ವಕೀಲ ಮೇಲಿನಕೇರಿ ಮರ್ಡರ್ ಕೇಸ್.. ನಾಲ್ಕೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿಪಡೆ..!

ವಕೀಲ ಮೇಲಿನಕೇರಿ ಮರ್ಡರ್ ಕೇಸ್.. ನಾಲ್ಕೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿಪಡೆ..!

ವಿಜಯಪುರ : ಆ.8 ರಂದು ವಿಜಯಪುರದಲ್ಲಿ ವಕೀಲ ರವಿ ಮೇಲಿನಕೇರಿ (Ravi Melinakeri) ಅವರನ್ನು ಸ್ಕೂಟಿಗೆ ಕಾರು ಡಿಕ್ಕಿ ಹೊಡೆಸಿ ಕೊಲೆಗೈದ ಘಟನೆಗೆ ಸಂಬಂಧಿಸಿದ ವಿಜಯಪುರ ಪೊಲೀಸರು ಆರೋಪಿಗಳನ್ನು ನಾಲ್ಕೇ ದಿನದಲ್ಲಿ ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.

ಘಟನೆ ವಿವರ : ಆ.8 ರಂದು ವಕೀಲ ರವಿ ಮೇಲಿನಕೇರಿ ಅವರು, ಬಾಗಲಕೋಟ ಕ್ರಾಸ್ ಕಡೆಗೆ ಹೋಗುತ್ತಿರುವಾಗ ಪಾಲಿಟೆಕ್ನಿಕ್ ಹಾಸ್ಟೆಲ್ ಹತ್ತಿರ ಯಾರೋ ದುಷ್ಕರ್ಮಿಗಳು ಒಂದು ನಂಬರ್ ಪ್ಲೇಟ್ ಇಲ್ಲದ ಇನೋವಾ ಗಾಡಿಯಲ್ಲಿ ಬಂದು ವಕೀಲ ರವಿ ಇವರಿಗೆ ಹಿಂದಿನಿಂದ ಡಿಕ್ಕಿ ಹೊಡೆಸಿದ್ದು, ಆಗ ರವಿ (Ravi Melinakeri) ಇವರು ಸದರಿ ಇನೋವಾ ಗಾಡಿಯ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದರು. ಆಗ ಆ ದುಷ್ಕರ್ಮಿಗಳು ತನ್ನ ಇನೋವಾ ಗಾಡಿಯನ್ನು ನಿಲ್ಲಿಸದೇ ಗಾಡಿಯ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದ ರವಿಯನ್ನು ಹಾಗೆಯೇ ಎಳೆಯಿಸಿಕೊಂಡು ಮುಂದೆ ಹೋಗಿ ಬಲಕ್ಕೆ ತಿರುಗಿ ಬಿಎಲ್‌ಡಿಇ ಆಯುರ್ವೇದಿಕ ಕಾಲೇಜಿನ ಮುಂದೆ ಹಾಯ್ದು ಮನಗೂಳಿ ಅಗಸಿಯಿಂದ ಬಲಕ್ಕೆ ತಿರುಗಿ ಮನಗೂಳಿ ಕಡೆಗೆ ಹೋಗುವ ರಸ್ತೆಯ ಮೇಲೆ ಹೊರಟಾಗ ಇನೋವಾ ಗಾಡಿಯ ಕೆಳಗೆ ಸಿಕ್ಕಿಕೊಂಡಿದ್ದ ವಕೀಲ ರವಿ ಇವರ ಶವವು ಮನಗೂಳಿ ರಸ್ತೆಯ ಮೇಲೆ ಇರುವ ಸ್ಮಶಾಣದ ಹತ್ತಿರ ರಸ್ತೆಯ ಮೇಲೆ ಬಿದ್ದಿತ್ತು.

Join Our Telegram: https://t.me/dcgkannada

ಇದಕ್ಕೆ ಸಂಬಂಧಪಟ್ಟಂತೆ ಮೃತ ರವಿ ಈತನ ಸಹೋದರ ಪ್ರಕಾಶ ಮೇಲಿನಕೇರಿ ಕೊಟ್ಟ ದೂರಿನ ಮೇಲೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಗುನ್ನಾ ನಂ: 161/2024 ಕಲಂ 281, 106(1) ಬಿಎನ್‌ಎಸ್ ಹಾಗೂ 187 ಐಎಮ್‌ವಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಸದರಿ ಪ್ರಕರಣದ ತನಿಖಾ ಕಾಲದಲ್ಲಿ ಇದು ರಸ್ತೆ ಅಪಘಾತವಾಗಿರದೇ ಒಂದು ಕೊಲೆ ಪ್ರಕರಣವೆಂದು ಪತ್ತೆ ಹಚ್ಚಿ ಸದರಿ ಕೊಲೆಯ ಪ್ರಮುಖ ಸೂತ್ರಧಾರ ತುಳಸಿರಾಮ ಪಂಡಿತ ಹರಿಜನ ಎನ್ನುವವನನ್ನು ದಸ್ತಗಿರಿ ಮಾಡಿ ವಿಚಾರಣೆಗೆ ಒಳಪಡಿಸಿದ್ದು ಅವನು ತನಗೂ ಮತ್ತು ರವಿಗೂ 4-5 ತಿಂಗಳುಗಳ ಹಿಂದೆ ಜಗಳವಾಗಿ ರವಿಯು ತನ್ನ ಸಹೋದರರ ಜೊತೆ ಸೇರಿ ತನಗೆ ಹೊಡೆದು ಅವಮಾನ ಪಡಿಸಿದ್ದಲ್ಲದೇ ತನ್ನನ್ನು ಕೊಲೆ ಮಾಡುವುದಾಗಿ ಹೇಳುತ್ತಾ ತಿರುಗಾಡುತ್ತಿದ್ದನು.

ಇದನ್ನೂ‌ ಓದಿ: ಅಪರಿಚಿತ ವಾಹನ ಡಿಕ್ಕಿ.. ರೈತ ಸ್ಥಳದಲ್ಲಿಯೇ ದುರ್ಮರಣ..!

ಈಗ ಸುಮಾರು 20 ದಿನಗಳ ಹಿಂದೆ ರವಿ ಮೇಲಿನಕೇರಿ ಇವನು ತನ್ನ ಸಹೋದರರ ಜೊತೆ ಸೇರಿ ಅಲೆಕ್ಸ್ನನ್ನು ಮನೆಯಿಂದ ಕಿಡ್ನಾಪ್ ಮಾಡಿಕೊಂಡು ಒಯ್ದು ಹೊಡೆದು, ತುಳಸಿರಾಮನನ್ನು ನಿನ್ನನ್ನು ಕೊಲೆ ಮಾಡುತ್ತೇವೆ. ತುಳಸಿರಾಮನಿಗೆ ಹೇಳು ಎಂದು ಧಮ್ಮಾಯಿಸಿ ಕಳಿಸಿದ್ದನು. ಆದ್ದರಿಂದ ತಾನು ತನ್ನ ಸ್ನೇಹಿತರಾದ ಅಲೆಕ್ಸ್ ಗೊಲ್ಲರ, ಪ್ರಕಾಶ ಗೊಲ್ಲರ, ಷಣ್ಮುಖ ನಡುವಿನಕೇರಿ, ಜುಮನಾಳದ ಸದ್ದಾಮ್, ಮುರುಗೇಶ ಉಳ್ಳಾಗಡ್ಡಿ, ಅಮೀನ ಶೇಖ್ ಇವರ ಜೊತೆ ಸೇರಿ ರವಿ ಮೇಲಿನಕೇರಿ ಇವನನ್ನು ಕೊಲೆ ಮಾಡುವ ಸಂಚು ರೂಪಿಸಿ, ಆ.8 ರಂದು ಆನಂದ ಅತಾಲಟ್ಟಿ ಇವನು ಸದ್ದಾಮ್‌ನ ಹತ್ತಿರ ಒಂದು ಲಕ್ಷ ರೂ.ಗಳಿಗೆ ಒತ್ತೆ ಇಟ್ಟಿದ್ದ ಇನೋವಾ ಗಾಡಿಯಿಂದ ವಕೀಲ ತನ್ನ ಬಿಳಿ ಬಣ್ಣದ ಸ್ಕೂಟಿಯ ಮೇಲೆ ಹೊರಟಾಗ ಪಾಲಿಟೆಕ್ನಿಕ್ ಹಾಸ್ಟೇಲ್ ಮುಂದೆ ಹಿಂದಿನಿಂದ ಹಾಯಿಸಿ ಅವನಿಗೆ ಕೊಲೆ ಮಾಡಿರುತ್ತಾರೆ ಎಂದು ಒಪ್ಪಿಕೊಂಡಿರುತ್ತಾನೆ.

ಇತರೆ ಆರೋಪಿತರಾದ ಅಲೆಕ್ಸ್ ಗೊಲ್ಲರ, ಷಣ್ಮುಖ ನಡುವಿನಕೇರಿ, ಪ್ರಕಾಶ ಗೊಲ್ಲರ, ಮುರುಗೇಶ ಉಳ್ಳಾಗಡ್ಡಿ ಇವರನ್ನು ಸಹ ಬಂಧಿಸಿ ತನಿಖೆ ಕೈಗೊಳ್ಳಲಾಗಿದೆ. ಕೊಲೆ ಮಾಡುವ ಸಮಯದಲ್ಲಿ ಆ ಗಾಡಿಯಲ್ಲಿ ಅಲೆಕ್ಸ್, ಷಣ್ಮುಖ ಹಾಗೂ ಸದ್ದಾಮ್ ಇದ್ದು ಅಲೆಕ್ಸ್ ಇವನು ಗಾಡಿಯನ್ನು ಓಡಿಸುತ್ತಿದ್ದನು ಎಂದು ತನಿಖೆಯಲ್ಲಿ ದೃಢಪಟ್ಟಿರುತ್ತದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600