆ ಸೇರಿ ತನಗೆ ಹೊಡೆದು ಅವಮಾನ ಪಡಿಸಿದ್ದಲ್ಲದೇ ತನ್ನನ್ನು ಕೊಲೆ ಮಾಡುವುದಾಗಿ ಹೇಳುತ್ತಾ ತಿರುಗಾಡುತ್ತಿದ್ದನು.

ಇದನ್ನೂ‌ ಓದಿ: ಅಪರಿಚಿತ ವಾಹನ ಡಿಕ್ಕಿ.. ರೈತ ಸ್ಥಳದಲ್ಲಿಯೇ ದುರ್ಮರಣ..!

ಈಗ ಸುಮಾರು 20 ದಿನಗಳ ಹಿಂದೆ ರವಿ ಮೇಲಿನಕೇರಿ ಇವನು ತನ್ನ ಸಹೋದರರ ಜೊತೆ ಸೇರಿ ಅಲೆಕ್ಸ್ನನ್ನು ಮನೆಯಿಂದ ಕಿಡ್ನಾಪ್ ಮಾಡಿಕೊಂಡು ಒಯ್ದು ಹೊಡೆದು, ತುಳಸಿರಾಮನನ್ನು ನಿನ್ನನ್ನು ಕೊಲೆ ಮಾಡುತ್ತೇವೆ. ತುಳಸಿರಾಮನಿಗೆ ಹೇಳು ಎಂದು ಧಮ್ಮಾಯಿಸಿ ಕಳಿಸಿದ್ದನು. ಆದ್ದರಿಂದ ತಾನು ತನ್ನ ಸ್ನೇಹಿತರಾದ ಅಲೆಕ್ಸ್ ಗೊಲ್ಲರ, ಪ್ರಕಾಶ ಗೊಲ್ಲರ, ಷಣ್ಮುಖ ನಡುವಿನಕೇರಿ, ಜುಮನಾಳದ ಸದ್ದಾಮ್, ಮುರುಗೇಶ ಉಳ್ಳಾಗಡ್ಡಿ, ಅಮೀನ ಶೇಖ್ ಇವರ ಜೊತೆ ಸೇರಿ ರವಿ ಮೇಲಿನಕೇರಿ ಇವನನ್ನು ಕೊಲೆ ಮಾಡುವ ಸಂಚು ರೂಪಿಸಿ, ಆ.8 ರಂದು ಆನಂದ ಅತಾಲಟ್ಟಿ ಇವನು ಸದ್ದಾಮ್‌ನ ಹತ್ತಿರ ಒಂದು ಲಕ್ಷ ರೂ.ಗಳಿಗೆ ಒತ್ತೆ ಇಟ್ಟಿದ್ದ ಇನೋವಾ ಗಾಡಿಯಿಂದ ವಕೀಲ ತನ್ನ ಬಿಳಿ ಬಣ್ಣದ ಸ್ಕೂಟಿಯ ಮೇಲೆ ಹೊರಟಾಗ ಪಾಲಿಟೆಕ್ನಿಕ್ ಹಾಸ್ಟೇಲ್ ಮುಂದೆ ಹಿಂದಿನಿಂದ ಹಾಯಿಸಿ ಅವನಿಗೆ ಕೊಲೆ ಮಾಡಿರುತ್ತಾರೆ ಎಂದು ಒಪ್ಪಿಕೊಂಡಿರುತ್ತಾನೆ.

ಇತರೆ ಆರೋಪಿತರಾದ ಅಲೆಕ್ಸ್ ಗೊಲ್ಲರ, ಷಣ್ಮುಖ ನಡುವಿನಕೇರಿ, ಪ್ರಕಾಶ ಗೊಲ್ಲರ, ಮುರುಗೇಶ ಉಳ್ಳಾಗಡ್ಡಿ ಇವರನ್ನು ಸಹ ಬಂಧಿಸಿ ತನಿಖೆ ಕೈಗೊಳ್ಳಲಾಗಿದೆ. ಕೊಲೆ ಮಾಡುವ ಸಮಯದಲ್ಲಿ ಆ ಗಾಡಿಯಲ್ಲಿ ಅಲೆಕ್ಸ್, ಷಣ್ಮುಖ ಹಾಗೂ ಸದ್ದಾಮ್ ಇದ್ದು ಅಲೆಕ್ಸ್ ಇವನು ಗಾಡಿಯನ್ನು ಓಡಿಸುತ್ತಿದ್ದನು ಎಂದು ತನಿಖೆಯಲ್ಲಿ ದೃಢಪಟ್ಟಿರುತ್ತದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು