ವಕೀಲ ಮೇಲಿನಕೇರಿ ಮರ್ಡರ್ ಕೇಸ್.. ನಾಲ್ಕೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿಪಡೆ..!

ವಕೀಲ ಮೇಲಿನಕೇರಿ ಮರ್ಡರ್ ಕೇಸ್.. ನಾಲ್ಕೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿಪಡೆ..!

ವಿಜಯಪುರ : ಆ.8 ರಂದು ವಿಜಯಪುರದಲ್ಲಿ ವಕೀಲ ರವಿ ಮೇಲಿನಕೇರಿ (Ravi Melinakeri) ಅವರನ್ನು ಸ್ಕೂಟಿಗೆ ಕಾರು ಡಿಕ್ಕಿ ಹೊಡೆಸಿ ಕೊಲೆಗೈದ ಘಟನೆಗೆ ಸಂಬಂಧಿಸಿದ ವಿಜಯಪುರ ಪೊಲೀಸರು ಆರೋಪಿಗಳನ್ನು ನಾಲ್ಕೇ ದಿನದಲ್ಲಿ ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.

ಘಟನೆ ವಿವರ : ಆ.8 ರಂದು ವಕೀಲ ರವಿ ಮೇಲಿನಕೇರಿ ಅವರು, ಬಾಗಲಕೋಟ ಕ್ರಾಸ್ ಕಡೆಗೆ ಹೋಗುತ್ತಿರುವಾಗ ಪಾಲಿಟೆಕ್ನಿಕ್ ಹಾಸ್ಟೆಲ್ ಹತ್ತಿರ ಯಾರೋ ದುಷ್ಕರ್ಮಿಗಳು ಒಂದು ನಂಬರ್ ಪ್ಲೇಟ್ ಇಲ್ಲದ ಇನೋವಾ ಗಾಡಿಯಲ್ಲಿ ಬಂದು ವಕೀಲ ರವಿ ಇವರಿಗೆ ಹಿಂದಿನಿಂದ ಡಿಕ್ಕಿ ಹೊಡೆಸಿದ್ದು, ಆಗ ರವಿ (Ravi Melinakeri) ಇವರು ಸದರಿ ಇನೋವಾ ಗಾಡಿಯ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದರು. ಆಗ ಆ ದುಷ್ಕರ್ಮಿಗಳು ತನ್ನ ಇನೋವಾ ಗಾಡಿಯನ್ನು ನಿಲ್ಲಿಸದೇ ಗಾಡಿಯ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದ ರವಿಯನ್ನು ಹಾಗೆಯೇ ಎಳೆಯಿಸಿಕೊಂಡು ಮುಂದೆ ಹೋಗಿ ಬಲಕ್ಕೆ ತಿರುಗಿ ಬಿಎಲ್‌ಡಿಇ ಆಯುರ್ವೇದಿಕ ಕಾಲೇಜಿನ ಮುಂದೆ ಹಾಯ್ದು ಮನಗೂಳಿ ಅಗಸಿಯಿಂದ ಬಲಕ್ಕೆ ತಿರುಗಿ ಮನಗೂಳಿ ಕಡೆಗೆ ಹೋಗುವ ರಸ್ತೆಯ ಮೇಲೆ ಹೊರಟಾಗ ಇನೋವಾ ಗಾಡಿಯ ಕೆಳಗೆ ಸಿಕ್ಕಿಕೊಂಡಿದ್ದ ವಕೀಲ ರವಿ ಇವರ ಶವವು ಮನಗೂಳಿ ರಸ್ತೆಯ ಮೇಲೆ ಇರುವ ಸ್ಮಶಾಣದ ಹತ್ತಿರ ರಸ್ತೆಯ ಮೇಲೆ ಬಿದ್ದಿತ್ತು.

Join Our Telegram: https://t.me/dcgkannada

ಇದಕ್ಕೆ ಸಂಬಂಧಪಟ್ಟಂತೆ ಮೃತ ರವಿ ಈತನ ಸಹೋದರ ಪ್ರಕಾಶ ಮೇಲಿನಕೇರಿ ಕೊಟ್ಟ ದೂರಿನ ಮೇಲೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಗುನ್ನಾ ನಂ: 161/2024 ಕಲಂ 281, 106(1) ಬಿಎನ್‌ಎಸ್ ಹಾಗೂ 187 ಐಎಮ್‌ವಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಸದರಿ ಪ್ರಕರಣದ ತನಿಖಾ ಕಾಲದಲ್ಲಿ ಇದು ರಸ್ತೆ ಅಪಘಾತವಾಗಿರದೇ ಒಂದು ಕೊಲೆ ಪ್ರಕರಣವೆಂದು ಪತ್ತೆ ಹಚ್ಚಿ ಸದರಿ ಕೊಲೆಯ ಪ್ರಮುಖ ಸೂತ್ರಧಾರ ತುಳಸಿರಾಮ ಪಂಡಿತ ಹರಿಜನ ಎನ್ನುವವನನ್ನು ದಸ್ತಗಿರಿ ಮಾಡಿ ವಿಚಾರಣೆಗೆ ಒಳಪಡಿಸಿದ್ದು ಅವನು ತನಗೂ ಮತ್ತು ರವಿಗೂ 4-5 ತಿಂಗಳುಗಳ ಹಿಂದೆ ಜಗಳವಾಗಿ ರವಿಯು ತನ್ನ ಸಹೋದರರ ಜೊತೆ ಸೇರಿ ತನಗೆ ಹೊಡೆದು ಅವಮಾನ ಪಡಿಸಿದ್ದಲ್ಲದೇ ತನ್ನನ್ನು ಕೊಲೆ ಮಾಡುವುದಾಗಿ ಹೇಳುತ್ತಾ ತಿರುಗಾಡುತ್ತಿದ್ದನು.

ಇದನ್ನೂ‌ ಓದಿ: ಅಪರಿಚಿತ ವಾಹನ ಡಿಕ್ಕಿ.. ರೈತ ಸ್ಥಳದಲ್ಲಿಯೇ ದುರ್ಮರಣ..!

ಈಗ ಸುಮಾರು 20 ದಿನಗಳ ಹಿಂದೆ ರವಿ ಮೇಲಿನಕೇರಿ ಇವನು ತನ್ನ ಸಹೋದರರ ಜೊತೆ ಸೇರಿ ಅಲೆಕ್ಸ್ನನ್ನು ಮನೆಯಿಂದ ಕಿಡ್ನಾಪ್ ಮಾಡಿಕೊಂಡು ಒಯ್ದು ಹೊಡೆದು, ತುಳಸಿರಾಮನನ್ನು ನಿನ್ನನ್ನು ಕೊಲೆ ಮಾಡುತ್ತೇವೆ. ತುಳಸಿರಾಮನಿಗೆ ಹೇಳು ಎಂದು ಧಮ್ಮಾಯಿಸಿ ಕಳಿಸಿದ್ದನು. ಆದ್ದರಿಂದ ತಾನು ತನ್ನ ಸ್ನೇಹಿತರಾದ ಅಲೆಕ್ಸ್ ಗೊಲ್ಲರ, ಪ್ರಕಾಶ ಗೊಲ್ಲರ, ಷಣ್ಮುಖ ನಡುವಿನಕೇರಿ, ಜುಮನಾಳದ ಸದ್ದಾಮ್, ಮುರುಗೇಶ ಉಳ್ಳಾಗಡ್ಡಿ, ಅಮೀನ ಶೇಖ್ ಇವರ ಜೊತೆ ಸೇರಿ ರವಿ ಮೇಲಿನಕೇರಿ ಇವನನ್ನು ಕೊಲೆ ಮಾಡುವ ಸಂಚು ರೂಪಿಸಿ, ಆ.8 ರಂದು ಆನಂದ ಅತಾಲಟ್ಟಿ ಇವನು ಸದ್ದಾಮ್‌ನ ಹತ್ತಿರ ಒಂದು ಲಕ್ಷ ರೂ.ಗಳಿಗೆ ಒತ್ತೆ ಇಟ್ಟಿದ್ದ ಇನೋವಾ ಗಾಡಿಯಿಂದ ವಕೀಲ ತನ್ನ ಬಿಳಿ ಬಣ್ಣದ ಸ್ಕೂಟಿಯ ಮೇಲೆ ಹೊರಟಾಗ ಪಾಲಿಟೆಕ್ನಿಕ್ ಹಾಸ್ಟೇಲ್ ಮುಂದೆ ಹಿಂದಿನಿಂದ ಹಾಯಿಸಿ ಅವನಿಗೆ ಕೊಲೆ ಮಾಡಿರುತ್ತಾರೆ ಎಂದು ಒಪ್ಪಿಕೊಂಡಿರುತ್ತಾನೆ.

ಇತರೆ ಆರೋಪಿತರಾದ ಅಲೆಕ್ಸ್ ಗೊಲ್ಲರ, ಷಣ್ಮುಖ ನಡುವಿನಕೇರಿ, ಪ್ರಕಾಶ ಗೊಲ್ಲರ, ಮುರುಗೇಶ ಉಳ್ಳಾಗಡ್ಡಿ ಇವರನ್ನು ಸಹ ಬಂಧಿಸಿ ತನಿಖೆ ಕೈಗೊಳ್ಳಲಾಗಿದೆ. ಕೊಲೆ ಮಾಡುವ ಸಮಯದಲ್ಲಿ ಆ ಗಾಡಿಯಲ್ಲಿ ಅಲೆಕ್ಸ್, ಷಣ್ಮುಖ ಹಾಗೂ ಸದ್ದಾಮ್ ಇದ್ದು ಅಲೆಕ್ಸ್ ಇವನು ಗಾಡಿಯನ್ನು ಓಡಿಸುತ್ತಿದ್ದನು ಎಂದು ತನಿಖೆಯಲ್ಲಿ ದೃಢಪಟ್ಟಿರುತ್ತದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ