Villagers submit petition to Tapam EO: Address lack of infrastructure in Shirola village

ತಾಪಂ ಇಒಗೆ ಗ್ರಾಮಸ್ಥರ ಮನವಿ ಸಲ್ಲಿಕೆ:ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಪರಿಹರಿಸಿ

ತಾಪಂ ಇಒಗೆ ಗ್ರಾಮಸ್ಥರ ಮನವಿ ಸಲ್ಲಿಕೆ:ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಪರಿಹರಿಸಿ

ಮುದ್ದೇಬಿಹಾಳ : ತಾಲ್ಲೂಕಿನ ಕವಡಿಮಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಉಂಟಾಗಿದ್ದು ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಶುಕ್ರವಾರ ತಾಪಂ ಇಒ ನಿಂಗಪ್ಪ ಮಸಳಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ತಾಪಂ ಕಚೇರಿಗೆ ಆಗಮಿಸಿದ್ದ ಗ್ರಾಮಸ್ಥರು ಇಒಗೆ ಮನವಿ ಪತ್ರ ಸಲ್ಲಿಸಿದರು. ಮುಖಂಡ ರಮೇಶ ಬೆಲವಂತ್ರಕAಠಿ ಮಾತನಾಡಿ, ಶಿರೋಳ ಗ್ರಾಮಕ್ಕೆ ಪ್ರಮುಖ ಕುಡಿವ ನೀರಿನ ಮೂಲವಾಗಿರುವ ಬಾವಿ ಪಕ್ಕದ ಹಳ್ಳದ ನೀರಿನ ಜೊತೆ ಸೇರಿ ಕಲುಷಿತಗೊಳ್ಳುತ್ತಿದ್ದು ಅನೇಕ ರೋಗರುಜಿಗಳಿಂದ ಗ್ರಾಮಸ್ಥರು ಬಳಲುವಂತಾಗಿದೆ. ಕೂಡಲೇ ಹಳ್ಳವನ್ನು ಸ್ವಚ್ಛತೆಗೊಳಿಸಲು ಮುಂದಾಗಬೇಕು. ಗ್ರಾಮದಲ್ಲಿನ ಚರಂಡಿಗಳನ್ನು ಕಾಲಕಾಲಕ್ಕೆ ಸ್ವಚ್ಛತೆಗೊಳಿಸುತ್ತಿಲ್ಲ. ಎರಡು ವರ್ಷದ ಹಿಂದೆ ಆರಂಭವಾಗಿರುವ ಜೆಜೆಎಮ್ ಕಾಮಗಾರಿ ಅರ್ಧಕ್ಕೆ ನಿಲ್ಲಿಸಲಾಗಿದ್ದು ಅಗೆದಿರುವ ಗುಂಡಿಗಳಿಂದ ಗ್ರಾಮಸ್ಥರ ಸಂಚಾರಕ್ಕೆ ತೀವ್ರ ತೊಂದರೆಯುಂಟಾಗಿದೆ ಎಂದು ದೂರಿದರು.

ವಾಲ್ಮೀಕಿ ಸಮಾಜದ ಮುಖಂಡ ರಾಮಣ್ಣ ರಾಜನಾಳ ಮಾತನಾಡಿ, ಗ್ರಾಮದ ಆಂಜನೇಯ ದೇವಸ್ಥಾನ ಹಾಗೂ ಅಂಬೇಡ್ಕರ್ ಸರ್ಕಲ್ ಹತ್ತಿರ ಕಸ ಸಂಗ್ರಹ ಮೀತಿ ಮೀರಿದ್ದು ಕ್ರಿಮಿಕೀಟಗಳು ಹೆಚ್ಚಾಗಿವೆ. ಕುಡಿವ ನೀರಿನ ಪೈಪಲೈನ್ ಸೋರಿಕೆ ಹೆಚ್ಚಾಗಿದ್ದು ನೀರು ಪೋಲಾಗುತ್ತಿದೆ. ಕುಡಿವ ನೀರು ಕಲುಷಿತವಾಗಿ ಪೂರೈಕೆಯಾಗುತ್ತಿದ್ದು ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಗಮನ ಹರಿಸುತ್ತಿಲ್ಲ. ಗ್ರಾಮದಲ್ಲಿ ಬೀದಿ ದೀಪ ವ್ಯವಸ್ಥೆ ಸರಿಯಾಗಿಲ್ಲ ಎಂದು ಆರೋಪಿಸಿದರು.

ಮನವಿ ಸ್ವೀಕರಿಸಿದ ತಾಪಂ ಇಒ ನಿಂಗಪ್ಪ ಮಸಳಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಮನವಿ ಸಲ್ಲಿಕೆ ಸಮಯದಲ್ಲಿ ಸಿದ್ದಪ್ಪ ಕುರಿ, ಗ್ರಾಪಂ ಮಾಜಿ ಸದಸ್ಯ ಶಂಕರಗೌಡ ಪಾಟೀಲ, ಶಂಕರಗೌಡ ಹುಣಶ್ಯಾಳ, ಸಿದ್ದಪ್ಪ ಚಿಗರಿ, ಶ್ರೀಕಾಂತ ಹೆಬ್ಬಾಳ, ಸಿದ್ದನಗೌಡ ಲೇಬಗೇರಿ, ಗಂಗಾಧರ ಬಡಿಗೇರ, ಅಕ್ರಮ ಮುದ್ನಾಳ, ಮಲ್ಲಿಕಾರ್ಜುನ ಹೆಬ್ಬಾಳ, ಯಲಗೂರೇಶ ನಾವದಗಿ, ಬಸನಗೌಡ ಬಿರಾದಾರ, ಅಜಯ ಪಾಟೀಲ, ಅಮರೇಶ ಮಾಲೀಪಾಟೀಲ ಮೊದಲಾದವರು ಇದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ