Villagers submit petition to Tapam EO: Address lack of infrastructure in Shirola village

ತಾಪಂ ಇಒಗೆ ಗ್ರಾಮಸ್ಥರ ಮನವಿ ಸಲ್ಲಿಕೆ:ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಪರಿಹರಿಸಿ

ತಾಪಂ ಇಒಗೆ ಗ್ರಾಮಸ್ಥರ ಮನವಿ ಸಲ್ಲಿಕೆ:ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಪರಿಹರಿಸಿ

ಮುದ್ದೇಬಿಹಾಳ : ತಾಲ್ಲೂಕಿನ ಕವಡಿಮಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಉಂಟಾಗಿದ್ದು ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಶುಕ್ರವಾರ ತಾಪಂ ಇಒ ನಿಂಗಪ್ಪ ಮಸಳಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ತಾಪಂ ಕಚೇರಿಗೆ ಆಗಮಿಸಿದ್ದ ಗ್ರಾಮಸ್ಥರು ಇಒಗೆ ಮನವಿ ಪತ್ರ ಸಲ್ಲಿಸಿದರು. ಮುಖಂಡ ರಮೇಶ ಬೆಲವಂತ್ರಕAಠಿ ಮಾತನಾಡಿ, ಶಿರೋಳ ಗ್ರಾಮಕ್ಕೆ ಪ್ರಮುಖ ಕುಡಿವ ನೀರಿನ ಮೂಲವಾಗಿರುವ ಬಾವಿ ಪಕ್ಕದ ಹಳ್ಳದ ನೀರಿನ ಜೊತೆ ಸೇರಿ ಕಲುಷಿತಗೊಳ್ಳುತ್ತಿದ್ದು ಅನೇಕ ರೋಗರುಜಿಗಳಿಂದ ಗ್ರಾಮಸ್ಥರು ಬಳಲುವಂತಾಗಿದೆ. ಕೂಡಲೇ ಹಳ್ಳವನ್ನು ಸ್ವಚ್ಛತೆಗೊಳಿಸಲು ಮುಂದಾಗಬೇಕು. ಗ್ರಾಮದಲ್ಲಿನ ಚರಂಡಿಗಳನ್ನು ಕಾಲಕಾಲಕ್ಕೆ ಸ್ವಚ್ಛತೆಗೊಳಿಸುತ್ತಿಲ್ಲ. ಎರಡು ವರ್ಷದ ಹಿಂದೆ ಆರಂಭವಾಗಿರುವ ಜೆಜೆಎಮ್ ಕಾಮಗಾರಿ ಅರ್ಧಕ್ಕೆ ನಿಲ್ಲಿಸಲಾಗಿದ್ದು ಅಗೆದಿರುವ ಗುಂಡಿಗಳಿಂದ ಗ್ರಾಮಸ್ಥರ ಸಂಚಾರಕ್ಕೆ ತೀವ್ರ ತೊಂದರೆಯುಂಟಾಗಿದೆ ಎಂದು ದೂರಿದರು.

ವಾಲ್ಮೀಕಿ ಸಮಾಜದ ಮುಖಂಡ ರಾಮಣ್ಣ ರಾಜನಾಳ ಮಾತನಾಡಿ, ಗ್ರಾಮದ ಆಂಜನೇಯ ದೇವಸ್ಥಾನ ಹಾಗೂ ಅಂಬೇಡ್ಕರ್ ಸರ್ಕಲ್ ಹತ್ತಿರ ಕಸ ಸಂಗ್ರಹ ಮೀತಿ ಮೀರಿದ್ದು ಕ್ರಿಮಿಕೀಟಗಳು ಹೆಚ್ಚಾಗಿವೆ. ಕುಡಿವ ನೀರಿನ ಪೈಪಲೈನ್ ಸೋರಿಕೆ ಹೆಚ್ಚಾಗಿದ್ದು ನೀರು ಪೋಲಾಗುತ್ತಿದೆ. ಕುಡಿವ ನೀರು ಕಲುಷಿತವಾಗಿ ಪೂರೈಕೆಯಾಗುತ್ತಿದ್ದು ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಗಮನ ಹರಿಸುತ್ತಿಲ್ಲ. ಗ್ರಾಮದಲ್ಲಿ ಬೀದಿ ದೀಪ ವ್ಯವಸ್ಥೆ ಸರಿಯಾಗಿಲ್ಲ ಎಂದು ಆರೋಪಿಸಿದರು.

ಮನವಿ ಸ್ವೀಕರಿಸಿದ ತಾಪಂ ಇಒ ನಿಂಗಪ್ಪ ಮಸಳಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಮನವಿ ಸಲ್ಲಿಕೆ ಸಮಯದಲ್ಲಿ ಸಿದ್ದಪ್ಪ ಕುರಿ, ಗ್ರಾಪಂ ಮಾಜಿ ಸದಸ್ಯ ಶಂಕರಗೌಡ ಪಾಟೀಲ, ಶಂಕರಗೌಡ ಹುಣಶ್ಯಾಳ, ಸಿದ್ದಪ್ಪ ಚಿಗರಿ, ಶ್ರೀಕಾಂತ ಹೆಬ್ಬಾಳ, ಸಿದ್ದನಗೌಡ ಲೇಬಗೇರಿ, ಗಂಗಾಧರ ಬಡಿಗೇರ, ಅಕ್ರಮ ಮುದ್ನಾಳ, ಮಲ್ಲಿಕಾರ್ಜುನ ಹೆಬ್ಬಾಳ, ಯಲಗೂರೇಶ ನಾವದಗಿ, ಬಸನಗೌಡ ಬಿರಾದಾರ, ಅಜಯ ಪಾಟೀಲ, ಅಮರೇಶ ಮಾಲೀಪಾಟೀಲ ಮೊದಲಾದವರು ಇದ್ದರು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ