ವಕೀಲ ಮೇಲಿನಕೇರಿ ಮರ್ಡರ್ ಕೇಸ್.. ನಾಲ್ಕೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿಪಡೆ..!

ವಕೀಲ ಮೇಲಿನಕೇರಿ ಮರ್ಡರ್ ಕೇಸ್.. ನಾಲ್ಕೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿಪಡೆ..!

ವಿಜಯಪುರ : ಆ.8 ರಂದು ವಿಜಯಪುರದಲ್ಲಿ ವಕೀಲ ರವಿ ಮೇಲಿನಕೇರಿ (Ravi Melinakeri) ಅವರನ್ನು ಸ್ಕೂಟಿಗೆ ಕಾರು ಡಿಕ್ಕಿ ಹೊಡೆಸಿ ಕೊಲೆಗೈದ ಘಟನೆಗೆ ಸಂಬಂಧಿಸಿದ ವಿಜಯಪುರ ಪೊಲೀಸರು ಆರೋಪಿಗಳನ್ನು ನಾಲ್ಕೇ ದಿನದಲ್ಲಿ ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.

ಘಟನೆ ವಿವರ : ಆ.8 ರಂದು ವಕೀಲ ರವಿ ಮೇಲಿನಕೇರಿ ಅವರು, ಬಾಗಲಕೋಟ ಕ್ರಾಸ್ ಕಡೆಗೆ ಹೋಗುತ್ತಿರುವಾಗ ಪಾಲಿಟೆಕ್ನಿಕ್ ಹಾಸ್ಟೆಲ್ ಹತ್ತಿರ ಯಾರೋ ದುಷ್ಕರ್ಮಿಗಳು ಒಂದು ನಂಬರ್ ಪ್ಲೇಟ್ ಇಲ್ಲದ ಇನೋವಾ ಗಾಡಿಯಲ್ಲಿ ಬಂದು ವಕೀಲ ರವಿ ಇವರಿಗೆ ಹಿಂದಿನಿಂದ ಡಿಕ್ಕಿ ಹೊಡೆಸಿದ್ದು, ಆಗ ರವಿ (Ravi Melinakeri) ಇವರು ಸದರಿ ಇನೋವಾ ಗಾಡಿಯ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದರು. ಆಗ ಆ ದುಷ್ಕರ್ಮಿಗಳು ತನ್ನ ಇನೋವಾ ಗಾಡಿಯನ್ನು ನಿಲ್ಲಿಸದೇ ಗಾಡಿಯ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದ ರವಿಯನ್ನು ಹಾಗೆಯೇ ಎಳೆಯಿಸಿಕೊಂಡು ಮುಂದೆ ಹೋಗಿ ಬಲಕ್ಕೆ ತಿರುಗಿ ಬಿಎಲ್‌ಡಿಇ ಆಯುರ್ವೇದಿಕ ಕಾಲೇಜಿನ ಮುಂದೆ ಹಾಯ್ದು ಮನಗೂಳಿ ಅಗಸಿಯಿಂದ ಬಲಕ್ಕೆ ತಿರುಗಿ ಮನಗೂಳಿ ಕಡೆಗೆ ಹೋಗುವ ರಸ್ತೆಯ ಮೇಲೆ ಹೊರಟಾಗ ಇನೋವಾ ಗಾಡಿಯ ಕೆಳಗೆ ಸಿಕ್ಕಿಕೊಂಡಿದ್ದ ವಕೀಲ ರವಿ ಇವರ ಶವವು ಮನಗೂಳಿ ರಸ್ತೆಯ ಮೇಲೆ ಇರುವ ಸ್ಮಶಾಣದ ಹತ್ತಿರ ರಸ್ತೆಯ ಮೇಲೆ ಬಿದ್ದಿತ್ತು.

Join Our Telegram: https://t.me/dcgkannada

ಇದಕ್ಕೆ ಸಂಬಂಧಪಟ್ಟಂತೆ ಮೃತ ರವಿ ಈತನ ಸಹೋದರ ಪ್ರಕಾಶ ಮೇಲಿನಕೇರಿ ಕೊಟ್ಟ ದೂರಿನ ಮೇಲೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಗುನ್ನಾ ನಂ: 161/2024 ಕಲಂ 281, 106(1) ಬಿಎನ್‌ಎಸ್ ಹಾಗೂ 187 ಐಎಮ್‌ವಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಸದರಿ ಪ್ರಕರಣದ ತನಿಖಾ ಕಾಲದಲ್ಲಿ ಇದು ರಸ್ತೆ ಅಪಘಾತವಾಗಿರದೇ ಒಂದು ಕೊಲೆ ಪ್ರಕರಣವೆಂದು ಪತ್ತೆ ಹಚ್ಚಿ ಸದರಿ ಕೊಲೆಯ ಪ್ರಮುಖ ಸೂತ್ರಧಾರ ತುಳಸಿರಾಮ ಪಂಡಿತ ಹರಿಜನ ಎನ್ನುವವನನ್ನು ದಸ್ತಗಿರಿ ಮಾಡಿ ವಿಚಾರಣೆಗೆ ಒಳಪಡಿಸಿದ್ದು ಅವನು ತನಗೂ ಮತ್ತು ರವಿಗೂ 4-5 ತಿಂಗಳುಗಳ ಹಿಂದೆ ಜಗಳವಾಗಿ ರವಿಯು ತನ್ನ ಸಹೋದರರ ಜೊತೆ ಸೇರಿ ತನಗೆ ಹೊಡೆದು ಅವಮಾನ ಪಡಿಸಿದ್ದಲ್ಲದೇ ತನ್ನನ್ನು ಕೊಲೆ ಮಾಡುವುದಾಗಿ ಹೇಳುತ್ತಾ ತಿರುಗಾಡುತ್ತಿದ್ದನು.

ಇದನ್ನೂ‌ ಓದಿ: ಅಪರಿಚಿತ ವಾಹನ ಡಿಕ್ಕಿ.. ರೈತ ಸ್ಥಳದಲ್ಲಿಯೇ ದುರ್ಮರಣ..!

ಈಗ ಸುಮಾರು 20 ದಿನಗಳ ಹಿಂದೆ ರವಿ ಮೇಲಿನಕೇರಿ ಇವನು ತನ್ನ ಸಹೋದರರ ಜೊತೆ ಸೇರಿ ಅಲೆಕ್ಸ್ನನ್ನು ಮನೆಯಿಂದ ಕಿಡ್ನಾಪ್ ಮಾಡಿಕೊಂಡು ಒಯ್ದು ಹೊಡೆದು, ತುಳಸಿರಾಮನನ್ನು ನಿನ್ನನ್ನು ಕೊಲೆ ಮಾಡುತ್ತೇವೆ. ತುಳಸಿರಾಮನಿಗೆ ಹೇಳು ಎಂದು ಧಮ್ಮಾಯಿಸಿ ಕಳಿಸಿದ್ದನು. ಆದ್ದರಿಂದ ತಾನು ತನ್ನ ಸ್ನೇಹಿತರಾದ ಅಲೆಕ್ಸ್ ಗೊಲ್ಲರ, ಪ್ರಕಾಶ ಗೊಲ್ಲರ, ಷಣ್ಮುಖ ನಡುವಿನಕೇರಿ, ಜುಮನಾಳದ ಸದ್ದಾಮ್, ಮುರುಗೇಶ ಉಳ್ಳಾಗಡ್ಡಿ, ಅಮೀನ ಶೇಖ್ ಇವರ ಜೊತೆ ಸೇರಿ ರವಿ ಮೇಲಿನಕೇರಿ ಇವನನ್ನು ಕೊಲೆ ಮಾಡುವ ಸಂಚು ರೂಪಿಸಿ, ಆ.8 ರಂದು ಆನಂದ ಅತಾಲಟ್ಟಿ ಇವನು ಸದ್ದಾಮ್‌ನ ಹತ್ತಿರ ಒಂದು ಲಕ್ಷ ರೂ.ಗಳಿಗೆ ಒತ್ತೆ ಇಟ್ಟಿದ್ದ ಇನೋವಾ ಗಾಡಿಯಿಂದ ವಕೀಲ ತನ್ನ ಬಿಳಿ ಬಣ್ಣದ ಸ್ಕೂಟಿಯ ಮೇಲೆ ಹೊರಟಾಗ ಪಾಲಿಟೆಕ್ನಿಕ್ ಹಾಸ್ಟೇಲ್ ಮುಂದೆ ಹಿಂದಿನಿಂದ ಹಾಯಿಸಿ ಅವನಿಗೆ ಕೊಲೆ ಮಾಡಿರುತ್ತಾರೆ ಎಂದು ಒಪ್ಪಿಕೊಂಡಿರುತ್ತಾನೆ.

ಇತರೆ ಆರೋಪಿತರಾದ ಅಲೆಕ್ಸ್ ಗೊಲ್ಲರ, ಷಣ್ಮುಖ ನಡುವಿನಕೇರಿ, ಪ್ರಕಾಶ ಗೊಲ್ಲರ, ಮುರುಗೇಶ ಉಳ್ಳಾಗಡ್ಡಿ ಇವರನ್ನು ಸಹ ಬಂಧಿಸಿ ತನಿಖೆ ಕೈಗೊಳ್ಳಲಾಗಿದೆ. ಕೊಲೆ ಮಾಡುವ ಸಮಯದಲ್ಲಿ ಆ ಗಾಡಿಯಲ್ಲಿ ಅಲೆಕ್ಸ್, ಷಣ್ಮುಖ ಹಾಗೂ ಸದ್ದಾಮ್ ಇದ್ದು ಅಲೆಕ್ಸ್ ಇವನು ಗಾಡಿಯನ್ನು ಓಡಿಸುತ್ತಿದ್ದನು ಎಂದು ತನಿಖೆಯಲ್ಲಿ ದೃಢಪಟ್ಟಿರುತ್ತದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ