ವಕೀಲ ಮೇಲಿನಕೇರಿ ಮರ್ಡರ್ ಕೇಸ್.. ನಾಲ್ಕೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿಪಡೆ..!

ವಕೀಲ ಮೇಲಿನಕೇರಿ ಮರ್ಡರ್ ಕೇಸ್.. ನಾಲ್ಕೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿಪಡೆ..!

ವಿಜಯಪುರ : ಆ.8 ರಂದು ವಿಜಯಪುರದಲ್ಲಿ ವಕೀಲ ರವಿ ಮೇಲಿನಕೇರಿ (Ravi Melinakeri) ಅವರನ್ನು ಸ್ಕೂಟಿಗೆ ಕಾರು ಡಿಕ್ಕಿ ಹೊಡೆಸಿ ಕೊಲೆಗೈದ ಘಟನೆಗೆ ಸಂಬಂಧಿಸಿದ ವಿಜಯಪುರ ಪೊಲೀಸರು ಆರೋಪಿಗಳನ್ನು ನಾಲ್ಕೇ ದಿನದಲ್ಲಿ ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.

ಘಟನೆ ವಿವರ : ಆ.8 ರಂದು ವಕೀಲ ರವಿ ಮೇಲಿನಕೇರಿ ಅವರು, ಬಾಗಲಕೋಟ ಕ್ರಾಸ್ ಕಡೆಗೆ ಹೋಗುತ್ತಿರುವಾಗ ಪಾಲಿಟೆಕ್ನಿಕ್ ಹಾಸ್ಟೆಲ್ ಹತ್ತಿರ ಯಾರೋ ದುಷ್ಕರ್ಮಿಗಳು ಒಂದು ನಂಬರ್ ಪ್ಲೇಟ್ ಇಲ್ಲದ ಇನೋವಾ ಗಾಡಿಯಲ್ಲಿ ಬಂದು ವಕೀಲ ರವಿ ಇವರಿಗೆ ಹಿಂದಿನಿಂದ ಡಿಕ್ಕಿ ಹೊಡೆಸಿದ್ದು, ಆಗ ರವಿ (Ravi Melinakeri) ಇವರು ಸದರಿ ಇನೋವಾ ಗಾಡಿಯ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದರು. ಆಗ ಆ ದುಷ್ಕರ್ಮಿಗಳು ತನ್ನ ಇನೋವಾ ಗಾಡಿಯನ್ನು ನಿಲ್ಲಿಸದೇ ಗಾಡಿಯ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದ ರವಿಯನ್ನು ಹಾಗೆಯೇ ಎಳೆಯಿಸಿಕೊಂಡು ಮುಂದೆ ಹೋಗಿ ಬಲಕ್ಕೆ ತಿರುಗಿ ಬಿಎಲ್‌ಡಿಇ ಆಯುರ್ವೇದಿಕ ಕಾಲೇಜಿನ ಮುಂದೆ ಹಾಯ್ದು ಮನಗೂಳಿ ಅಗಸಿಯಿಂದ ಬಲಕ್ಕೆ ತಿರುಗಿ ಮನಗೂಳಿ ಕಡೆಗೆ ಹೋಗುವ ರಸ್ತೆಯ ಮೇಲೆ ಹೊರಟಾಗ ಇನೋವಾ ಗಾಡಿಯ ಕೆಳಗೆ ಸಿಕ್ಕಿಕೊಂಡಿದ್ದ ವಕೀಲ ರವಿ ಇವರ ಶವವು ಮನಗೂಳಿ ರಸ್ತೆಯ ಮೇಲೆ ಇರುವ ಸ್ಮಶಾಣದ ಹತ್ತಿರ ರಸ್ತೆಯ ಮೇಲೆ ಬಿದ್ದಿತ್ತು.

Join Our Telegram: https://t.me/dcgkannada

ಇದಕ್ಕೆ ಸಂಬಂಧಪಟ್ಟಂತೆ ಮೃತ ರವಿ ಈತನ ಸಹೋದರ ಪ್ರಕಾಶ ಮೇಲಿನಕೇರಿ ಕೊಟ್ಟ ದೂರಿನ ಮೇಲೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಗುನ್ನಾ ನಂ: 161/2024 ಕಲಂ 281, 106(1) ಬಿಎನ್‌ಎಸ್ ಹಾಗೂ 187 ಐಎಮ್‌ವಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಸದರಿ ಪ್ರಕರಣದ ತನಿಖಾ ಕಾಲದಲ್ಲಿ ಇದು ರಸ್ತೆ ಅಪಘಾತವಾಗಿರದೇ ಒಂದು ಕೊಲೆ ಪ್ರಕರಣವೆಂದು ಪತ್ತೆ ಹಚ್ಚಿ ಸದರಿ ಕೊಲೆಯ ಪ್ರಮುಖ ಸೂತ್ರಧಾರ ತುಳಸಿರಾಮ ಪಂಡಿತ ಹರಿಜನ ಎನ್ನುವವನನ್ನು ದಸ್ತಗಿರಿ ಮಾಡಿ ವಿಚಾರಣೆಗೆ ಒಳಪಡಿಸಿದ್ದು ಅವನು ತನಗೂ ಮತ್ತು ರವಿಗೂ 4-5 ತಿಂಗಳುಗಳ ಹಿಂದೆ ಜಗಳವಾಗಿ ರವಿಯು ತನ್ನ ಸಹೋದರರ ಜೊತೆ ಸೇರಿ ತನಗೆ ಹೊಡೆದು ಅವಮಾನ ಪಡಿಸಿದ್ದಲ್ಲದೇ ತನ್ನನ್ನು ಕೊಲೆ ಮಾಡುವುದಾಗಿ ಹೇಳುತ್ತಾ ತಿರುಗಾಡುತ್ತಿದ್ದನು.

ಇದನ್ನೂ‌ ಓದಿ: ಅಪರಿಚಿತ ವಾಹನ ಡಿಕ್ಕಿ.. ರೈತ ಸ್ಥಳದಲ್ಲಿಯೇ ದುರ್ಮರಣ..!

ಈಗ ಸುಮಾರು 20 ದಿನಗಳ ಹಿಂದೆ ರವಿ ಮೇಲಿನಕೇರಿ ಇವನು ತನ್ನ ಸಹೋದರರ ಜೊತೆ ಸೇರಿ ಅಲೆಕ್ಸ್ನನ್ನು ಮನೆಯಿಂದ ಕಿಡ್ನಾಪ್ ಮಾಡಿಕೊಂಡು ಒಯ್ದು ಹೊಡೆದು, ತುಳಸಿರಾಮನನ್ನು ನಿನ್ನನ್ನು ಕೊಲೆ ಮಾಡುತ್ತೇವೆ. ತುಳಸಿರಾಮನಿಗೆ ಹೇಳು ಎಂದು ಧಮ್ಮಾಯಿಸಿ ಕಳಿಸಿದ್ದನು. ಆದ್ದರಿಂದ ತಾನು ತನ್ನ ಸ್ನೇಹಿತರಾದ ಅಲೆಕ್ಸ್ ಗೊಲ್ಲರ, ಪ್ರಕಾಶ ಗೊಲ್ಲರ, ಷಣ್ಮುಖ ನಡುವಿನಕೇರಿ, ಜುಮನಾಳದ ಸದ್ದಾಮ್, ಮುರುಗೇಶ ಉಳ್ಳಾಗಡ್ಡಿ, ಅಮೀನ ಶೇಖ್ ಇವರ ಜೊತೆ ಸೇರಿ ರವಿ ಮೇಲಿನಕೇರಿ ಇವನನ್ನು ಕೊಲೆ ಮಾಡುವ ಸಂಚು ರೂಪಿಸಿ, ಆ.8 ರಂದು ಆನಂದ ಅತಾಲಟ್ಟಿ ಇವನು ಸದ್ದಾಮ್‌ನ ಹತ್ತಿರ ಒಂದು ಲಕ್ಷ ರೂ.ಗಳಿಗೆ ಒತ್ತೆ ಇಟ್ಟಿದ್ದ ಇನೋವಾ ಗಾಡಿಯಿಂದ ವಕೀಲ ತನ್ನ ಬಿಳಿ ಬಣ್ಣದ ಸ್ಕೂಟಿಯ ಮೇಲೆ ಹೊರಟಾಗ ಪಾಲಿಟೆಕ್ನಿಕ್ ಹಾಸ್ಟೇಲ್ ಮುಂದೆ ಹಿಂದಿನಿಂದ ಹಾಯಿಸಿ ಅವನಿಗೆ ಕೊಲೆ ಮಾಡಿರುತ್ತಾರೆ ಎಂದು ಒಪ್ಪಿಕೊಂಡಿರುತ್ತಾನೆ.

ಇತರೆ ಆರೋಪಿತರಾದ ಅಲೆಕ್ಸ್ ಗೊಲ್ಲರ, ಷಣ್ಮುಖ ನಡುವಿನಕೇರಿ, ಪ್ರಕಾಶ ಗೊಲ್ಲರ, ಮುರುಗೇಶ ಉಳ್ಳಾಗಡ್ಡಿ ಇವರನ್ನು ಸಹ ಬಂಧಿಸಿ ತನಿಖೆ ಕೈಗೊಳ್ಳಲಾಗಿದೆ. ಕೊಲೆ ಮಾಡುವ ಸಮಯದಲ್ಲಿ ಆ ಗಾಡಿಯಲ್ಲಿ ಅಲೆಕ್ಸ್, ಷಣ್ಮುಖ ಹಾಗೂ ಸದ್ದಾಮ್ ಇದ್ದು ಅಲೆಕ್ಸ್ ಇವನು ಗಾಡಿಯನ್ನು ಓಡಿಸುತ್ತಿದ್ದನು ಎಂದು ತನಿಖೆಯಲ್ಲಿ ದೃಢಪಟ್ಟಿರುತ್ತದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ