Villagers submit petition to Tapam EO: Address lack of infrastructure in Shirola village

ತಾಪಂ ಇಒಗೆ ಗ್ರಾಮಸ್ಥರ ಮನವಿ ಸಲ್ಲಿಕೆ:ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಪರಿಹರಿಸಿ

ತಾಪಂ ಇಒಗೆ ಗ್ರಾಮಸ್ಥರ ಮನವಿ ಸಲ್ಲಿಕೆ:ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಪರಿಹರಿಸಿ

ಮುದ್ದೇಬಿಹಾಳ : ತಾಲ್ಲೂಕಿನ ಕವಡಿಮಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಉಂಟಾಗಿದ್ದು ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಶುಕ್ರವಾರ ತಾಪಂ ಇಒ ನಿಂಗಪ್ಪ ಮಸಳಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ತಾಪಂ ಕಚೇರಿಗೆ ಆಗಮಿಸಿದ್ದ ಗ್ರಾಮಸ್ಥರು ಇಒಗೆ ಮನವಿ ಪತ್ರ ಸಲ್ಲಿಸಿದರು. ಮುಖಂಡ ರಮೇಶ ಬೆಲವಂತ್ರಕAಠಿ ಮಾತನಾಡಿ, ಶಿರೋಳ ಗ್ರಾಮಕ್ಕೆ ಪ್ರಮುಖ ಕುಡಿವ ನೀರಿನ ಮೂಲವಾಗಿರುವ ಬಾವಿ ಪಕ್ಕದ ಹಳ್ಳದ ನೀರಿನ ಜೊತೆ ಸೇರಿ ಕಲುಷಿತಗೊಳ್ಳುತ್ತಿದ್ದು ಅನೇಕ ರೋಗರುಜಿಗಳಿಂದ ಗ್ರಾಮಸ್ಥರು ಬಳಲುವಂತಾಗಿದೆ. ಕೂಡಲೇ ಹಳ್ಳವನ್ನು ಸ್ವಚ್ಛತೆಗೊಳಿಸಲು ಮುಂದಾಗಬೇಕು. ಗ್ರಾಮದಲ್ಲಿನ ಚರಂಡಿಗಳನ್ನು ಕಾಲಕಾಲಕ್ಕೆ ಸ್ವಚ್ಛತೆಗೊಳಿಸುತ್ತಿಲ್ಲ. ಎರಡು ವರ್ಷದ ಹಿಂದೆ ಆರಂಭವಾಗಿರುವ ಜೆಜೆಎಮ್ ಕಾಮಗಾರಿ ಅರ್ಧಕ್ಕೆ ನಿಲ್ಲಿಸಲಾಗಿದ್ದು ಅಗೆದಿರುವ ಗುಂಡಿಗಳಿಂದ ಗ್ರಾಮಸ್ಥರ ಸಂಚಾರಕ್ಕೆ ತೀವ್ರ ತೊಂದರೆಯುಂಟಾಗಿದೆ ಎಂದು ದೂರಿದರು.

ವಾಲ್ಮೀಕಿ ಸಮಾಜದ ಮುಖಂಡ ರಾಮಣ್ಣ ರಾಜನಾಳ ಮಾತನಾಡಿ, ಗ್ರಾಮದ ಆಂಜನೇಯ ದೇವಸ್ಥಾನ ಹಾಗೂ ಅಂಬೇಡ್ಕರ್ ಸರ್ಕಲ್ ಹತ್ತಿರ ಕಸ ಸಂಗ್ರಹ ಮೀತಿ ಮೀರಿದ್ದು ಕ್ರಿಮಿಕೀಟಗಳು ಹೆಚ್ಚಾಗಿವೆ. ಕುಡಿವ ನೀರಿನ ಪೈಪಲೈನ್ ಸೋರಿಕೆ ಹೆಚ್ಚಾಗಿದ್ದು ನೀರು ಪೋಲಾಗುತ್ತಿದೆ. ಕುಡಿವ ನೀರು ಕಲುಷಿತವಾಗಿ ಪೂರೈಕೆಯಾಗುತ್ತಿದ್ದು ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಗಮನ ಹರಿಸುತ್ತಿಲ್ಲ. ಗ್ರಾಮದಲ್ಲಿ ಬೀದಿ ದೀಪ ವ್ಯವಸ್ಥೆ ಸರಿಯಾಗಿಲ್ಲ ಎಂದು ಆರೋಪಿಸಿದರು.

ಮನವಿ ಸ್ವೀಕರಿಸಿದ ತಾಪಂ ಇಒ ನಿಂಗಪ್ಪ ಮಸಳಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಮನವಿ ಸಲ್ಲಿಕೆ ಸಮಯದಲ್ಲಿ ಸಿದ್ದಪ್ಪ ಕುರಿ, ಗ್ರಾಪಂ ಮಾಜಿ ಸದಸ್ಯ ಶಂಕರಗೌಡ ಪಾಟೀಲ, ಶಂಕರಗೌಡ ಹುಣಶ್ಯಾಳ, ಸಿದ್ದಪ್ಪ ಚಿಗರಿ, ಶ್ರೀಕಾಂತ ಹೆಬ್ಬಾಳ, ಸಿದ್ದನಗೌಡ ಲೇಬಗೇರಿ, ಗಂಗಾಧರ ಬಡಿಗೇರ, ಅಕ್ರಮ ಮುದ್ನಾಳ, ಮಲ್ಲಿಕಾರ್ಜುನ ಹೆಬ್ಬಾಳ, ಯಲಗೂರೇಶ ನಾವದಗಿ, ಬಸನಗೌಡ ಬಿರಾದಾರ, ಅಜಯ ಪಾಟೀಲ, ಅಮರೇಶ ಮಾಲೀಪಾಟೀಲ ಮೊದಲಾದವರು ಇದ್ದರು.

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ